ಏನಿದು ಬಾಲಿವುಡ್ ನಟಿ ಮನಿಷಾ ಕೊಯಿರಾಲ ಎರಡನೇ ಜನ್ಮದ ರಹಸ್ಯ?

ಕ್ಯಾನ್ಸರ್ ಜೊತೆ ಹೋರಾಡಿ ಬಂದ ಬಾಲಿವುಡ್ ನಟಿಯ ಬದಲಾದ ಮನಸ್ಥಿತಿ!

Team Udayavani, Dec 2, 2019, 6:23 PM IST

Manisha-2-12

ಮುಂಬಯಿ: ಬಾಲಿವುಡ್ ನಟಿ ಮನಿಷಾ ಕೊಯಿರಾಲ ಅವರು ಮಹಾಮಾರಿ ಕ್ಯಾನ್ಸರ್ ರೋಗದೊಂದಿಗೆ ಹೋರಾಡಿ ಹೊಸ ಬದುಕನ್ನು ಪಡೆದಕೊಂಡಿರುವುದು ನಮಗೆಲ್ಲಾ ಗೊತ್ತೇ ಇದೆ. ಇದೀಗ ಈ ನಟಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಎರಡು ವಿಭಿನ್ನ ಸನ್ನಿವೇಶಗಳ ಚಿತ್ರಗಳನ್ನು ಜೋಡಿಸಿರುವ ಪೋಸ್ಟ್ ಒಂದನ್ನು ಹಾಕಿಕೊಂಡಿದ್ದಾರೆ. ಮತ್ತು ಆ ಪೋಸ್ಟ್ ಗೆ ತುಂಬಾ ಪಾಸಿಟಿವ್ ಶೀರ್ಷಿಕೆಯೊಂದನ್ನೂ ಸಹ ನೀಡಿದ್ದಾರೆ. ಇದು ಸದ್ಯಕ್ಕೆ ಟ್ವಿಟ್ಟರ್ ಲೋಕದ ಗಮನವನ್ನು ಸೆಳೆಯುತ್ತಿದೆ.

‘ನನಗೆ ಎರಡನೇ ಜೀವನ ಸಿಗುತ್ತಿರುವುದಕ್ಕೆ ನಾನು ಬದುಕಿಗೆ ಸದಾ ಋಣಿಯಾಗಿರುತ್ತೇನೆ. ಶುಭೋದಯ ಗೆಳೆಯರೇ. ಸಂತೋಷ ಮತ್ತು ಆರೋಗ್ಯಕರವಾಗಿ ಬದುಕಲು ಸಾಧ್ಯವಾಗಿರುವ ಇದೊಂದು ವಿಸ್ಮಯಕರ ಜೀವನವೇ ಸರಿ’ ಎಂದು ಬರೆದುಕೊಂಡಿದ್ದಾರೆ.

ಮತ್ತು ತಾನು ಜೊತೆಯಾಗಿ ಪೋಸ್ಟ್ ಮಾಡಿರುವ ಎರಡು ಫೊಟೋಗಳಲ್ಲಿ ಒಂದರಲ್ಲಿ ಮನಿಷಾ ಅವರು ಆಮ್ಲಜನಕದ ನಳಿಕೆಯನ್ನು ಸಿಕ್ಕಿಸಿಕೊಂಡು ಆಸ್ಪತ್ರೆಯ ಹಾಸಿಗೆಯಲ್ಲಿ ಮಲಗಿರುವ ಫೊಟೋ ಇದ್ದರೆ ಇನ್ನೊಂದು ಫೊಟೋದಲ್ಲಿ ಅವರು ಸುತ್ತ ಹಿಮಾವೃತ ಬೆಟ್ಟದ ತುದಿಯೊಂದರಲ್ಲಿ ನಿಂತಿದ್ದಾರೆ.

ಮನಿಷಾ ಕೊಯಿರಾಲಾ ಅವರಲ್ಲಿ ಅಂಡಾಶಯದ ಕ್ಯಾನ್ಸರ್ ಸಮಸ್ಯೆ 2012ರಲ್ಲಿ ಪತ್ತೆಯಾಗಿತ್ತು. ಇದಕ್ಕೆ ಅಮೆರಿಕಾದಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡ ಬಳಿಕ ಮನಿಷಾ ಅವರು ಗುಣಮುಖರಾಗಿದ್ದರು. ಕ್ಯಾನ್ಸರ್ ನೊಂದಿಗಿನ ತನ್ನ ಹೋರಾಟದ ಅನುಭವಗಳನ್ನು ‘ಹೀಲ್ಡ್: ಹೌ ಕ್ಯಾನ್ಸರ್ ಗೇವ್ ಮಿ ಎ ನ್ಯೂ ಲೈಫ್ (ಗುಣಮುಖಿ: ಕ್ಯಾನ್ಸರ್ ನಿಂದ ಹೊಸ ಜೀವನ) ಎಂಬ ಪುಸ್ತಕವನ್ನು ಬರೆಯುತ್ತಿದ್ದಾರೆ.

ಇನ್ನು ಕ್ಯಾನ್ಸರ್ ಗೆದ್ದ ಬಳಿಕ ಬಾಲಿವುಡ್ ಗೆ ಕಮ್ ಬ್ಯಾಕ್ ಮಾಡಿರುವ ಮನಿಷಾ ಕೊಯಿರಾಲ ಅವರು ಸಂಜು ಚಿತ್ರದಲ್ಲಿ ನಟಿಸಿದ್ದರು. ಮಾತ್ರವಲ್ಲದೇ ನೆಟ್ ಫ್ಲಿಕ್ಸ್ ನ ಲಸ್ಟ್ ಸ್ಟೋರೀಸ್, ಡಿಯರ್ ಮಾಯಾ ಮತ್ತು ಪ್ರಸ್ಥಾನಂ ವೆಬ್ ಸಿರೀಸ್ ಗಳಲ್ಲೂ ನಟಿಸಿದ್ದಾರೆ.

ಒಟ್ಟಿನಲ್ಲಿ ಅಸಂಖ್ಯ ಕ್ಯಾನ್ಸರ್ ಪೀಡಿತರಿಗೆ ಸ್ಪೂರ್ತಿಯಾಗಬೇಕೆಂಬ ನಿಟ್ಟಿನಲ್ಲಿ ಮನಿಷಾ ಕೊಯಿರಾಲ ಈ ಮಹಾಮಾರಿಯೊಂದಿಗಿನ ತನ್ನ ಹೋರಾಟದ ಅನುಭವಗಳನ್ನು ಪಾಸಿಟಿವ್ ರೀತಿಯಲ್ಲಿ ಹಂಚಿಕೊಳ್ಳುತ್ತಿರುವುದು ಪ್ರಶಂಸನೀಯ.

ಕ್ಯಾನ್ಸರ್ ನೊಂದಿಗೆ ಹೋರಾಡಿ ಗೆದ್ದು ಬಂದು ಎರಡನೇ ಬದುಕನ್ನು ಸ್ಪೂರ್ತಿಯುತವಾಗಿ ಬದುಕುತ್ತಿರುವ ಮನಿಷಾ ಅವರಿಗೆ ಈಗ ಸಿಕ್ಕಿರುವುದು ಎರಡನೇ ಜನ್ಮವೇ ಸರಿ!

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.