ಅನಾರೋಗ್ಯ…ಬಹುಭಾಷಾ ನಟ ಕಮಲಹಾಸನ್ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲು
ದಂತಕಥೆ ನಿರ್ದೇಶಕ ಕೆ.ವಿಶ್ವನಾಥ್ ಅವರನ್ನು ಹೈದರಾಬಾದ್ ನಲ್ಲಿ ಭೇಟಿಯಾಗಿದ್ದರು
Team Udayavani, Nov 24, 2022, 10:39 AM IST
ಚೆನ್ನೈ: ಬಹುಭಾಷಾ ನಟ, ಉಳಗನಾಯಕನ್ ಕಮಲ್ ಹಾಸನ್ ಅನಾರೋಗ್ಯದಿಂದಾಗಿ ಬುಧವಾರ (ನವೆಂಬರ್ 23) ಶ್ರೀರಾಮಚಂದ್ರ ಮೆಡಿಕಲ್ ಸೆಂಟರ್(ಎಸ್ ಆರ್ ಎಂಸಿ)ಗೆ ದಾಖಲಾಗಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಸುರತ್ಕಲ್: ಗುಜರಿ ಗೋದಾಮಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ
ಜ್ವರದಿಂದ ಬಳಲುತ್ತಿರುವ ಕಮಲ್ ಹಾಸನ್ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಟ ಕಮಲ್ ಹಾಸನ್ ಅವರು ಇಂದು (ನ.24) ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗುವ ಸಾಧ್ಯತೆ ಇದ್ದಿರುವುದಾಗಿ ಮೂಲಗಳು ಹೇಳಿವೆ.
ಇತ್ತೀಚೆಗೆ ಕಮಲ್ ಹಾಸನ್ ತಮ್ಮ ಮಾರ್ಗದರ್ಶಕ, ದಂತಕಥೆ ನಿರ್ದೇಶಕ ಕೆ.ವಿಶ್ವನಾಥ್ ಅವರನ್ನು ಹೈದರಾಬಾದ್ ನಲ್ಲಿ ಭೇಟಿಯಾಗಿದ್ದರು. ಇಬ್ಬರ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಹೈದರಾಬಾದ್ ನಿಂದ ಮರಳಿದ್ದ ಕಮಲ್ ಹಾಸನ್ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ನಂತರ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಕಮಲ್ ಹಾಸನ್ ಅವರು ತಮಿಳಿನ ಬಿಗ್ ಬಾಸ್ ಸೀಸನ್ 6ರ ಕಾರ್ಯಕ್ರಮದಲ್ಲಿ ತೊಡಗಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?