ಜ. 29ರಂದು ಮೈಸೂರಿನಲ್ಲಿ ಡಾ| ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ
Team Udayavani, Jan 12, 2023, 9:35 PM IST
ಮೈಸೂರು: ಡಾ| ವಿಷ್ಣುವರ್ಧನ್ ಅವರ ಸ್ಮಾರಕ ಜ.29ರಂದು ಮೈಸೂರಿನಲ್ಲಿ ಉದ್ಘಾಟನೆಯಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಮಾರಕವನ್ನು ಉದ್ಘಾಟಿಸಿ, ಸಾಹಸ ಸಿಂಹನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ಉದ್ಬೂರು ರಸ್ತೆಗೆ ಹೊಂದಿಕೊಂಡಿರುವ ಹಾಲಾಳು ಗ್ರಾಮದಲ್ಲಿ ವಿಷ್ಣು ಸ್ಮಾರಕದ ಕೆಲಸ ಭರದಿಂದ ಸಾಗಿದ್ದು, ದಿಲ್ಲಿಯ ರಾಜಪಥದಲ್ಲಿ ಇತ್ತೀಚೆಗೆ ಅನಾವರಣಗೊಂಡ ನೇತಾಜಿ ಪ್ರತಿಮೆಯ ರೂವಾರಿ, ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೆತ್ತನೆಯಲ್ಲಿ ಆರು ಅಡಿ ಎತ್ತರದ ವಿಷ್ಣು ದಾದಾ ಪ್ರತಿಮೆ ಪ್ರತಿಷ್ಠಾಪನೆಗೆ ಸಿದ್ಧವಾಗುತ್ತಿದೆ.
ಸ್ಮಾರಕಕ್ಕಾಗಿ ಸರಕಾರ ಸುಮಾರು 11 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, 2021ರಿಂದ ಕಾಮಗಾರಿ ಕೆಲಸ ಆರಂಭವಾಗಿದೆ. ಬೆಂಗಳೂರಿನ ಎಂ.9 ಕಂಪೆನಿಯ ನಿಶ್ಚಲ್ ಅವರು ಸ್ಮಾರಕದ ರೂಪುರೇಷೆ ಸಿದ್ಧಪಡಿಸಿದ್ದಾರೆ. ಕೃಷ್ಣ ಶಿಲೆಯಲ್ಲಿ ಕೆತ್ತಲಾದ ವಿಷ್ಣುವಿನ ಪ್ರತಿಮೆ ಸುತ್ತಲೂ ವೃತ್ತಾಕಾರದ ಫೋಟೋ ಗ್ಯಾಲರಿ, ಗ್ಯಾಲರಿಯ ಇಬ್ಬದಿಯಲ್ಲೂ ವಿಷ್ಣುವರ್ಧನ್ ಅಭಿನಯದ ಸಿನೆಮಾಗಳ ಡಿಜಿಟಲ್ ಪೋಸ್ಟರ್ ಪ್ರದರ್ಶನ ಇರಲಿದೆ. ಸ್ಮಾರಕ 5 ಎಕ್ರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ