ಗಂಡನ ಮನೆ ತೊರೆಯಲು ಯೋಜಿಸಿದ್ದಾರಾ ನಟಿ ಶಿಲ್ಪಾ ಶೆಟ್ಟಿ ?
Team Udayavani, Aug 31, 2021, 2:43 PM IST
ಮುಂಬೈ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯವರು ಗಂಡನ ಮನೆ ತೊರೆದು ಮಕ್ಕಳ ಜೊತೆ ಪ್ರತ್ಯೇಕ ವಾಸ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ.
ಕಳೆದ ಕೆಲ ದಿನಗಳಿಂದ ಶಿಲ್ಪಾ ಶೆಟ್ಟಿಯವರನ್ನು ಸಂಕಷ್ಟಗಳು ಹುಡುಕಿಕೊಂಡು ಬರುತ್ತಿವೆ. ಈ ನಟಿಯ ಪತಿ ರಾಜ್ ಕುಂದ್ರಾ ಅವರನ್ನು ಅಶ್ಲೀಲ ಸಿನಿಮಾ ನಿರ್ಮಾಣ ಹಾಗೂ ವಿತರಣೆಯ ಆರೋಪದಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಅವರು ಜೈಲಿನಲ್ಲಿದ್ದಾರೆ.
ಈ ಪ್ರಕರಣ ಬೆಳಕಿಗೆ ಬಂದ ನಂತರ ಶಿಲ್ಪಾ ಶೆಟ್ಟಿ ಅವರ ವೈಯಕ್ತಿಕ ಜೀವನ ಮತ್ತು ವೃತ್ತಿ ಜೀವನದ ಮೇಲೆ ಗಾಢ ಪ್ರಭಾವ ಬೀರಿತು. ಶಿಲ್ಪಾ ಬಹಳ ಸಮಯದವರೆಗೆ ಸೂಪರ್ ಡ್ಯಾನ್ಸರ್ ನಲ್ಲಿ ಕಾಣಿಸಿಕೊಳ್ಳಲಿಲ್ಲ ಮತ್ತು ಈ ವಿವಾದದ ನಡುವೆ ಅನೇಕ ದೊಡ್ಡ ಬ್ರಾಂಡ್ ಗಳು ಸಹ ಅವರ ಕೈ ತಪ್ಪಿ ಹೋಯಿತು ಎಂದು ವರದಿಗಳು ಸೂಚಿಸುತ್ತವೆ.
ಶಿಲ್ಪಾ ಶೆಟ್ಟಿ ಅವರ ಸಮಸ್ಯೆಗಳು ಕಡಿಮೆಯಾಗಿಲ್ಲ ಎಂದು ಅವರ ಸ್ನೇಹಿತರೊಬ್ಬರು ತಿಳಿಸಿದ್ದಾರೆ. ರಾಜ್ ಕುಂದ್ರಾ ಅವರ ರಹಸ್ಯ ಬೆಳಕಿಗೆ ಬಂದಾಗಿನಿಂದ ಶಿಲ್ಪಾ ಶೆಟ್ಟಿ ಆಘಾತಕ್ಕೊಳಗಾಗಿದ್ದಾರೆ. ಅವರು ಪತಿ ಮನೆಯನ್ನು ತೊರೆದು ಬೇರೆ ಕಡೆ ವಾಸಮಾಡಲಿದ್ದಾರೆ ಎನ್ನಲಾಗುತ್ತಿದೆ.
‘ಶಿಲ್ಪಾ ಶೆಟ್ಟಿ ರಾಜ್ ಕುಂದ್ರಾ ಅವರ ಹಣವನ್ನು ಮುಟ್ಟಲು ಸಹ ಬಯಸುವುದಿಲ್ಲ’ ಎಂದು ಸ್ನೇಹಿತರೊಬ್ಬರು ಹೇಳಿರುವುದಾಗಿ ಮಾಧ್ಯಮ ವರದಿ ಹೇಳಿದೆ. ವರದಿಯ ಪ್ರಕಾರ, ‘ಶಿಲ್ಪಾ ಶೆಟ್ಟಿ ಕೆಲಸ ಮಾಡುತ್ತಿದ್ದಾರೆ ಮತ್ತು ಅವರು ತಮ್ಮ ಮಕ್ಕಳನ್ನು ನೋಡಿಕೊಳ್ಳಲು ಸ್ವತಂತ್ರ್ಯರಾಗಿದ್ದಾರೆ’ ಎಂದು ಹೇಳಿದರು. ಹಂಗಾಮಾ 2 ಮತ್ತು ನಿಕಮ್ಮಾ ನಂತರ ಬೇರೆ ಚಿತ್ರಗಳಲ್ಲಿ ನಟಿಸಲು ಸಿದ್ಧ ಎಂದು ಶಿಲ್ಪಾ ಶೆಟ್ಟಿ ಉದ್ಯಮದ ಎಲ್ಲರಿಗೂ ಹೇಳಿದ್ದಾರೆ ಎಂದು ಸ್ನೇಹಿತರೊಬ್ಬರು ಹೇಳಿರುವುದನ್ನು ವರದಿ ಉಲ್ಲೇಖಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ