ಇನ್ನು ನೆನಪು ಮಾತ್ರ: 20 ಕುಟುಂಬ ಸದಸ್ಯರ ಸಮ್ಮುಖದಲ್ಲಿ ಇರ್ಫಾನ್ ಅಂತ್ಯ ಸಂಸ್ಕಾರ
ಅಂತಿಮ ವಿಧಿವಿಧಾನದ ಬಳಿಕ ಇಂದು 3ಗಂಟೆಗೆ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಶವವನ್ನು ದಫನ್ ಮಾಡಲಾಯಿತು.
Team Udayavani, Apr 29, 2020, 6:27 PM IST
ಮುಂಬೈ: ಬಹುಮುಖ ಪ್ರತಿಭೆಯ ಖ್ಯಾತ ನಟ ಇರ್ಫಾನ್ ಖಾನ್ ಬುಧವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದರು. ಮಧ್ಯಾಹ್ನ ಅಂಧೇರಿಯ ವರ್ಸೋವಾ ಖಬರ್ ಸ್ತಾನ್ ಗೆ ಶವವನ್ನು ತೆಗೆದುಕೊಂಡು ಹೋಗಿದ್ದು, ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕೇವಲ ಕುಟುಂಬದ 20 ಮಂದಿ ಸದಸ್ಯರು ಮಾತ್ರ ಹಾಜರಿದ್ದರು ಎಂದು ವರದಿ ತಿಳಿಸಿದೆ.
ಖಬರ್ ಸ್ತಾನ್ ದೊಳಕ್ಕೆ ಐದು ಮಂದಿಯ ಒಂದೊಂದು ಗುಂಪಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅಂತಿಮ ವಿಧಿವಿಧಾನದ ಬಳಿಕ ಇಂದು 3ಗಂಟೆಗೆ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಶವವನ್ನು ದಫನ್ ಮಾಡಲಾಯಿತು. ಪ್ರತಿಯೊಬ್ಬರು ಖಾನ್ ಗೆ ಅಂತಿಮ ಗೌರವವನ್ನು ಸಲ್ಲಿಸಿದ್ದರು.
ಇರ್ಫಾನ್ ಖಾನ್ ಅವರು ಶಾಂತವಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ. ಅವರು ಇಂದು ಉತ್ತಮ ಸ್ಥಳದಲ್ಲಿದ್ದಾರೆ ಎಂದು ನಾವು ಭಾವಿಸುತ್ತೇವೆ. ಅವರು ತುಂಬಾ ಶಕ್ತಿಯುತವಾಗಿ ಹೋರಾಡಿದ್ದರು. ಅಂತಹ ಗಟ್ಟಿಗ ಮನುಷ್ಯನನ್ನು ಕಳೆದುಕೊಳ್ಳುವ ಮೂಲಕ ನಾವು ನಷ್ಟ ಅನುಭವಿಸುವಂತಾಗಿದೆ ಎಂದು ಅಧಿಕೃತವಾಗಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಇರ್ಫಾನ್ ಖಾನ್ ಕುಟುಂಬದ ನಿಕಟವರ್ತಿ ಸಂಬಂಧಿಕರನ್ನು ಹೊರತುಪಡಿಸಿ ಇತರ ಯಾವುದೇ ಸೆಲೆಬ್ರಿಟಿ ನಟರನ್ನು ಖಬರ್ ಸ್ತಾನದೊಳಕ್ಕೆ ಹೋಗಲು ಅನುಮತಿ ನೀಡಿಲ್ಲ. ಮಾರಣಾಂತಿಕ ಕೋವಿಡ್ 19 ವೈರಸ್ ಹನ್ನೆಲೆಯಲ್ಲಿ ಈ ಕಠಿಣ ಕ್ರಮ ತೆಗೆದುಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದ ವಾರಿಯರ್, ದ ನೇಮ್ ಸೇಕ್, ದ ಡಾರ್ಜಿಲಿಂಗ್ ಲಿಮಿಟೆಡ್, ಸ್ಲಮ್ ಡಾಗ್ ಮಿಲಿಯನೇರ್, ನ್ಯೂಯಾರ್ಕ್, ಐ ಲವ್ ಯೂ, ದ ಅಮೆಜಿಂಗ್ ಸ್ಪೈಡರ್ ಮ್ಯಾನ್, ಲೈಫ್ ಆಫ್ ಪೈ, ಜುರಾಸಿಕ್ ವರ್ಲ್ಡ್, ಮಕ್ಬೂಲ್ ಸೇರಿದಂತೆ 50ಕ್ಕೂ ಅಧಿಕ ಸಿನಿಮಾಗಳಲ್ಲಿ ಇರ್ಫಾನ್ ನಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
MUST WATCH
ಹೊಸ ಸೇರ್ಪಡೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ