Pan India: ನಂದ ಕಿಶೋರ್- ಮೋಹನ್ ಲಾಲ್ ʼವೃಷಭʼಕ್ಕೆ ಏಕ್ತಾ ಕಪೂರ್ ಸಾಥ್; ಬಜೆಟ್ ಎಷ್ಟು?
Team Udayavani, Jul 3, 2023, 1:08 PM IST
ಮುಂಬಯಿ: ಕಿರುತೆರೆ ಸ್ಟಾರ್ ನಿರ್ಮಾಪಕಿ ಏಕ್ತಾ ಕಪೂರ್ ಇದೇ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಸಿನಿಮಾವೊಂದನ್ನು ನಿರ್ಮಿಸಲು ರೆಡಿಯಾಗಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಅನೌನ್ಸ್ ಮಾಡಿದ್ದಾರೆ.
ಬಾಲಾಜಿ ಟೆಲಿಫಿಲ್ಮ್ಸ್ ಮೂಲಕ ಬಾಲಿವುಡ್ ನಲ್ಲಿ ಹಾಗೂ ಕಿರುತೆರೆಯಲ್ಲಿ ಅನೇಕ ಸಿನಿಮಾ/ ಧಾರಾವಾಹಿಗಳಿಗೆ ಬಂಡವಾಳವನ್ನು ಹಾಕಿರುವ ಏಕ್ತಾ ಕಪೂರ್ ಇದೇ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಸಿನಿಮಾಕ್ಕೆ ಬಂಡವಾಳವನ್ನು ಹಾಕಲಿದ್ದಾರೆ. ಈ ಸಿನಿಮಾದಲ್ಲಿ ಮಲಯಾಳಂ ಚಿತ್ರರಂಗದ ದಿಗ್ಗಜ ನಟ ಮೋಹನ್ ಲಾಲ್ ಅವರು ನಟಿಸಲಿದ್ದಾರೆ. ಈ ಸಿನಿಮಾ 200 ಕೋಟಿ ರೂ. ಬಜೆಟ್ ನಲ್ಲಿ ನಿರ್ಮಾಣವಾಗಲಿದೆ ಎಂದು ವರದಿಯೊಂದು ತಿಳಿಸಿದೆ.
“ದಿಗ್ಗಜ ನಟ ಮೋಹನ್ಲಾಲ್ ಅವರೊಂದಿಗೆ ಕೆಲಸ ಮಾಡಲು ತುಂಬಾ ಉತ್ಸುಕರಾಗಿದ್ದೇನೆ. ಬಾಲಾಜಿ ಟೆಲಿಫಿಲ್ಮ್ಸ್,ಕನೆಕ್ಟ್ ಮೀಡಿಯಾ ಮತ್ತು ಎವಿಎಸ್ ಸ್ಟುಡಿಯೋಸ್ ʼ ವೃಷಭʼಕ್ಕಾಗಿ ಜೊತೆಯಾಗಲಿದೆ. ಹೆಚ್ಚಿನ ಎಮೋಷನ್ಸ್ ಮತ್ತು ವಿಎಫ್ ಎಕ್ಸ್ ಗಳೊಂದಿಗೆ ಸಿನಿಮಾಆಕ್ಷನ್ ಎಂಟರ್ಟೈನರ್ ಆಗಿರಲಿದೆ. ʼವೃಷಭʼ 2024 ರ ಅತಿದೊಡ್ಡ ಚಲನಚಿತ್ರಗಳಲ್ಲಿ ಹೇಳಲಾಗಿದೆ. ಈ ಸಿನಿಮಾವನ್ನು ನಂದ ಕಿಶೋರ್ ನಿರ್ದೇಶನ ಮಾಡಲಿದ್ದಾರೆ. ಮಲಯಾಳಂ, ತೆಲುಗು, ಕನ್ನಡ, ತಮಿಳು ಮತ್ತು ಹಿಂದಿಯಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ” ಎಂದು ಏಕ್ತಾ ಕಪೂರ್ ಮೋಹನ್ ಲಾಲ್ ಹಾಗೂ ಜಿತೇಂದ್ರ ಅವರೊಂದಿಗೆ ನಿಂತುಕೊಂಡಿರುವ ಫೋಟೋವನು ಹಂಚಿಕೊಂಡು ವಿಚಾರವನ್ನು ಹೇಳಿದ್ದಾರೆ.
ಕನ್ನಡದಲ್ಲಿ ʼಆಧ್ಯಕ್ಷʼ ʼವಿಕ್ಟರಿʼ,ʼ ರನ್ನʼ ಮುಂತಾದ ಸಿನಿಮಾಗಳನ್ನು ಮಾಡಿ ಸೈ ಎನ್ನಿಸಿಕೊಂಡಿರುವ ನಂದ ಕಿಶೋರ್ ಮೊದಲ ಬಾರಿ ಪ್ಯಾನ್ ಇಂಡಿಯಾ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ.
ಏಕ್ತಾ ಕಪೂರ್ ಸದ್ಯ ʼ ದಿ ಕ್ರ್ಯೂʼ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದಲ್ಲಿ ಕೃತಿ ಸನೋನ್, ಕರೀನಾ ಕಪೂರ್ ಖಾನ್ ಮತ್ತು ಟಬು ಅವರು ನಟಿಸಿದ್ದಾರೆ. ರಾಜೇಶ್ ಕೃಷ್ಣನ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.
ಮೋಹನ್ ಲಾಲ್ ʼಲೂಸಿಫರ್ 2ʼ, ʼಮಲೈಕೊಟ್ಟೈ ವಾಲಿಬನ್ʼ ಸಿನಿಮಾಗಳಲ್ಲಿ ಮುಂದೆ ಕಾಣಿಸಿಕೊಳ್ಳಲಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು