ದಳಪತಿ ವಿಜಯ್ ʼಲಿಯೋʼ ಚಿತ್ರದಿಂದ ಹೊರಬಂದ ತ್ರಿಷಾ?: ವೈರಲ್ ಸುದ್ದಿಗೆ ನಟಿ ತಾಯಿ ಸ್ಪಷ್ಟನೆ
Team Udayavani, Feb 8, 2023, 9:48 AM IST
ಚೆನ್ನೈ: ದಳಪತಿ ವಿಜಯ್ ಅವರ 67 ನೇ ಸಿನಿಮಾ ʼಲಿಯೋʼಚಿತ್ರೀಕರಣ ಭರದಿಂದ ಸಾಗುತ್ತಿದೆ. ಇತ್ತೀಚೆಗಷ್ಟೇ ಸಿನಿಮಾದ ಟೈಟಲ್ ಟೀಸರ್ ರಿಲೀಸ್ ಮಾಡಿ ಸದ್ದು ಮಾಡಿದ ʼಲಿಯೋʼ ಇದೀಗ ಶೂಟಿಂಗ್ ಹಂತದಲ್ಲೇ ಹೈಪ್ ಹೆಚ್ಚಿಸಿದೆ.
ಕಾಶ್ಮೀರದಲ್ಲಿ ʼಲಿಯೋʼ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ವಿಜಯ್ ಅವರ ಸಿನಿಮಾ ಅಂದ ಮೇಲೆ ಅಲ್ಲಿ ನಿರೀಕ್ಷೆಗಳು ಇದ್ದೇ ಇರುತ್ತವೆ. ಅದು ಈ ಬಾರಿ ಮತ್ತಷ್ಟು ಹೆಚ್ಚಾಗಿದೆ. ಕಾರಣ ಸಿನಿಮಾದ ನಿರ್ದೇಶಕ ಲೋಕೇಶ್ ಕನಕರಾಜ್. ʼಮಾಸ್ಟರ್ ಸಿನಿಮಾದ ಬಳಿಕ ವಿಜಯ್ ಯೊಂದಿಗೆ ಮತ್ತೆ ಕನಕರಾಜ್ ಸಿನಿಮಾ ಮಾಡುತ್ತಿದ್ದಾರೆ. ರಿಲೀಸ್ ಗೂ ಮುನ್ನ ಡಿಜಿಟಲ್ ಹಕ್ಕುಗಳು, ಸ್ಯಾಟಲೈಟ್ ಮತ್ತು ಮ್ಯೂಸಿಕ್ ರೈಟ್ಸ್ಗಳಿಂದ ಸಿನಿಮಾ 246 ಕೋಟಿ ರೂ.ಗಳನ್ನು ಸಂಗ್ರಹಿಸಿದೆ ಎನ್ನುವ ವರದಿಯೊಂದು ಹೊರ ಬಿದ್ದಿದೆ.
ಇನ್ನು ಸಿನಿಮಾದಲ್ಲಿ ವಿಜಯ್ ಅವರೊಂದಿಗೆ ನಾಯಕಿಯಾಗಿ ತ್ರಿಷಾ ಕೃಷ್ಣನ್ ನಟಿಸುತ್ತಿದ್ದಾರೆ. 14 ವರ್ಷದ ಬಳಿಕ ತ್ರಿಷಾ ವಿಜಯ್ ಅವರೊಂದಿಗೆ ನಟಿಸುತ್ತಿದ್ದಾರೆ. ಈ ನಡುವೆಯೇ ಸಿನಿಮಾದಿಂದ ತ್ರಿಷಾ ಹೊರ ಬಂದಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ.
ಚೆನ್ನೈ ಏರ್ ಪೋರ್ಟ್ ನಲ್ಲಿ ತ್ರಿಷಾ ಅವರು ಕಾಣಿಸಿಕೊಂಡಿದ್ದಾರೆ. ತ್ರಿಷಾ ಅವರಿಗೆ ಕಾಶ್ಮೀರದ ವಾತಾವರಣ ಆಗದ ಕಾರಣ, ಅವರು ಜ್ವರದಿಂದ ಬಳಲುತ್ತಿದ್ದಾರೆ. ಹೀಗಾಗಿ ಸಿನಿಮಾ ಅವರು ಹೊರ ಬಂದಿದ್ದಾರೆ ಎನ್ನುವ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಸಹಿತ ಹರಿದಾಡುತ್ತಿದೆ.
ಈ ಬಗ್ಗೆ ಸ್ವತಃ ತ್ರಿಷಾ ಅವರ ತಾಯಿ ಉಮಾ ಕೃಷ್ಣನ್ ಅವರು ಸ್ಥಳೀಯ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಇದೊಂದು ವದಂತಿ, ತ್ರಿಷಾ ಕಾಶ್ಮೀರದಲ್ಲೇ ಇದ್ದಾರೆ. ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಚಿತ್ರ ತಂಡದೊಂದಿಗೆ ಇದ್ದಾರೆ ಎಂದು ಹೇಳಿ ವದಂತಿಗೆ ಸ್ಪಷ್ಟನೆ ಕೊಟ್ಟಿದ್ದಾರೆ.
ಮಿಸ್ಕಿನ್, ಗೌತಮ್ ಮೆನನ್, ಪ್ರಿಯಾ ಆನಂದ್, ಅರ್ಜುನ್ ಸರ್ಜಾ, ಸ್ಯಾಂಡಿ ಮತ್ತು ಮನ್ಸೂರ್ ಅಲಿ ಖಾನ್ ಮುಂತಾದ ಕಲಾವಿದರು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ವೈರಲ್ ಆದ ಫೋಟೋ..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ