ವಂಚನೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್ ಗೆ ದೇಶ ತೊರೆಯದಂತೆ ತಡೆದ ಅಧಿಕಾರಿಗಳು!
Team Udayavani, Dec 6, 2021, 8:42 AM IST
ಮುಂಬೈ: ಲುಕ್ ಔಟ್ ನೋಟಿಸ್ ಕಾರಣದಿಂದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ವಲಸೆ ಅಧಿಕಾರಿಗಳು ಭಾನುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ತಡೆದಿದ್ದಾರೆ. ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ ನಟಿಯ ವಿರುದ್ಧ ಜಾರಿ ನಿರ್ದೇಶನಾಲಯವು ಲುಕ್ ಔಟ್ ನೋಟಿಸ್ ತೆರೆದಿತ್ತು.
ಜಾಕ್ವೆಲಿನ್ ಫೆರ್ನಾಂಡಿಸ್ ಕಾರ್ಯಕ್ರಮವೊಂದಕ್ಕಾಗಿ ದುಬೈಗೆ ತೆರಳಿದ್ದರು. ಸಂಕ್ಷಿಪ್ತ ವಿಚಾರಣೆಯ ನಂತರ ಆಕೆಯನ್ನು ಬಿಡಲಾಗಿದೆ ಮತ್ತು ದೆಹಲಿಯ ತನಿಖಾ ಸಂಸ್ಥೆಯ ಮುಂದೆ ಹಾಜರಾಗಬೇಕೆಂದು ತಿಳಿಸಲಾಗಿದೆ.
ಇಂದು ದೆಹಲಿಯ ಕಚೇರಿಗೆ ಹಾಜರಾಗುವಂತೆ ಇಡಿ ಆಕೆಗೆ ಹೊಸದಾಗಿ ಸಮನ್ಸ್ ಜಾರಿ ಮಾಡಲಿದೆ.
ಇದನ್ನೂ ಓದಿ:ವರ್ಗಕ್ಕೆ ಶಿಫಾರಸು ತಂದರೆ ಎಚ್ಚರಿಕೆ! ಕೇಂದ್ರ ಸರಕಾರದಿಂದ ಸುತ್ತೋಲೆ ಜಾರಿ
200 ಕೋಟಿ ರೂ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ತನಿಖಾ ಸಂಸ್ಥೆ ಚಾರ್ಜ್ ಶೀಟ್ ಸಲ್ಲಿಸಿದೆ. ತಿಹಾರ್ ಜೈಲಿನಲ್ಲಿದ್ದ ಉದ್ಯಮಿಯೊಬ್ಬರ ಪತ್ನಿಯಿಂದ 200 ಕೋಟಿ ರೂ ಸುಲಿಗೆ ಮಾಡಿದ್ದಾರೆ ಎಂದು ಆರೋಪ ಸುಕೇಶ್ ಮೇಲಿದೆ. ಸುಕೇಶ್ ಚಂದ್ರಶೇಖರ್ ಜೊತೆ ಜಾಕ್ವೆಲಿನ್ ಫೆರ್ನಾಂಡಿಸ್ ಹಣಕಾಸಿನ ವಹಿವಾಟುಗಳನ್ನು ನಡೆಸಿರುವ ಪುರಾವೆಗಳನ್ನು ತನಿಖಾ ಸಂಸ್ಥೆ ಬಹಿರಂಗಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ