Tragedy ನಡೆದ ಸೂರಣಗಿ ಗ್ರಾಮಕ್ಕೆ ಬಂದ ಯಶ್; ಆಕ್ರಂದನ ಕಂಡು ಭಾವುಕ
ಸ್ಥಳದಲ್ಲಿ ಜಮಾಯಿಸಿದ ಸಾವಿರಾರು ಜನರು , ಬಿಗಿ ಭದ್ರತೆ
Team Udayavani, Jan 8, 2024, 7:09 PM IST
ಗದಗ : ಜನ್ಮ ದಿನದ ಸಂಭ್ರಮದಲ್ಲಿ ಸಿಹಿ ಹಂಚಿ ಸಂಭ್ರಮಿಸಬೇಕಾಗಿದ್ದ ರಾಕಿಂಗ್ ಸ್ಟಾರ್ ಯಶ್ ಅವರು ಮೂವರು ಅಭಿಮಾನಿಗಳ ನಿಧನದಿಂದ ನೊಂದು, ಸೂತಕದ ಮನೆಗಳಲ್ಲಿ ಭಾವುಕರಾಗಬೇಕಾದ ಪ್ರಸಂಗ ಸೋಮವಾರ ಬಂದೊದಗಿತು.
ಯಶ್ ಅವರ ಫೋಟೋವಿದ್ದ ಜನ್ಮ ದಿನದ ಶುಭಾಶಯ ಕೋರುವ ಕಬ್ಬಿಣದ ರಾಡ್ ಗಳಿದ್ದ ಬೃಹತ್ ಕಟೌಟ್ ಗೆ ವಿದ್ಯುತ್ ತಂತಿ ತಗುಲಿ ಮೂವರು ಮೃತಪಟ್ಟ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿಗೆ ಸೋಮವಾರ ಸಂಜೆ ನಟ ಯಶ್ ಅವರು ದೌಡಾಯಿಸಿದರು. ಈ ವೇಳೆ ವ್ಯಾಪಕ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು.
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಪೊಲೀಸರ ಸಹಕಾರದೊಂದಿಗೆ ಗ್ರಾಮಕ್ಕೆ ಆಗಮಿಸಿದ ನಟ ಯಶ್, ಮೃತ ಮೂವರೂ ಅಭಿಮಾನಿಗಳ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುತ್ತಿಟ್ಟು. ಎಲ್ಲರ ಕಣ್ಣೀರು ಕಂಡು ಯಶ್ ಭಾವುಕರಾಗಿ ಮೌನರಾದರು.
ಗ್ರಾಮದ 10 ಕ್ಕೂ ಹೆಚ್ಚಿನ ಯುವಕರು ಯಶ್ ಜನ್ಮದಿನದ ಅಂಗವಾಗಿ ಕಟೌಟ್ ನಿಲ್ಲಿಸಲು ಮುಂದಾಗಿದ್ದ ವೇಳೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿದ ಪರಿಣಾಮ ಸೂರಣಗಿ ಗ್ರಾಮದ ಹನುಮಂತ ಮಜ್ಜುರಪ್ಪ ಹರಿಜನ(21), ಮುರಳಿ ನೀಲಪ್ಪ ನಡವಿನಮನಿ(20), ನವೀನ ನೀಲಪ್ಪ ಗಾಜಿ(19) ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ