ಗೋವಾ ಚಿತ್ರೋತ್ಸವ :ಐವತ್ತು ವರ್ಷಗಳ ಸಿನಿಮಾ ಕನ್ನಡದ ಉಯ್ಯಾಲೆ ಪ್ರದರ್ಶನಕ್ಕೆ ಅವಕಾಶ


Team Udayavani, Nov 18, 2019, 3:46 PM IST

Raj-kumar-Kalpana

ಪಣಜಿ, ನ. 18:ಸುವರ್ಣ ಸಂಭ್ರಮದಲ್ಲಿರುವ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವ [ಇಫಿ] ನಲ್ಲಿ ಈ ಬಾರಿಯ ಮತ್ತೊಂದು ವಿಶೇಷವೆಂದರೆ ಐವತ್ತು ವರ್ಷಗಳ ಹಿಂದೆ ಅಂದರೆ 1969ರಲ್ಲಿ ಬಿಡುಗಡೆಯಾದ ಭಾರತೀಯ ಭಾಷೆಯ ಪ್ರಮುಖ ಚಿತ್ರಗಳ ಸಣ್ಣದೊಂದು ಅವಲೋಕನ.

ಇದರ ಭಾಗವಾಗಿ ಒಂಬತ್ತು ದಿನಗಳ ಉತ್ಸವದಲ್ಲಿ ಹನ್ನೊಂದು ಪ್ರಶಸ್ತಿ ಪುರಸ್ಕೃತ ಭಾರತೀಯ ಭಾಷೆಗಳ ಚಲನ ಚಿತ್ರಗಳು ಪ್ರದರ್ಶನವಾಗಲಿವೆ. ಇದು ಇನ್ನೊಂದು ಬಗೆಯಲ್ಲಿ ಭಾರತೀಯ ಭಾಷಾ ಚಿತ್ರರಂಗದ ಹೊಸಅಲೆಯನ್ನು ಗುರುತಿಸುವ ಪ್ರಯತ್ನವೂ ಹೌದು.

ಈ ಗೌರವ ಸಿಕ್ಕಿರುವುದು ಎನ್‌. ಲಕ್ಷ್ಮೀನಾರಾಯಣರ ಉಯ್ಯಾಲೆ ಚಿತ್ರಕ್ಕೆ. ಉಳಿದಂತೆ ಒಡಿಯಾ, ಬಂಗಾಳಿ, ತಮಿಳು, ತೆಲುಗು, ಮರಾಠಿ, ಹಿಂದಿ, ಅಸ್ಸಾಮಿ ಹಾಗೂ ಮಲಯಾಳಂ ಭಾಷೆಯ ಚಲನಚಿತ್ರಗಳೂ ಪ್ರದರ್ಶನಗೊಳ್ಳುತ್ತಿವೆ.

ಚಿತ್ರಗಳ ವಿವರ:

ಎನ್‌ ಟಿರಾಮರಾವ್‌ ಅವರ ವರಕ್ತಂ, ಬ್ರಜೇನ್‌ ಬರುವಾ ಅವರ ಡಾ. ಬೇಜ್‌ ಬರುವಾ, ಸತ್ಯಜಿತ್‌ ರೇ ಅವರ ಅರಗೂಪಿ ಗೈನೆ ಬಾಘಾಬೖನೆ, ಕೆ. ಬಾಲಚಂದರ್ ನಿರ್ದೇಶನದ ಕೋಡುಗಲ್‌, ರಾಮ್‌ ಮಹೇಶ್ವರಿಯವರ ನಾನಕ್‌ ನಾಮ್‌ ಜಹಾಜ್‌ ಹೈ, ಹೃಷಿಕೇಶ್‌ ಮುಖರ್ಜಿಯವರ ಸತ್ಯಕಮ್‌, ಸಿದ್ಧಾರ್ಥರ ಸ್ತ್ರೀ, ಬಲ್ಜಿಪೆಂಡರಕರ್‌ ರ ತಂಬ್ದಿ, ಶಕ್ತಿಸಮಂತಾ ರ ಆರಾಧನಾ ಹಾಗೂ ಕೆ.ಎಸ್‌. ಸೇತು ಮಾಧವನ್‌ ಆವರ ಆದಿಮಕಲ್‌ ಸೇರಿವೆ.

ಉಯ್ಯಾಲೆ ಚಿತ್ರದ ಕುರಿತು:

ಈ ಚಿತ್ರತೆರೆ ಕಂಡದ್ದು 1969 ರಲ್ಲಿ. ಡಾ.ರಾಜ್‌ಕುಮಾರ್‌ ಮತ್ತು ಕಲ್ಪನಾ ಈ ಚಿತ್ರದಲ್ಲಿ ಪಾತ್ರ ನಿರ್ವಹಿಸಿದ್ದರು. ಕನ್ನಡದ ಖ್ಯಾತ ಕಾದಂಬರಿಕಾರ ಚದುರಂಗ ಅವರ ಕಾದಂಬರಿಯನ್ನು ಆಧರಿಸಿ ರೂಪಿಸಿದ ಸಿನಿಮಾ.

ಚದುರಂಗರು ಬರೀ ಸಿನಿಮಾಕಥೆ ಕೊಟ್ಟಿರಲಿಲ್ಲ, ಜತೆಗೆ ಸಂಭಾಷಣೆಯನ್ನೂಬರೆದಿದ್ದರು. ಇದಕ್ಕೆ ಸಂಗೀತ ಒದಗಿಸಿದವರು ವಿಜಯಭಾಸ್ಕರ್‌. ಗೋಪಾಲ್‌ ಮತ್ತು ಲಕ್ಷ್ಮಣ್‌ ಈ ಚಿತ್ರದ ನಿರ್ಮಾಪಕರು.

ಎನ್‌. ಲಕ್ಷ್ಮೀನಾರಾಯಣ್‌ ಅವರು ತಮ್ಮ ನಾಂದಿ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೊಸ ಬಗೆಯ ಚಿತ್ರಗಳನ್ನು ಶುರು ಮಾಡಿದವರು. ಹಲವಾರು ಸಾಮಾಜಿಕ ಸಂಗತಿಗಳನ್ನು ಅತ್ಯಂತ ಸಮರ್ಪಕವಾಗಿ ಜನಪ್ರಿಯತೆಯ ನೆಲೆಯಲ್ಲೇ ಸಿನಿಮಾ ರೂಪಿಸಿ ಯಶಸ್ವಿಯಾದವರು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.