ಗೋವಾ ಇಫಿ ಚಿತ್ರೋತ್ಸವ; ಎನ್‌ಎಫ್‌ಡಿಸಿ ಯ ಫಿಲ್ಮ್‌ ಬಜಾರ್‌ಗೆ ಚಾಲನೆ


Team Udayavani, Nov 21, 2019, 2:00 PM IST

film-bazaar-blog-1

ಪಣಜಿ(ಉದಯವಾಣಿ ಪ್ರತಿನಿಧಿಯಿಂದ): ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವದ ಸುವರ್ಣ ಸಂಭ್ರಮದ ಜತೆಗೇ ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ [ಎನ್‌ಎಫ್‌ಡಿಸಿ] ಹಮ್ಮಿಕೊಂಡಿರುವ 13 ನೇ ವರ್ಷದ ಚಲನಚಿತ್ರಸಂತೆ [ಫಿಲ್ಮ್‌ ಬಜಾರ್‌] ಬುಧವಾರ ಉದ್ಘಾಟನೆಗೊಂಡಿತು.

ಏಷ್ಯಾದ ಅತಿದೊಡ್ಡ ಚಲನಚಿತ್ರ ಸಂತೆಯಾದ ಫಿಲ್ಮ್‌ ಬಜಾರ್‌ ಪ್ರತಿ ವರ್ಷ ಇಫಿ ಚಿತ್ರೋತ್ಸವದೊಂದಿಗೆ ನಡೆಯುತ್ತದೆ. ಇದನ್ನು ಎನ್‌ಎಫ್‌ಡಿಸಿ ಸಂಘಟಿಸುತ್ತಿದೆ. ಈ ಬಾರಿ ಉತ್ಸವಕ್ಕೆ ಹೊಸದಾಗಿ ಸೇರ್ಪಡೆಗೊಂಡಿರುವುದೆಂದರೆ ಕೌಶಲ ಕಾರ್ಯಾಗಾರ, ಚಿತ್ರ ನಿರ್ಮಾಪಕರ ಕಾರ್ಯಾಗಾರ.

ನ. 24 ವೆರೆಗೂ ನಡೆಯುವ ಚಲನಚಿತ್ರ ಸಂತೆಯಲ್ಲಿ ವಿಶಾಲ್‌ ಭಾರದ್ವಾಜ್‌, ಅದಿಲ್‌ ಹುಸೇನ್‌, ಸೌಂದರ್ಯ ರಜನೀಕಾಂತ್‌, ಪ್ರಸೂನ್‌ ಜೋಷಿ, ಸಿದ್ಧಾರ್ಥ ರಾಯ್‌ ಕಪೂರ್‌, ಮೇಘನಾ ಗುಲ್ಜಾರ್‌, ವಾಣಿ ತ್ರಿಪಾಠಿ ಟಿಕೂ ಮತ್ತಿತರರು ವಿವಿಧ ಕಾರ್ಯಾಗಾರ, ಉಪನ್ಯಾಸಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಸಹ ನಿರ್ಮಾಣ ಯೋಜನೆಯಲ್ಲಿ 14 ಸಿನಿಮಾಗಳು, ಪ್ರಗತಿಯಲ್ಲಿರುವ 5 ಸಿನಿಮಾಗಳು ಹಾಗೂ ಫಿಲ್ಮ್‌ ಬಜಾರ್‌ನ ಶಿಫಾರಸಿನ 26 ಸಿನಿಮಾಗಳ ಬಗೆಗೂ ಚರ್ಚೆ ನಡೆಯಲಿದೆ. 30 ಕ್ಕೂ ಹೆಚ್ಚು ಭಾಷೆಗಳ 213 ಚಲನಚಿತ್ರಗಳು ವ್ಯೂವಿಂಗ್‌ ರೂಮ್‌ನಲ್ಲಿ ನೋಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಕನ್ನಡದ ಆರು ಚಿತ್ರಗಳು ಇದರಲ್ಲಿ ಸೇರಿವೆ. ಇದರೊಂದಿಗೆ ಗೋಂಡಿ, ಬೋಡೊ, ಗೋಜ್ರಿ ಹಾಗೂ ಗಾಲೋ ಭಾಷೆಯ ಚಿತ್ರಗಳು ಸೇರಿರುವುದು ವಿಶೇಷ.

ಈ ಪೈಕಿ 154 ಕಥಾ ಚಿತ್ರಗಳಾಗಿದ್ದು, 59 ಕಿರುಚಿತ್ರಗಳು. 89 ಮಂದಿಯ ಚೊಚ್ಚಲ ಚಿತ್ರಗಳು ಈ ಪಟ್ಟಿಯಲ್ಲಿವೆ.

ಕೌಶಲ ಕಾರ್ಯಾಗಾರದ ಮೂಲಕ ಯುವ ಸಿನಿಮಾ ನಿರ್ದೇಶಕರ ಸಬಲೀಕರಣದ ಬಗ್ಗೆ ಪ್ರಸೂನ್‌ ಜೋಷಿ, ಸಿದ್ಧಾರ್ಥ ರಾಯ್‌ ಕಪೂರ್‌ ಮಾತನಾಡಿದರೆ, ವಾಣಿ ತ್ರಿಪಾಠಿ ಟಿಕೂ ಬಾಹುಬಲಿ ಚಿತ್ರದ ನಿರ್ಮಾಪಕಿ ಶೋಬು ಯರ್ಲಗಡ್ಡ ಅವರೊಂದಿಗೆ ಸಂವಾದ ನಡೆಸುವರು. ಸೌಂದರ್ಯ ರಜನೀಕಾಂತ್‌ ಮತ್ತು ನಂದಿತಾ ರಾಯ್‌ ಭಾರತೀಯ ಸಿನಿಮಾದಲ್ಲಿ ಬದಲಾಗುತ್ತಿರುವ ಮಹಿಳೆಯ ಪಾತ್ರ ಕುರಿತು ಮಾತನಾಡುವರು.

ಕೌಶಲ ಕಾರ್ಯಾಗಾರದಲ್ಲಿ ಅದಿಲ್‌ ಹುಸೇನ್‌. ಮೇಘನಾ ಗುಲ್ಜಾರ್‌, ಪುನೀತ್‌ ಕೃಷ್ಣ, ರಾಜೀ ವ್‌ ಕೃಷ್ಣ ಮೆನನ್‌, ಸುಭಾಷ್‌ ಘಾಯ್‌ ಮತ್ತಿತರರು ಪಾಲ್ಗೊಳ್ಳುವರು.

ಪ್ರಗತಿಯಲ್ಲಿರುವ ಚಿತ್ರಗಳ ವಿಭಾಗದಲ್ಲಿ ನಿರ್ಮಾಣದ ಹಂತದಲ್ಲಿರುವ ಚಿತ್ರಗಳನ್ನು ನಿರ್ದೇಶಕರು ಆಸಕ್ತ ನಿರ್ಮಾಪಕರಿಗೆ ಪ್ರದರ್ಶಿಸಲೂ ಅವಕಾಶವಿದೆ. ಈ ಬಾರಿಯ ಚಿತ್ರ ನಿರ್ಮಾಪಕರ ಕಾರ್ಯಾಗಾರಕ್ಕೆ ಅಮೆರಿಕ, ಶ್ರೀಲಂಕಾ, ಬಾಂಗ್ಲಾದೇಶ್‌, ತೈವಾನ್‌ ಮತ್ತು ಭಾರತದ ೨೦ ಯೋಜನೆಗಳು ಆಯ್ಕೆಯಾಗಿವೆ. ಇದರೊಂದಿಗೆ ಸಹ ನಿರ್ಮಾಣ ಯೋಜನೆಯಡಿಯೂ ಭಾರತ, ಭೂತಾನ್‌. ಬಾಂಗ್ಲಾದೇಶ, ಫ್ರಾನ್ಸ್‌, ನೇಪಾಳ್‌ ಸಿಂಗಾಪುರ ಸೇರಿದಂತೆ ೧೪ ಯೋಜನೆಗಳು ಆಯ್ಕೆಯಾಗಿದ್ದು, ಹಿಂದಿ, ಇಂಗ್ಲಿಷ್‌, ಮಲಯಾಲಂ, ಬಂಗಾಳಿ, ಅಸ್ಸಾಮಿ, ನೇಪಾಳಿ, ಗುಜರಾತಿ, ಭೂತಾನೀಸ್‌ ಭಾಷೆಯ ಪ್ರತಿಭಾವಂತ ನಿರ್ದೇಶಕರು ಇದರಲ್ಲಿ ಪಾಲ್ಗೊಳ್ಳಲು ಅವಕಾಶ ಪಡೆದಿದ್ದಾರೆ.

ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಪ್ರಕಾಶ್‌ ಜಾವಡೇಕರ್‌ ಈ ವರ್ಷದ ಉತ್ಸವಕ್ಕೆ ಚಾಲನೆ ನೀಡಿದರು. ಅವರೊಂದಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌, ಕೇಂದ್ರ ಪರಿಸರ ರಾಜ್ಯ ಸಚಿವ ಬಬುಲ್‌ ಸುಪ್ರಿಯೊ, ಎನ್‌ಎಫ್ಡಿಸಿ ಯ ಎಂಡಿ ಟಿಸಿಎ ಕಲ್ಯಾಣಿ ಮತ್ತಿತರರು ಭಾಗವಹಿಸಿದ್ದರು.

ಕರ್ನಾಟಕ, ಲಕ್ಷದ್ವೀಪ್‌, ಮಧ್ಯಪ್ರದೇಶ, ಒರಿಸ್ಸಾ, ಉತ್ತರಾಖಂಡ್‌, ಉತ್ತರ ಪ್ರದೇಶ, ದಿಲ್ಲಿ, ರಾಜಸ್ಥಾನ ಮತ್ತಿತರ 12 ರಾಜ್ಯಗಳ ಇಲಾಖೆಗಳು ಈ ಸಂತೆಯಲ್ಲಿ ಭಾಗವಹಿಸಿವೆ. ಫಿಲ್ಮ್‌ ಬಜಾರ್‌ ಎನ್‌ಎಫ್‌ಡಿಸಿ ಸಂಘಟಿಸುತ್ತಿರುವ ವೇದಿಕೆ. ಚಿತ್ರ ನಿರ್ದೇಶಕರು, ನಿರ್ಮಾಪಕರು, ಚಿತ್ರ ಏಜೆಂಟರು, ವಿತರಕರು, ಚಿತ್ರೋತ್ಸವ ಸಂಘಟಕರ ವಿಚಾರ ವಿನಿಮಯಕ್ಕೆ ಕಲ್ಪಿಸಿರುವಂಥದ್ದು. ದಕ್ಷಿಣ ಏಷ್ಯಾ ಹಾಗೂ ವಿವಿಧ ದೇಶಗಳ ಸಿನಿಮಾ ನಿರ್ಮಾಪಕರು, ನಿರ್ದೇಶಕರು ಇದರಲ್ಲಿ ಪಾಲ್ಗೊಳ್ಳುವರು. ಕಳೆದ ವರ್ಷ 850 ಕ್ಕೂ ಹೆಚ್ಚು ಮಂದಿ ಪ್ರತಿನಿಧಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.