ಗೋವಾ ಚಿತ್ರೋತ್ಸವ :ಐವತ್ತು ವರ್ಷಗಳ ಸಿನಿಮಾ ಕನ್ನಡದ ಉಯ್ಯಾಲೆ ಪ್ರದರ್ಶನಕ್ಕೆ ಅವಕಾಶ
Team Udayavani, Nov 18, 2019, 3:46 PM IST
ಪಣಜಿ, ನ. 18:ಸುವರ್ಣ ಸಂಭ್ರಮದಲ್ಲಿರುವ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವ [ಇಫಿ] ನಲ್ಲಿ ಈ ಬಾರಿಯ ಮತ್ತೊಂದು ವಿಶೇಷವೆಂದರೆ ಐವತ್ತು ವರ್ಷಗಳ ಹಿಂದೆ ಅಂದರೆ 1969ರಲ್ಲಿ ಬಿಡುಗಡೆಯಾದ ಭಾರತೀಯ ಭಾಷೆಯ ಪ್ರಮುಖ ಚಿತ್ರಗಳ ಸಣ್ಣದೊಂದು ಅವಲೋಕನ.
ಇದರ ಭಾಗವಾಗಿ ಒಂಬತ್ತು ದಿನಗಳ ಉತ್ಸವದಲ್ಲಿ ಹನ್ನೊಂದು ಪ್ರಶಸ್ತಿ ಪುರಸ್ಕೃತ ಭಾರತೀಯ ಭಾಷೆಗಳ ಚಲನ ಚಿತ್ರಗಳು ಪ್ರದರ್ಶನವಾಗಲಿವೆ. ಇದು ಇನ್ನೊಂದು ಬಗೆಯಲ್ಲಿ ಭಾರತೀಯ ಭಾಷಾ ಚಿತ್ರರಂಗದ ಹೊಸಅಲೆಯನ್ನು ಗುರುತಿಸುವ ಪ್ರಯತ್ನವೂ ಹೌದು.
ಈ ಗೌರವ ಸಿಕ್ಕಿರುವುದು ಎನ್. ಲಕ್ಷ್ಮೀನಾರಾಯಣರ ಉಯ್ಯಾಲೆ ಚಿತ್ರಕ್ಕೆ. ಉಳಿದಂತೆ ಒಡಿಯಾ, ಬಂಗಾಳಿ, ತಮಿಳು, ತೆಲುಗು, ಮರಾಠಿ, ಹಿಂದಿ, ಅಸ್ಸಾಮಿ ಹಾಗೂ ಮಲಯಾಳಂ ಭಾಷೆಯ ಚಲನಚಿತ್ರಗಳೂ ಪ್ರದರ್ಶನಗೊಳ್ಳುತ್ತಿವೆ.
ಚಿತ್ರಗಳ ವಿವರ:
ಎನ್ ಟಿರಾಮರಾವ್ ಅವರ ವರಕ್ತಂ, ಬ್ರಜೇನ್ ಬರುವಾ ಅವರ ಡಾ. ಬೇಜ್ ಬರುವಾ, ಸತ್ಯಜಿತ್ ರೇ ಅವರ ಅರಗೂಪಿ ಗೈನೆ ಬಾಘಾಬೖನೆ, ಕೆ. ಬಾಲಚಂದರ್ ನಿರ್ದೇಶನದ ಕೋಡುಗಲ್, ರಾಮ್ ಮಹೇಶ್ವರಿಯವರ ನಾನಕ್ ನಾಮ್ ಜಹಾಜ್ ಹೈ, ಹೃಷಿಕೇಶ್ ಮುಖರ್ಜಿಯವರ ಸತ್ಯಕಮ್, ಸಿದ್ಧಾರ್ಥರ ಸ್ತ್ರೀ, ಬಲ್ಜಿಪೆಂಡರಕರ್ ರ ತಂಬ್ದಿ, ಶಕ್ತಿಸಮಂತಾ ರ ಆರಾಧನಾ ಹಾಗೂ ಕೆ.ಎಸ್. ಸೇತು ಮಾಧವನ್ ಆವರ ಆದಿಮಕಲ್ ಸೇರಿವೆ.
ಉಯ್ಯಾಲೆ ಚಿತ್ರದ ಕುರಿತು:
ಈ ಚಿತ್ರತೆರೆ ಕಂಡದ್ದು 1969 ರಲ್ಲಿ. ಡಾ.ರಾಜ್ಕುಮಾರ್ ಮತ್ತು ಕಲ್ಪನಾ ಈ ಚಿತ್ರದಲ್ಲಿ ಪಾತ್ರ ನಿರ್ವಹಿಸಿದ್ದರು. ಕನ್ನಡದ ಖ್ಯಾತ ಕಾದಂಬರಿಕಾರ ಚದುರಂಗ ಅವರ ಕಾದಂಬರಿಯನ್ನು ಆಧರಿಸಿ ರೂಪಿಸಿದ ಸಿನಿಮಾ.
ಚದುರಂಗರು ಬರೀ ಸಿನಿಮಾಕಥೆ ಕೊಟ್ಟಿರಲಿಲ್ಲ, ಜತೆಗೆ ಸಂಭಾಷಣೆಯನ್ನೂಬರೆದಿದ್ದರು. ಇದಕ್ಕೆ ಸಂಗೀತ ಒದಗಿಸಿದವರು ವಿಜಯಭಾಸ್ಕರ್. ಗೋಪಾಲ್ ಮತ್ತು ಲಕ್ಷ್ಮಣ್ ಈ ಚಿತ್ರದ ನಿರ್ಮಾಪಕರು.
ಎನ್. ಲಕ್ಷ್ಮೀನಾರಾಯಣ್ ಅವರು ತಮ್ಮ ನಾಂದಿ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೊಸ ಬಗೆಯ ಚಿತ್ರಗಳನ್ನು ಶುರು ಮಾಡಿದವರು. ಹಲವಾರು ಸಾಮಾಜಿಕ ಸಂಗತಿಗಳನ್ನು ಅತ್ಯಂತ ಸಮರ್ಪಕವಾಗಿ ಜನಪ್ರಿಯತೆಯ ನೆಲೆಯಲ್ಲೇ ಸಿನಿಮಾ ರೂಪಿಸಿ ಯಶಸ್ವಿಯಾದವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ