Dwarka; ಶ್ರೀ ಕೃಷ್ಣ ಅನುಗ್ರಹಿಸಿದರೆ ಲೋಕಸಭೆಗೆ ಸ್ಪರ್ಧಿಸುತ್ತೇನೆ: ನಟಿ ಕಂಗನಾ ರಣಾವತ್
ಜಗತ್ತಿನಾದ್ಯಂತ ಸನಾತನ ಧರ್ಮದ ಧ್ವಜ ಹಾರಾಡಬೇಕು
Team Udayavani, Nov 3, 2023, 5:04 PM IST
ದ್ವಾರಕೆ(ಗುಜರಾತ್) : ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಶುಕ್ರವಾರ ಚುನಾವಣ ರಾಜಕೀಯಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದು, ಶ್ರೀಕೃಷ್ಣ ಅನುಗ್ರಹಿಸಿದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ಶ್ರೀಕೃಷ್ಣನ ಪ್ರಸಿದ್ಧ ದ್ವಾರಕಾಧೀಶ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೀರಾ ಎಂದು ಕೇಳಿದಾಗ,”ಶ್ರೀಕೃಷ್ಣ ಆಶೀರ್ವಾದ ಮಾಡಿದರೆ ನಾನು ಹೋರಾಡುತ್ತೇನೆ” ಎಂದರು.
“600 ವರ್ಷಗಳ ಹೋರಾಟದ ನಂತರ ಅಯೋಧ್ಯೆಯಲ್ಲಿ ಭಗವಾನ್ ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುತ್ತಿದೆ” ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರಕಾರವನ್ನು ಶ್ಲಾಘಿಸಿ ”ಜಗತ್ತಿನಾದ್ಯಂತ ಸನಾತನ ಧರ್ಮದ ಧ್ವಜ ಹಾರಾಡಬೇಕು” ಎಂದರು.
”ಗಿರ್ ಸೋಮನಾಥ ದೇವಾಲಯದಲ್ಲಿಯೂ ಪ್ರಾರ್ಥನೆ ಸಲ್ಲಿಸಿದರು. ಸೋಮನಾಥ ಮತ್ತು ರಾಮಮಂದಿರ ಒಂದೇ ಇತಿಹಾಸವನ್ನು ಹೊಂದಿದೆ. ಅವುಗಳನ್ನು ಕೆಡವಿದಷ್ಟು ಬಾರಿ ನಾವು ನಿರ್ಮಿಸಿದ್ದೇವೆ” ಎಂದರು.
ಮುಳುಗಡೆಯಾಗಿರುವ ದ್ವಾರಕೆಯನ್ನು ಯಾತ್ರಾರ್ಥಿಗಳ ಅನುಕೂಲಕ್ಕಾಗಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸುವಂತೆ ಮನವಿ ಮಾಡಿದರು.
ಕಂಗನಾ ಅವರು ನಿರ್ಮಾಣ ಮಾಡಿ ನಿರ್ದೇಶಿಸಿರುವ ‘ಎಮರ್ಜೆನ್ಸಿ’ಚಿತ್ರ ಮತ್ತು ‘ತನು ವೆಡ್ಸ್ ಮನು ಪಾರ್ಟ್ 3’ ಚಿತ್ರದ ಕುರಿತೂ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ