ಇಂಡಿಯನ್ 2 ಶೂಟಿಂಗ್ ಅವಘಡ: ಕಮಲ್ ಪತ್ರ ಬರೆದದ್ದು ಯಾರಿಗೆ?


Team Udayavani, Feb 26, 2020, 5:14 PM IST

Kamal-Hassan-730

ಚೆನ್ನೈ: ಸ್ಟಾರ್ ನಿರ್ದೇಶಕ ಶಂಕರ್ ನಿರ್ದೇಶನ ಮತ್ತು ಕಮಲ್ ಹಾಸನ್ ಅಭಿನಯದ ಇಂಡಿಯನ್-2 ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಫೆಬ್ರವರಿ 19ರಂದು ಸಂಭವಿಸಿದ ಕ್ರೇನ್ ದುರಂತದಲ್ಲಿ ಮೂವರು ಸಿಬ್ಬಂದಿಗಳು ಮೃತಪಟ್ಟು ಹಲವರು ಗಾಯಗೊಂಡ ಘಟನೆ ಚಿತ್ರತಂಡವನ್ನು ಇನ್ನೂ ಕಾಡುತ್ತಿದೆ.

ಅದರಲ್ಲೂ ಈ ದುರಂತ ಸಂಭವಿಸಿದ ಸಂದರ್ಭದಲ್ಲಿ ಸ್ಥಳದಲ್ಲೇ ಇದ್ದು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾದ ನಾಯಕ ನಟ ಕಮಲ್ ಹಾಸನ್ ಅವರನ್ನು ಈ ಘಟನೆ ಬಹುವಾಗಿ ಕಾಡುತ್ತಿದೆಯಂತೆ. ಈ ಕುರಿತಾಗಿ ಕಮಲ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ಲೈಕಾ ಪ್ರೊಡಕ್ಷನ್ ಸ್ಥಾಪಕಾಧ್ಯಕ್ಷರಾಗಿರುವ ಸುಭಾಸ್ಕರನ್ ಅವರಿಗೆ ಬರೆದಿರುವ ಪತ್ರವೊಂದು ಇದೀಗ ಟ್ವಿಟ್ಟರ್ ನಲ್ಲೂ ಹರಿದಾಡುತ್ತಿದೆ.

ಕಮಲ್ ಬರೆದಿರುವ ಪತ್ರದಲ್ಲೇನಿದೆ?
ಫೆಬ್ರವರಿ 19ರ ದುರಂತ ಘಟನೆಯ ಕುರಿತಾಗಿ ಲೈಕಾ ಪ್ರೊಡಕ್ಷನ್ ಮುಖ್ಯಸ್ಥರಿಗೆ ಕಮಲ್ ಬರೆದಿರುವ ಪತ್ರದಲ್ಲಿ ಶೂಟಿಂಗ್ ಸಂದರ್ಭದಲ್ಲಿ ಸಂಭವಿಸಬಹುದಾಗಿರುವ ಅವಘಡಗಳಿಗೆ ಸೂಕ್ತ ಮುಂಜಾಗರುಕತಾ ಕ್ರಮಗಳನ್ನು ವಹಿಸುವಂತೆ ಹಾಗೂ ಶೂಟಿಂಗ್ ಯೂನಿಟ್ ಸಿಬ್ಬಂದಿಗಳಿಗೆ ಸರಿಯಾದ ರೀತಿಯ ವಿಮೆ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಕುರಿತಾದಂತೆ ಕಮಲ್ ವಿವರವಾಗಿ ಬರೆದುಕೊಂಡಿದ್ದಾರೆ.

‘ಘಟನೆ ನಡೆದ ಸಂದರ್ಭದಲ್ಲಿ ನಾನು ಅಲ್ಲಿಂದ ಸ್ವಲ್ಪವೇ ದೂರದಲ್ಲಿದ್ದೆ, ಇಲ್ಲದಿದ್ದರೆ ಈ ದುರ್ಘಟನೆಯ ಸಂತ್ರಸ್ತರಲ್ಲಿ ನಾನೂ ಒಬ್ಬನಾಗಿರುತ್ತಿದ್ದೆ. ಈ ದುರ್ಘಟನೆ ಭೀಕರತೆಯನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಮತ್ತು ಈ ಘಟನೆಯಲ್ಲಿ ಸಂತ್ರಸ್ತರಾದವರಿಗೆ ಪರಿಹಾರವನ್ನು ನಿಡಿದ ಮಾತ್ರಕ್ಕೆ ನಮ್ಮ ಜವಾಬ್ದಾರಿ ಮುಕ್ತಾಯಗೊಳ್ಳಬಾರದು. ಒಂದು ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಹಲವರು ಕೆಲಸ ಮಾಡುತ್ತಾರೆ, ಅವರೆಲ್ಲರ ಭದ್ರತೆ ಮತ್ತು ಜೀವರಕ್ಷಣೆಗೆ ನಿರ್ಮಾಣ ಸಂಸ್ಥೆಗಳು ಸೂಕ್ತ ಕ್ರಮ ಕೈಗೊಳ್ಳುವುದು ಅತ್ಯಗತ್ಯ.’ ಎಂದು 65 ವರ್ಷ ಪ್ರಾಯದ ನಟ ತಮ್ಮ ಪತ್ರದಲ್ಲಿ ಬರೆದುಕೊಂಡಿದ್ದಾರೆ.

‘ಕಲಾವಿದರು, ಶೂಟಿಂಗ್ ಸಿಬ್ಬಂದಿಗಳು ಮತ್ತು ಇತರೇ ತಂತ್ರಜ್ಞರ ರಕ್ಷಣೆಗಾಗಿ ನಿರ್ಮಾಣ ಸಂಸ್ಥೆ ತೆಗೆದುಕೊಂಡಿರುವ ಕ್ರಮಗಳ ಕುರಿತಾಗಿ ನಾನು ತಿಳಿದುಕೊಳ್ಳಲು ಬಯಸುತ್ತೇನೆ. ಮತ್ತು ಇವರಿಗೆಲ್ಲಾ ಒದಗಿಸಲಾಗಿರುವ ವಿಮಾ ಮಾಹಿತಿಗಳನ್ನೂ ನಾನು ತಿಳಿದುಕೊಳ್ಳಬೇಕಾಗಿದೆ. ಮತ್ತು ಈ ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವವರಿಗೆ ಉತ್ತಮ ಚಿಕಿತ್ಸೆ ಕೊಡಿಸುವ ಜವಾಬ್ದಾರಿಯೂ ನಿರ್ಮಾಣ ಸಂಸ್ಥೆಯ ಮೇಲಿದೆ’ ಎಂದು ಕಮಲ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.


ಶೂಟಿಂಗ್ ಸಂದರ್ಭದಲ್ಲಿ ಲೈಟಿಂಗ್ ವ್ಯವಸ್ಥೆಗಾಗಿ ಅಳವಡಿಸಲಾಗಿದ್ದ ಬೃಹತ್ ಕ್ರೇನೊಂದು ಉರುಳಿಬಿದ್ದು ಮೂವರು ಶೂಟಿಂಗ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದರು ಹಾಗೂ ಒಂಭತ್ತಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

ಕಮಲ್ ಹಾಸನ್, ಕಾಜಲ್ ಅಗರ್ವಾಲ್, ರಕುಲ್ ಪ್ರೀತ್ ಸಿಂಗ್, ಸಿದ್ದಾರ್ಥ್ ಮತ್ತು ಪ್ರಿಯಾ ಭವಾನಿ ಶಂಕರ್ ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿರುವ ‘ಇಂಡಿಯನ್-2’ ಚಿತ್ರವನ್ನು ಎಸ್. ಶಂಕರ್ ಅವರು ನಿರ್ದೇಶಿಸುತ್ತಿದ್ದು, 1996ರಲ್ಲಿ ತೆರೆಕಂಡು ಯಶಸ್ವಿಯಾಗಿದ್ದ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗ ಇದಾಗಿದೆ. ಈ ಚಿತ್ರ 2021ರಲ್ಲಿ ತೆರೆ ಕಾಣುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.