
“ನಾನು ಇಂಥ ಸಿನಿಮಾಗಳಿಗೆ..” The Kerala Story ಬಗ್ಗೆ ನಟ ಕಮಲ್ ಹಾಸನ್ ಹೇಳಿದ್ದೇನು?
Team Udayavani, May 27, 2023, 5:54 PM IST

ಚೆನ್ನೈ: ಮೇ.5 ರಂದು ತೆರೆಕಂಡ ʼದಿ ಕೇರಳ ಸ್ಟೋರಿʼ ವಿವಾದದಿಂದಲೇ ಸುದ್ದಿಯಾಗಿ ಬಾಕ್ಸ್ ಆಫೀಸ್ ನಲ್ಲಿ 200 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ.
ಮೊದಲು ಬ್ಯಾನ್ ಬಿಸಿ ತಟ್ಟಿ, ಒಂದಷ್ಟು ರಾಜ್ಯದಲ್ಲಿ ಸಿನಿಮಾ ರಿಲೀಸ್ ಮಾಡುವುದಕ್ಕೂ ಅಡ್ಡಿ ಉಂಟಾದರೂ ಅಂತಿಮವಾಗಿ ಸಿನಿಮಾ ಇದೆಲ್ಲವನ್ನು ಮೀರಿ ಪ್ರೇಕ್ಷಕರ ಮನ ಗೆದ್ದಿದೆ. ಸಿನಿಮಾವನ್ನು ಹಲವು ರಾಜ್ಯದಲ್ಲಿ ಟ್ಯಾಕ್ಸ್ ಫ್ರೀಗೊಳಿಸಲಾಗಿದೆ. ಕೆಲಕಡೆ ವಿದ್ಯಾರ್ಥಿನಿಯರಿಗೆ ಸಿನಿಮಾವನ್ನು ಉಚಿತವಾಗಿ ತೋರಿಸಲಾಗುತ್ತಿದೆ.
ಸಿನಿಮಾ ರಿಲೀಸ್ ಆದಾಗಿನಿಂದ ಲೀಡ್ ರೋಲ್ ನಲ್ಲಿ ನಟಿಸಿರುವ ಅದಾ ಶರ್ಮಾ ಸೇರಿದಂತೆ ನಿರ್ದೇಶಕ ಸುದೀಪ್ತೋ ಸೇನ್ ಅವರು ಸುದ್ದಿಯಲ್ಲಿದ್ದಾರೆ. ಸಿನಿಮಾದ ಪರವಾಗಿ ಅನೇಕ ಸೆಲೆಬ್ರಿಟಿಗಳು ನಿಂತಿದ್ದಾರೆ. ಅಷ್ಟೇ ದೊಡ್ಡಮಟ್ಟದಲ್ಲಿ ಕೆಲ ಸೆಲೆಬ್ರಿಟಿಗಳು ಸೇರಿದಂತೆ ಗಣ್ಯರು ಸಿನಿಮಾದ ಬಗ್ಗೆ ತಮ್ಮದೇ ಆದ ವ್ಯಾಖ್ಯಾನವನ್ನು ನೀಡಿದ್ದಾರೆ.
ಕಾಲಿವುಡ್ ದಿಗ್ಗಜ ನಟ, ರಾಜಕೀಯವಾಗಿಯೂ ಗುರುತಿಸಿಕೊಂಡಿರುವ ಕಮಲ್ ಹಾಸನ್ ಅವರು ʼದಿ ಕೇರಳ ಸ್ಟೋರಿʼ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.
“ನಾನು ಇಂಥ ನಿರ್ದಿಷ್ಟ ಉದ್ದೇಶವನ್ನು ಇಟ್ಟುಕೊಂಡು ಬರುವ ಸಿನಿಮಾಗಳಿಗೆ ವಿರುದ್ದವಾಗಿದ್ದೇನೆ. ಸಿನಿಮಾದ ಪೋಸ್ಟರ್ ಕೊನೆಯಲ್ಲಿ ಇದು ʼಸತ್ಯ ಘಟನೆ ಆಧಾರಿತʼ ಸಿನಿಮಾ ಎಂದು ಬರೆದರೆ ಮಾತ್ರ ಸಾಕಾಗುವುದಿಲ್ಲ. ಅದು ನಿಜವಾಗಿಯೂ ಸತ್ಯವಾಗಿರಬೇಕು ಮತ್ತು ಈ ಇದು ನಿಜವಾಗಿಲ್ಲ” ಎಂದು ಸಿನಿಮಾದ ಬಗ್ಗೆ ಅವರು ʼಇಂಡಿಯಾ ಟುಡೇʼಗೆ ಹೇಳಿದ್ದಾರೆ.
ಕೇರಳದ ಹಿಂದೂ ಯುವತಿಯೊಬ್ಬಳು ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡು ಆ ಬಳಿಕ ಐಸಿಸ್ ಉಗ್ರ ಸಂಘಟನೆಗೆ ಸೇರುವ ಕಥೆ ʼದಿ ಕೇರಳ ಸ್ಟೋರಿʼಯಲ್ಲಿ ಹೇಳಲಾಗಿದೆ. ಇಂಥ 32 ಸಾವಿರ ಕೇರಳದ ಮಹಿಳೆಯರು ಮತಾಂತರಗೊಂಡು ಉಗ್ರ ಸಂಘಟನೆಗೆ ಸೇರಿದ್ದರು ಎಂದು ಸಿನಿಮಾದ ಟೀಸರ್ ನಲ್ಲಿ ಚಿತ್ರತಂಡ ಹೇಳಿತ್ತು. ಈ ಕಾರಣದಿಂದ ಸಿನಿಮಾಕ್ಕೆ ಭಾರೀ ವಿರೋಧ ವ್ಯಕ್ತವಾದ ಬಳಿಕ, 32 ಸಾವಿರದ ಸಂಖ್ಯೆಯನ್ನು 3 ಎಂದು ಬದಲಾಯಿಸಲಾಗಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leo 2nd Song ರಿಲೀಸ್: “Badass” ಮೂಲಕ ಹೈಪ್ ಹೆಚ್ಚಿಸಿದ ʼಲಿಯೋದಾಸ್ʼ

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Animal teaser ರಿಲೀಸ್: ʼಡಾರ್ಲಿಂಗ್ʼ ಎಂದು ರಶ್ಮಿಕಾಗೆ ಶುಭಕೋರಿದ ದೇವರಕೊಂಡ

Jawan ತಂಡದಿಂದ ಪ್ರೇಕ್ಷಕರಿಗೆ ʼಬೈ1 ಗೆಟ್ 1 ಫ್ರೀʼ ಟಿಕೆಟ್ ಆಫರ್ ಘೋಷಿಸಿದ ಶಾರುಖ್ ಖಾನ್

Animal Teaser: ಸಿರಿವಂತನ ರಗಡ್ ಕಹಾನಿ; ಮಾಸ್ ಲುಕ್ ನಲ್ಲಿ ಮಿಂಚಿದ ʼರಾಕ್ ಸ್ಟಾರ್ʼ
MUST WATCH
ಹೊಸ ಸೇರ್ಪಡೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ