ತೆಲುಗು ಸಿನಿಮಾರಂಗದ ಜನಪ್ರಿಯ ಡಬ್ಬಿಂಗ್ ಕಲಾವಿದ ಶ್ರೀನಿವಾಸ ಮೂರ್ತಿ ಹೃದಯಾಘಾತದಿಂದ ನಿಧನ
ಸೂರ್ಯ, ಅಜಿತ್ ಸಿನಿಮಾಗಳಿಗೆ ಇವರದೇ ವಾಯ್ಸ್ ಬೇಕಿತ್ತು.
Team Udayavani, Jan 27, 2023, 3:12 PM IST
ಚೆನ್ನೈ: ಟಾಲಿವುಡ್ ನ ಖ್ಯಾತ ಡಬ್ಬಿಂಗ್ ಕಲಾವಿದ ಶ್ರೀನಿವಾಸ ಮೂರ್ತಿ ಹೃದಯಾಘಾತದಿಂದ ಶುಕ್ರವಾರ (ಜ.27 ರಂದು) ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
1990ರ ದಶಕದ ಆರಂಭದಲ್ಲಿ ಅರ್ಜುನ್ ಸರ್ಜಾ ಅವರ ʼಒಕೇ ಒಕ್ಕಡುʼ ಸಿನಿಮಾಕ್ಕೆ ತೆಲುಗಿನಲ್ಲಿ ವಾಯ್ಸ್ ಕೊಟ್ಟ ಶ್ರೀನಿವಾಸ್ ಆ ಬಳಿಕ ಸಾಲು ಸಾಲು ಚಿತ್ರಗಳಿಗೆ ತೆಲುಗಿನಲ್ಲಿ ವಾಯ್ಸ್ ಡಬ್ ಮಾಡಿದ್ದಾರೆ.
ನಟ ಸೂರ್ಯ ಅವರ ʼಸಿಂಗಂʼ ಸರಣಿಯ ಚಿತ್ರಗಳಿಗೆ ತೆಲುಗಿಗೆ ವಾಯ್ಸ್ ಡಬ್ ಮಾಡಿ ಜನಪ್ರಿಯತೆಯನ್ನು ಹೆಚ್ಚಿಸಿಕೊಂಡು, ನಟ ಅಜಿತ್ ಅವರ ʼವಿಶ್ವಾಸಂʼ, ಮೋಹನ್ ಲಾಲ್ ಅವರ ʼಜನತಾ ಗ್ಯಾರೇಜ್ʼ ವಿಕ್ರಂ ಅವರ ಸಿನಿಮಾಗಳಿಗೆ ಹೀಗೆ ಸಾವಿರಕ್ಕೂ ಹೆಚ್ಚಿನ ಸಿನಿಮಾಗಳಿಗೆ ತೆಲುಗಿನಲ್ಲಿ ಧ್ವನಿ ಕೊಟ್ಟಿದ್ದಾರೆ.
ಕನ್ನಡದ ಉಪೇಂದ್ರ ಅವರ ಧ್ವನಿಗೆ ತೆಲುಗಿನಲ್ಲಿ ಶ್ರೀನಿವಾಸ್ ಅವರು ಡಬ್ ಮಾಡುತ್ತಿದ್ದರು. ಇದಲ್ಲದೇ ಹಾಲಿವುಡ್ ನ ಸಿನಿಮಾಗಳಿಗೆ ತೆಲುಗಿನಲ್ಲಿ ವಾಯ್ಸ್ ಡಬ್ ನೀಡುತ್ತಿದ್ದರು.
ಇತ್ತೀಚೆಗೆ ʼ ರಾಕೆಟ್ರಿ: ನಂಬಿ ಎಫೆಕ್ಟ್ʼ ಸಿನಿಮಾಕ್ಕೆ ತೆಲುಗಿನಲ್ಲಿ ಡಬ್ಬಿಂಗ್ ಮಾಡಿದ್ದರು. ನೆಗೆಟಿವ್ ರೋಲ್ ಕೆಲ ಪಾತ್ರಗಳಿಗೆ ವಾಯ್ಸ್ ನೀಡುತ್ತಿದ್ದರು. ಡಬ್ಬಿಂಗ್ ಮಾತ್ರವಲ್ಲದೇ ಕೆಲ ತೆಲುಗು ಸಿನಿಮಾಗಳಲ್ಲಿ ನಟನಾಗಿಯೂ ಗುರುತಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ