ಪ್ರತಿಯೊಬ್ಬರ ಕೈಯಲ್ಲಿ ಕ್ಯಾಮೆರಾ ಇದೆ : ಆದರೆ ಸಿನಿಮಾ ಇಲ್ಲ !

ಗೋವಾ ಚಿತ್ರೋತ್ಸವದಲ್ಲಿ ಪ್ರಿಯದರ್ಶನ್ ಅಭಿಪ್ರಾಯ

Team Udayavani, Nov 22, 2019, 9:37 AM IST

priya

ಪಣಜಿ: ಚಿತ್ರಕಥೆ, ಸಿನೆ ಛಾಯಾಗ್ರಹಣ ಹಾಗೂ ವಿನ್ಯಾಸವೇ ಸಿನಿಮಾದ ಅಂತಃಸತ್ತ್ವ. ಅದೇ ಇಂದಿನ ಸಿನಿಮಾಗಳಲ್ಲಿ ಕಾಣೆಯಾಗುತ್ತಿದೆ !
ಇದನ್ನು ಹುಡುಕುವುದೇ ಸವಾಲಿನ ಕೆಲಸವಾಗಿದೆ ಎಂದವರು ಭಾರತೀಯ ಪನೋರಮಾ ವಿಭಾಗದ ಆಯ್ಕೆ ಸಮಿತಿ. ಇದರ ಅಧ್ಯಕ್ಷರಾದ ಪ್ರಿಯದರ್ಶನ್ ಸಿನಿಮಾ ಆಯ್ಕೆ ಕುರಿತು ವಿವರಿಸುವಾಗ ಆತಂಕ ವ್ಯಕ್ತಪಡಿಸಿದ್ದು ಇದೇ ನೆಲೆಯಲ್ಲಿ.

‘ಭಾರತೀಯ ರಿಯಲಿಸ್ಟಿಕ್ ಸಿನಿಮಾಗಳು ತಮ್ಮ ಬಣ್ಣ ಕಳೆದುಕೊಳ್ಳುತ್ತಿವೆ. ಗುಣಮಟ್ಟ ಗಣನೀಯವಾಗಿ ಕುಸಿಯುತ್ತಿದೆ. ಇದು ಸಮಿತಿಗೆ ಈ ಬಾರಿಯ ಆಯ್ಕೆಗೆ ಬಂದ ಸಿನಿಮಾಗಳು ಕಂಡು ಬಂದಾಗ ಅನಿಸಿದ್ದು’ ಎಂದರು ಪ್ರಿಯದರ್ಶನ್.

ಒಂದು ಸಿನಿಮಾದ ಗುಣಮಟ್ಟವನ್ನು ನೋಡುವುದೇ ಅದರ ಚಿತ್ರಕಥೆ, ಸಿನೆ ಛಾಯಾಗ್ರಹಣ ಹಾಗೂ ವಿನ್ಯಾಸದಿಂದ. ಅವುಗಳೇ ಇಂದಿನ ಹಲವು ಸಿನಿಮಾಗಳಲ್ಲಿ ಕಾಣೆಯಾಗಿವೆ. ಹಾಗಾದರೆ ಒಳ್ಳೆಯ ಸಿನಿಮಾ ಎಂದರೆ ಏನು ಎಂಬುದು ಅವರ ಪ್ರಶ್ನೆಯಾಗಿತ್ತು.

ಬಹಳ ಕಷ್ಟವಾಗಲಿಲ್ಲ
ಒಟ್ಟು 314 ಸಿನಿಮಾಗಳನ್ನು ವೀಕ್ಷಿಸುವ ಮೊದಲು ಸಂಖ್ಯೆಯನ್ನು ಕಂಡು ಕಷ್ಟವೆಂದಕೊಂಡಿದ್ದೆವು. ಸೀಮಿತ ಅವಧಿಯಲ್ಲಿ ಎಲ್ಲವನ್ನೂ ವೀಕ್ಷಿಸಿ, ಅಭಿಪ್ರಾಯ ಸಂಗ್ರಹಿಸಿ ನಿರ್ಧರಿಸುವುದು ಕಷ್ಟ. ಆದರೆ, ಸಿನಿಮಾಗಳ ಗುಣಮಟ್ಟ ಕಂಡ ಬಳಿಕ ಆಯ್ಕೆ ಬಹಳ ಕಷ್ಟವೆನಿಸಲಿಲ್ಲ ಎಂದರು ಪ್ರಿಯದರ್ಶನ್ ಮತ್ತು ಹರೀಶ್ ಬಿಮಾನಿ.

ಇಂದು ಎಲ್ಲರ ಕೈಯಲ್ಲೂ ಕ್ಯಾಮರಾ ಬಂದಿದೆ. ಎಲ್ಲರೂ ವಿಡಿಯೋ ಚಿತ್ರೀಕರಿಸುತ್ತಾರೆ. ಆದರೆ ಅದಕ್ಕೊಂದು ವಿನ್ಯಾಸ ಮತ್ತು ಕಥೆ ಕಟ್ಟುವಿಕೆ ಇರುವುದಿಲ್ಲ. ಹಾಗಾಗಿಯೇ ಸಿನಿಮಾಗಳೆನಿಸುವುದಿಲ್ಲ ಎಂಬುದು ಸಮಿತಿಯ ಅಭಿಪ್ರಾಯ.

ಎಲ್ಲರೂ ತಮ್ಮ ಮನಸ್ಸಿನೊಳಗಿರುವುದನ್ನು ಕಟ್ಟಿಕೊಡಲು ಪ್ರಯತ್ನಿಸುತ್ತಿದ್ದಾರೆ. ಅದು ಸರಿಯೇ. ಆದರೆ ಅದಕ್ಕೊಂದು ತರಬೇತಿ ಅವಶ್ಯವಿದೆ ಎಂಬುದು ಪ್ರಿಯದರ್ಶನ್ ಅಭಿಪ್ರಾಯ.
ಈ ಬಾರಿ ಭಾರತೀಯ ಪನೋರಮಾ ವಿಭಾಗದ ಕಥಾ ವಿಭಾಗದಲ್ಲಿ 26 ಸಿನಿಮಾಗಳು ಹಾಗೂ ಕಥೇತರ ವಿಭಾಗದಲ್ಲಿ 15 ಸಿನಿಮಾಗಳು ಪ್ರದರ್ಶಿತವಾಗುತ್ತಿವೆ. ಕನ್ನಡದ ರಂಗನಾಯಕಿ ಘದಯಾಳ್ ಪದ್ಮನಾಭನ್ ನಿರ್ದೇಶನ] ಇದೇ ವಿಭಾಗದಲ್ಲಿ ಪ್ರದರ್ಶಿತವಾಗುತ್ತಿದೆ.

ಕಾಶ್ಮೀರಿ ಭಾಷೆಯ ನೂರೆ, ಮರಾಠಿಯ ಫೋಟೋ ಫ್ರೇಮ್, ಬೋಗ್ರಾ ಅಲ್ಲದೇ ಮಲಯಾಳಂ, ಬಂಗಾಳಿ, ಖಾಸಿ ಮತ್ತಿತರ ಭಾರತೀಯ ಭಾಷಾ ಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.