ಮೇಲ್ಮನವಿ ನ್ಯಾಯಾಧೀಕರಣ ರದ್ದು, ಕೇಂದ್ರದ ವಿರುದ್ಧ ಚಿತ್ರರಂಗ ಆಕ್ರೋಶ: ಏನಿದು FCAT
ಸಿಬಿಎಫ್ ಸಿ ನಿರ್ಧಾರದ ಬಗ್ಗೆ ಎಫ್ ಸಿಎಟಿ ಬದಲು ಹೈಕೋರ್ಟ್ ಮೆಟ್ಟಿಲೇರಬೇಕಾಗುತ್ತದೆ.
Team Udayavani, Apr 7, 2021, 4:05 PM IST
ನವದೆಹಲಿ: ಕೇಂದ್ರದ ನ್ಯಾಯ ಮತ್ತು ಕಾನೂನು ಸಚಿವಾಲಯ ಚಲನಚಿತ್ರ ಪ್ರಮಾಣೀಕೃತ ಮೇಲ್ಮನವಿ ನ್ಯಾಯಾಧೀಕರಣ(ಎಫ್ ಸಿಎಟಿ)ವನ್ನು ರದ್ದುಗೊಳಿಸಿದ್ದು, ಈ ನಿರ್ಧಾರದ ಬಗ್ಗೆ ಚಲನಚಿತ್ರರಂಗದ ಹಲವರು ತೀವ್ರ ಆಕ್ಷೇಪ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮ್ಯಾನೇಜರ್ ಕೂಡಿ ಹಾಕಿ ಕೆಲಸ ಮಾಡುವಂತೆ ಬೆದರಿಸಿದ್ದಾರೆ: ಉಡುಪಿಯ ಸಾರಿಗೆ ನೌಕರ ಕಣ್ಣೀರು
ಸಿನಿಮಾದ ಪ್ರಮಾಣಪತ್ರ ಕುರಿತು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್ ಸಿ) ಆದೇಶವನ್ನು ಪ್ರಶ್ನಿಸಿ ಚಲನಚಿತ್ರ ಪ್ರಮಾಣೀಕೃತ ಮೇಲ್ಮನವಿ ನ್ಯಾಯಾಧೀಕರಣಕ್ಕೆ ಮೇಲ್ಮನವಿ ಸಲ್ಲಿಸಬಹುದಾಗಿತ್ತು. ಆದರೆ ಕೂಡಲೇ ಜಾರಿಗೆ ಬರುವಂತೆ ಕಾನೂನು ಸಚಿವಾಲಯ ಸುಗ್ರೀವಾಜ್ಞೆ ಹೊರಡಿಸಿ ಎಫ್ ಸಿಎಟಿಯನ್ನು ರದ್ದುಗೊಳಿಸಿದೆ ಎಂದು ವರದಿ ತಿಳಿಸಿದೆ.
ಸಿಬಿಎಫ್ ಸಿಯಲ್ಲಿ ಪ್ರಮಾಣಪತ್ರ ನಿರಾಕರಿಸಲ್ಪಟ್ಟ ಸಂದರ್ಭದಲ್ಲಿ ನ್ಯಾಯಾಧೀಕರಣದಲ್ಲಿ ಈ ಬಗ್ಗೆ ಮರುಪರಿಶೀಲಿಸಲು ಮೇಲ್ಮನವಿ ಸಲ್ಲಿಸಲು ಅವಕಾಶ ಇತ್ತು. ಆದರೆ ಇನ್ಮುಂದೆ ಚಿತ್ರದ ನಿರ್ಮಾಪಕರು ಸಿಬಿಎಫ್ ಸಿ ನಿರ್ಧಾರದ ಬಗ್ಗೆ ಎಫ್ ಸಿಎಟಿ ಬದಲು ಹೈಕೋರ್ಟ್ ಮೆಟ್ಟಿಲೇರಬೇಕಾಗುತ್ತದೆ.
1983ರಲ್ಲಿ ನವೆದೆಹಲಿಯಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿ 1952ರ ಸಿನಿಮಾಟೋಗ್ರಫಿ ಕಾಯ್ದೆಯ ಸೆಕ್ಷನ್ 5ರ ಅಡಿ ಎಫ್ ಸಿಎಟಿ ಸಂಸ್ಥೆ ಸ್ಥಾಪನೆಯಾಗಿತ್ತು. ಎಫ್ ಸಿಎಟಿಯಲ್ಲಿ ಅಧ್ಯಕ್ಷರು, ನಾಲ್ವರು ಸದಸ್ಯರು ಹಾಗೂ ಒಬ್ಬ ಕಾರ್ಯದರ್ಶಿಯನ್ನು ಒಳಗೊಂಡಿದೆ.
Do the high courts have a lot of time to address film certification grievances? How many film producers will have the means to approach the courts? The FCAT discontinuation feels arbitrary and is definitely restrictive. Why this unfortunate timing? Why take this decision at all?
— Hansal Mehta (@mehtahansal) April 7, 2021
ಕೇಂದ್ರ ಸಚಿವಾಲಯದ ಈ ನಿರ್ಧಾರದ ಬಗ್ಗೆ ಬಾಲಿವುಡ್ ನ ಹನ್ಸಾಲ್ ಮೆಹ್ತಾ, ವಿಶಾಲ್ ಭಾರದ್ವಾಜ್, ಗುಣೀತ್ ಮೋಂಗಾ, ರಿಚಾ ಚಡ್ಡಾ ಸೇರಿದಂತೆ ಹಲವರು ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿದ್ದಾರೆ ಎಂದು ವರದಿ ತಿಳಿಸಿದೆ.
Such a sad day for cinema
FILM CERTIFICATION APPELLATE TRIBUNAL ABOLISHED | 6 April, 2021
— Vishal Bhardwaj (@VishalBhardwaj) April 6, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sikandar Movie: ಸಲ್ಮಾನ್ ಖಾನ್ ʼಸಿಕಂದರ್ʼಗೆ ರಶ್ಮಿಕಾ ಮಂದಣ್ಣ ನಾಯಕಿ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
Arrested: ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ
Housefull 5: ಕಾಮಿಡಿ ಜರ್ನಿಯ ʼಹೌಸ್ ಫುಲ್ʼ ಕುಟುಂಬಕ್ಕೆ ಅಭಿಷೇಕ್ ಬಚ್ಚನ್ ಎಂಟ್ರಿ
MUST WATCH
ಹೊಸ ಸೇರ್ಪಡೆ
Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ
Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ
Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ
Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ
Dhruva Sarja ಮಾರ್ಟಿನ್ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್ ಮೆಹ್ತಾ