ಬಾಲಿವುಡ್ ಖ್ಯಾತ ನಟ, ಲೈಫ್ ಆಫ್ ಪೈ ಮೋಡಿಗಾರ ಇರ್ಫಾನ್ ಖಾನ್ ಇನ್ನಿಲ್ಲ
ದೊಡ್ಡ ಕರುಳು ಸಮಸ್ಯೆಯಿಂದ ಬಳಲುತ್ತಿದ್ದ ಇರ್ಫಾನ್ ಖಾನ್ ಅವರನ್ನು ಮಂಗಳವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Team Udayavani, Apr 29, 2020, 12:24 PM IST
ಮುಂಬೈ: ಬಾಲಿವುಡ್ ಖ್ಯಾತ ನಟ ಇರ್ಫಾನ್ ಖಾನ್ (53) ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ ವಿಧಿವಶರಾಗಿರುವುದಾಗಿ ಮೂಲಗಳು ತಿಳಿಸಿವೆ. ಖಾನ್ ನಿಧನ ಬಾಲಿವುಡ್ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಎಂದು ಗಣ್ಯರು ಕಂಬನಿ ಮಿಡಿದಿದ್ದಾರೆ.
ದೊಡ್ಡ ಕರುಳು ಸಮಸ್ಯೆಯಿಂದ ಬಳಲುತ್ತಿದ್ದ ಇರ್ಫಾನ್ ಖಾನ್ ಅವರನ್ನು ಮಂಗಳವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆಸ್ಪತ್ರೆಗೆ ದಾಖಲಾಗದ ಬಗ್ಗೆ ಆಪ್ತ ಕಾರ್ಯದರ್ಶಿ ಪ್ರಕಟಣೆ ಮೂಲಕ ತಿಳಿಸಿದ್ದರು.
ಇರ್ಫಾನ್ ಅವರು ದೊಡ್ಡ ಕರುಳಿನ ಸೋಂಕಿನ ಬಗ್ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ವಿವರಿಸಿತ್ತು. ನಟನ ಅಧಿಕೃತ ವಕ್ತಾರ ನೀಡಿರುವ ಪ್ರಕಟಣೆ ಪ್ರಕಾರ, ಹೌದು…ಇರ್ಫಾನ್ ಖಾನ್ ಅವರು ಕೋಕಿಲಾಬೆನ್ ಆಸ್ಪತ್ರೆಯ ಐಸಿಯುನಲ್ಲಿದ್ದಾರೆ. ನಾವು ಪ್ರತಿ ಸಮಯದ ವಿವರವನ್ನು ತಿಳಿಸುತ್ತೇವೆ. ಇರ್ಫಾನ್ ಅವರು ವೈದ್ಯರ ನಿಗಾದಲ್ಲಿದ್ದಾರೆ. ಈವರೆಗೂ ಅವರ ಧೈರ್ಯ ಮತ್ತು ಸಾಮರ್ಥ್ಯವೇ ಅವರಿಗೆ ಹೋರಾಡಲು ಶಕ್ತಿ ನೀಡಿತ್ತು. ಅವರಲ್ಲಿ ಅದ್ಭುತವಾದ ಇಚ್ಛಾಶಕ್ತಿ ಇದೆ. ಅವರು ಆರೋಗ್ಯದಿಂದ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ತಿಳಿಸಿದ್ದರು.
ಇತ್ತೀಚೆಗೆ ಇರ್ಫಾನ್ ತಾಯಿ ಸಯೀದಾ ಬೇಗಂ(95ವರ್ಷ) ಅವರು ವಯೋಸಹಜ ಖಾಯಿಲೆಯಿಂದ ಜೈಪುರದಲ್ಲಿ ನಿಧನರಾಗಿದ್ದರು. ಆದರೆ ಪುತ್ರ ಇರ್ಫಾನ್ ಗೆ ಲಾಕ್ ಡೌನ್ ನಿಂದಾ ಮುಂಬೈನಲ್ಲಿ ಇದ್ದಿದ್ದು, ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲವಾಗಿತ್ತು.
ನಟ ಇರ್ಫಾನ್ ಖಾನ್ (54ವರ್ಷ) ಅವರು ನ್ಯೂರೋಎಂಡೋಕ್ರೈನ್ ಸಮಸ್ಯೆಯಿಂದ ಬಳಲುತ್ತಿದ್ದು, ಇದಕ್ಕಾಗಿ ತಾನು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು 2018ರಲ್ಲಿ ಘೋಷಿಸಿದ್ದರು. ಇದಕ್ಕಾಗಿ ಅವರು ವಿದೇಶಕ್ಕೆ ತೆರಳಿ ಚಿಕಿತ್ಸೆ ಪಡೆದಿದ್ದರು.
ಬಾಲಿವುಡ್ ನ ವಾರಿಯರ್, ಮಕ್ಬೂಲ್, ಹಾಸಿಲ್, ಪಾನ್ ಸಿಂಗ್ ತೋಮರ್, ರೋಗ್. ಲೈಫ್ ಆಫ್ ಪೈ, ನೇಮ್ ಸೇಕ್, ಸೇರಿದಂತೆ ಹಲವು ಚಿತ್ರಗಳ ಮೂಲಕ ಇರ್ಫಾನ್ ಚಿತ್ರಪ್ರೇಮಿಗಳ ಮನಗೆದ್ದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ