Tollywood: ರಾಮ್ ಪೋತಿನೇನಿ – ಅನುಪಮಾ ಪರಮೇಶ್ವರನ್ ವಿವಾಹ? ನಟಿಯ ತಾಯಿ ಸ್ಪಷ್ಟನೆ


Team Udayavani, Oct 7, 2023, 11:45 AM IST

Tollywood: ರಾಮ್ ಪೋತಿನೇನಿ – ಅನುಪಮಾ ಪರಮೇಶ್ವರನ್ ವಿವಾಹ? ನಟಿಯ ತಾಯಿ ಸ್ಪಷ್ಟನೆ

ಹೈದರಾಬಾದ್:  ಯಂಗ್‌ & ಟ್ಯಾಲೆಂಟೆಡ್‌ ನಟರಲ್ಲಿ ಒಬ್ಬರಾಗಿರುವ ರಾಮ್ ಪೋತಿನೇನಿ ಅವರ ʼಸ್ಕಂದʼ ಸಿನಿಮಾ ಇತ್ತೀಚೆಗೆ ರಿಲೀಸ್‌ ಆಗಿದ್ದು, ಥಿಯೇಟರ್‌ ನಲ್ಲಿ ಪ್ರದರ್ಶನ ಕಾಣುತ್ತಿದೆ. ಸಿನಿಮಾಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಿನಿಮಾರಂಗ ಅಂದ್ಮೇಲೆ ಅಲ್ಲಿ ಗಾಸಿಪ್‌ ಗಳು ಇರಲೇಬೇಕು. ಕೆಲವೊಂದು ಈ ಸಲ ಗಾಸಿಪ್‌ ಗಳಿಂದ ಸೆಲೆಬ್ರಿಟಿಗಳು ಹೈರಾಣಾಗಿ ಹೋಗುತ್ತಾರೆ. ಇತ್ತೀಚೆಗೆ ಬಹುಭಾಷಾ ನಟಿ ಕೀರ್ತಿ ಸುರೇಶ್‌ ಹಾಗೂ ಸಂಗೀತ ಸಂಯೋಜಕ ಅನಿರುದ್ಧ್‌ ರವಿಚಂದರ್‌ ಅವರು ಮದುವೆ ಆಗಲಿದ್ದಾರೆ ಎನ್ನುವ ಸುದ್ದಿಯೊಂದು ಹಬ್ಬಿತ್ತು.

ಇದೀಗ ಅಂಥದ್ದೇ ಮತ್ತೊಂದು ಮ್ಯಾರೇಜ್‌ ಸುದ್ದಿ ಟಾಲಿವುಡ್‌ ರಂಗದಲ್ಲಿ ಹರಿದಾಡಿದೆ. ಟಾಲಿವುಡ್‌ ನಲ್ಲಿ ಜನಪ್ರಿಯ ನಟರಾಗಿರುವ ಹ್ಯಾಂಡ್ಸಮ್‌ ಹಂಕ್‌ ರಾಮ್‌ ಪೋತಿನೇನಿ ಅವರು ಬಹುಭಾಷಾ ನಟಿ ಅನುಪಮಾ ಪರಮೇಶ್ವರನ್ ಅವರೊಂದಿಗೆ ವಿವಾಹವಾಗಲಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲ ದಿನಗಳಿಂದ ಹರಿದಾಡುತ್ತಿದೆ.

ಈಗಾಗಲೇ ಆನ್‌ ಸ್ಕ್ರೀನ್‌ ನಲ್ಲಿ ʼಹಲೋ ಗುರು ಪ್ರೇಮ ಕೊಸಮೆʼ ʼವುನ್ನದಿ ಒಕತೆ ಜಿಂದಗಿʼ ಸಿನಿಮಾದಲ್ಲಿ ಜೊತೆಯಾಗಿ ನಟಿಸಿರುವ ರಾಮ್‌ ಹಾಗೂ ಅನುಪಮಾ ಅವರು ಉತ್ತಮ ಸ್ನೇಹಿತರಾಗಿದ್ದಾರೆ. ಸಿನಿಮಾದಲ್ಲಿ ಅವರಿಬ್ಬರ ಜೋಡಿಯನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದರು.

ರಿಯಲ್‌ ಲೈಫ್‌ ನಲ್ಲೂ ಅವರಿಬ್ಬರು ಪರಸ್ಪರ ಇಷ್ಟಪಡುತ್ತಿದ್ದಾರೆ. ಮದುವೆ ಆಗಲಿದ್ದಾರೆ ಎನ್ನುವ ಗಾಸಿಪ್‌ ತೆಲುಗು ಸಿನಿವಲಯದಲ್ಲಿ ಹರಿದಾಡಿದೆ.

ಸದ್ಯ ಈ ಸುದ್ದಿ ಹರಡುತ್ತಿದ್ದಂತೆ ನಟಿಯ ತಾಯಿ ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.  ಅನುಪಮಾ ಅವರ ತಾಯಿ ಸುನಿತಾ ಅವರು ಎಲ್ಲಾ ಊಹಾಪೋಹಗಳನ್ನು ಬಲವಾಗಿ ನಿರಾಕರಿಸಿದ್ದು, ಹರಿದಾಡುತ್ತಿರುವ ಸುದ್ದಿ ಆಧಾರರಹಿತ ಮತ್ತು ಸುಳ್ಳು ಎಂದು ಅವರು ಹೇಳಿರುವುದಾಗಿ ʼನ್ಯೂಸ್‌ 18ʼ ವರದಿ ಮಾಡಿದೆ.

ಮುಂಬರುವ ಸಿನಿಮಾದಲ್ಲಿ ಬ್ಯುಸಿಯಾದ ನಟ, ನಟಿ: ಸದ್ಯ ಈ ಬಗ್ಗೆ ಯಾವ ಪ್ರತಿಕ್ರಿಯೆ ನೀಡದಿರುವ ರಾಮ್‌ ಹಾಗೂ ಅನುಪಮಾ ತಮ್ಮ ಮುಂದಿನ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅನುಪಮಾ ಮಲ್ಲಿಕ್ ರಾಮ್ ಅವರ ʼಟಿಲ್ಲು ಸ್ಕ್ವೇರ್ʼ ಚಿತ್ರದಲ್ಲಿ ಸಿದ್ದು ಜೊನ್ನಲಗಡ್ಡ ಜೊತೆ ನಟಿಸಿದ್ದಾರೆ. ಈ ಚಿತ್ರವು ನವೆಂಬರ್ 10 ರಂದು ರಿಲೀಸ್‌ ಆಗಲಿದೆ.

ಇತ್ತ ರಾಮ್‌ ʼಸ್ಕಂದʼ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದ್ದು, ʼ ಡಬಲ್ ಇಸ್ಮಾರ್ಟ್ʼ  ಈ ಸಿನಿಮಾ ಮಾರ್ಚ್‌  8, 2024 ರಂದು ರಿಲೀಸ್‌ ಆಗಲಿದೆ.

 

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.