ಇಫಿ ಚಿತ್ರೋತ್ಸವಕ್ಕೆ ತೆರೆ: ಡ್ಯಾನಿಷ್‌ ಭಾಷೆಯ ಚಿತ್ರಕ್ಕೆ ಪ್ರಶಸ್ತಿ


Team Udayavani, Jan 25, 2021, 1:24 AM IST

ಇಫಿ ಚಿತ್ರೋತ್ಸವಕ್ಕೆ ತೆರೆ: ಡ್ಯಾನಿಷ್‌ ಭಾಷೆಯ ಚಿತ್ರಕ್ಕೆ ಪ್ರಶಸ್ತಿ

ಪಣಜಿ: ಕೋವಿಡ್ ಹಿನ್ನೆಲೆಯಲ್ಲೂ ಸಂಘ ಟಿಸಲಾಗಿದ್ದ 51ನೇ ಭಾರತೀಯ ಅಂತಾರಾಷ್ಟ್ರೀಯ ಚಿ ತ್ರೋತ್ಸವಕ್ಕೆ (ಇಫಿ)ರವಿವಾರ ತೆರೆಎಳೆಯಲಾಯಿತು.

ಜನವರಿ 16ರಿಂದ 24ರ ವರೆಗೆ ನಡೆದ ಚಿತ್ರೋತ್ಸವ ದಲ್ಲಿ 60 ದೇಶಗಳ 225ಕ್ಕೂ ಹೆಚ್ಚು ಚಲನಚಿತ್ರಗಳು ವಿವಿಧ ವಿಭಾಗಗಳಲ್ಲಿ ಪ್ರದರ್ಶಿತವಾದವು. ಪ್ರತೀ ವರ್ಷ ಅತ್ಯುತ್ತಮ ಚಿತ್ರಕ್ಕೆ ನೀಡುವ ಗೋಲ್ಡನ್‌ ಪೀ ಕಾಕ್‌ ಪ್ರಶಸ್ತಿ -ಪಾರಿತೋಷಕ ಈ ಬಾರಿ ಡೆನ್ಮಾರ್ಕ್‌ನ ಆ್ಯಂಡ್ರಸ್‌ ರೆಫ್ನ್ ನಿರ್ದೇಶನದ ಡ್ಯಾನಿಷ್‌ ಭಾಷೆಯ “ಇನ್‌ ಟು ದಿ ಡಾರ್ಕ್‌ನೆಸ್‌’ (ಇಂಗ್ಲಿಷ್‌ ಟೈಟಲ್‌)ನ ಪಾಲಾಯಿತು. 40 ಲಕ್ಷ ರೂ. ನಿರ್ದೇಶಕ ಹಾಗೂ ನಿರ್ಮಾಪಕ ಇಬ್ಬರಿಗೂ ಈ ಪ್ರಶಸ್ತಿ ನೀಡಲಾಗುತ್ತದೆ.

ಅತ್ಯುತ್ತಮ ನಿರ್ದೇಶನ- ನಿರ್ದೇಶಕನಿ ಗೆ ನೀಡಲಾಗುವ ಸಿಲ್ವರ್‌ ಪೀಕಾಕ್‌ ಪ್ರಶಸ್ತಿ- ಪಾರಿ ತೋಷಕವು ತೈವಾನಿನ ನಿರ್ದೇಶಕ ಚೆನ್‌ ನಿನ ಕೊ ಅವರಿಗೆ ನೀಡಿ ಗೌರವಿಸಲಾಯಿತು. ಅವರ ದಿ ಸೈಲೆಂಟ್‌ ಫಾರೆಸ್ಟ್‌ ಚಿತ್ರದ ನಿರ್ದೇಶನಕ್ಕೆ ಈ ಗೌರವ ಸಂದಿದೆ. ಅತ್ಯುತ್ತಮ ನಟನೆಗೆ ನೀಡಲಾಗುವ ಸಿಲ್ವರ್‌ ಪೀಕಾಕ್‌ ಪ್ರಶಸ್ತಿ ದಿ ಸೈಲೆಂಟ್‌ ಫಾರೆಸ್ಟ್‌ನಲ್ಲಿ ಅಭಿನಯಿ ಸಿರುವ ತೈವಾನಿನ ನಟ ತ್ಸು ಚುಯಾನ್‌ ಲಿ ಗೆ ಸಂದಾಯವಾದರೆ, ಅತ್ಯುತ್ತಮ ನಟಿ ಪ್ರಶಸ್ತಿ ಪೋಲಿಷ್‌ ಭಾಷೆಯ ಐ ನೆವರ್‌ ಕ್ರೈ ಚಿತ್ರದ ನಟನೆಗಾಗಿ ಝೋಪಿ ಯಾ ಸ್ಟಫೇಜ್‌ರ ಪಾಲಾಯಿತು. ತೀರ್ಪುಗಾರರ ವಿಶೇಷ ಪ್ರಶಸ್ತಿಗೆ ಬಲ್ಗೇರಿಯನ್‌ ನಿರ್ದೇಶಕ ಕಮಿನ್‌ ಕಲೇ ಅವರ ಫೆಬ್ರವರಿ ಚಲನಚಿತ್ರ ಪಾತ್ರವಾಯಿತು. ಮತ್ತೂಂದು ವಿಶೇಷ ಪ್ರಶಸ್ತಿಗೆ ಅಸ್ಸಾಮಿ ನಿರ್ದೇ ಶಕರಾದ ಕೃಪಾಲ್‌ ಕಲಿತಾ ರ “ಬ್ರಿಡ್ಜ್’ ಸಿನೆಮಾ ಆಯ್ಕೆ ಯಾಯಿತು. ಚೊಚ್ಚಲ ಸಿನೆಮಾಕ್ಕೆ ನೀಡಲಾಗುವ ಉದಯೋನ್ಮುಖ ನಿರ್ದೇಶಕ ಪ್ರಶಸ್ತಿಯನ್ನು ಬ್ರೆಜಿಲಿ ಯನ್‌ನ ಕಸಿಯೋ ಪೆರೇರಾ ತಮ್ಮ ಪೋರ್ಚುಗೀಸ್‌ ಭಾಷೆಯ ವೆಲೆಂಟಿನಾ ಚಿತ್ರಕ್ಕೆ ಪಡೆದರು. ಇದ ರೊಂದಿಗೆ ಐಸಿಎಫ್ಟಿ ಯುನೆಸ್ಕೊ ಗಾಂಧಿ ಪ್ರಶಸ್ತಿಗೆ ಪ್ಯಾಲೇಸ್ತಿಯನ್‌ನ ಅರೇಬಿಕ್‌ ಭಾಷೆಯ ಚಿತ್ರ 200 ಮೀಟರ್  ಅನ್ನು ಆಯ್ಕೆ ಮಾಡಲಾಗಿದೆ.

ಹಿಂದಿ ಮತ್ತು ಬಂಗಾಲಿಯ ಹಿರಿಯ ಚಿತ್ರನಟ, ನಿರ್ದೇಶಕ ಬಿಶ್ವಜಿತ್‌ ಚಟರ್ಜಿಗೆ ವ್ಯಕ್ತಿ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜತೆಗೆ ಮುಖ್ಯ ಅತಿಥಿ ಯಾಗಿದ್ದ ಹಿಂದಿಯ ಹಿರಿಯ ನಟಿ ಜೀನತ್‌ ಅಮಾನ್‌ರನ್ನೂ ಗೌರವಿಸಲಾಯಿತು.

ಹೊಸ ಪ್ರಯೋಗ ಒಳ್ಳೆಯ ಪ್ರತಿಕ್ರಿಯೆ :

ಇಫಿಯ ಹೊಸ ಪ್ರಯೋಗಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ ಗೋವಾದ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌, ಗೋವಾ ಚಿತ್ರರಂಗದ ಚಟುವಟಿಕೆಗಳಿಗೆ ಹೇಳಿ ಮಾಡಿಸಿದ ತಾಣ. ಚಿತ್ರರಂಗಕ್ಕೆ ಬೇಕಾದ ಎಲ್ಲ ಸೌಕರ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

ಈ ಬಾರಿಯ ಚಿತ್ರೋತ್ಸವ ಹೈಬ್ರಿಡ್‌ ರೂಪದಲ್ಲಿ ನಡೆದಿದ್ದು ವರ್ಚುವಲ್‌ ಹಾಗೂ ಸಾಂಪ್ರದಾಯಿಕ ವಿಧಾನದಲ್ಲೂ ನಡೆದಿತ್ತು. ಹಲವು ಸಿನೆರಸಿಕರು ಸಿನೆಮಾಗಳು, ಸಂವಾದ, ಚರ್ಚೆಯನ್ನು ವೀಕ್ಷಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.