Bollywood: ʼತೇಜಸ್‌ʼ ಸಿನಿಮಾ ನೋಡಿ ಯೋಗಿ ಆದಿತ್ಯನಾಥ್‌ ಭಾವುಕರಾದರು.. ನಟಿ ಕಂಗನಾ


Team Udayavani, Oct 31, 2023, 6:09 PM IST

Bollywood: ʼತೇಜಸ್‌ʼ ಸಿನಿಮಾ ನೋಡಿ ಯೋಗಿ ಆದಿತ್ಯನಾಥ್‌ ಭಾವುಕರಾದರು.. ನಟಿ ಕಂಗನಾ

ಲಕ್ನೋ: ನಟಿ ಕಂಗನಾ ರಣಾವತ್‌ ಅವರ ʼತೇಜಸ್‌ʼ ಸಿನಿಮಾ ಇತ್ತೀಚೆಗೆ ತೆರೆಕಂಡಿದೆ. ಸಿನಿಮಾಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ನಡುವೆ ʼತೇಜಸ್‌ʼ ಸಿನಿಮಾದ ವಿಶೇಷ ಪ್ರದರ್ಶನವನ್ನು ಚಿತ್ರತಂಡ ಆಯೋಜಿಸಿದ್ದು, ಸಿನಿಮಾವನ್ನು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ಅವರು ಮೆಚ್ಚಿಕೊಂಡಿದ್ದಾರೆ ಎಂದು ಕಂಗನಾ ಹೇಳಿದ್ದಾರೆ.

ನಟಿ ಕಂಗನಾ ಅವರ ʼತೇಜಸ್‌ʼ ಸಿನಿಮಾದ ವಿಶೇಷ ಸ್ಕ್ರೀನಿಂಗ್‌ ನ್ನು ಲಕ್ನೋದ ಲೋಕಭವನ ಸಭಾಂಗಣದಲ್ಲಿ ಮಂಗಳವಾರ(ಅ.31 ರಂದು) ಆಯೋಜಿಸಲಾಗಿತ್ತು. ಇದರಲ್ಲಿ ಯುಪಿ ಸಿಎಂ ಆದಿತ್ಯನಾಥ್‌,ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.

ಸಿನಿಮಾವನ್ನು ನೋಡಿ ಆದಿತ್ಯನಾಥ್‌ ಅವರು ಭಾವುಕರಾದರು ಎಂದು ನಟಿ ಕಂಗನಾ ಹೇಳಿದ್ದಾರೆ. ಈ ಬಗ್ಗೆ ʼಎಎನ್‌ ಐʼ ಜೊತೆ ಮಾತನಾಡಿದ ಅವರು, “ಯೋಗಿ ಆದಿತ್ಯನಾಥ್‌ ಅವರು ʼತೇಜಸ್‌ʼ ಸಿನಿಮಾವನ್ನು ಇಷ್ಟಪಟ್ಟರು. ಚಿತ್ರ ರಾಷ್ಟ್ರೀಯವಾದವನ್ನು ಸಂಪರ್ಕಿಸಲು ಪ್ರೇರೇಪಿಸುವುದಾಗಿ ಹೇಳಿದರು. ಯೋಗಿ ಆದಿತ್ಯನಾಥ್‌ ಅವರು ಸಿನಿಮಾ ನೋಡುವಾಗ ಭಾವುಕರಾದರು. ಅವರು ಕಣ್ಣೀರನ್ನು ತಡೆಯಲು ಆಗಿಲ್ಲ. ಅವರು ನಮ್ಮನ್ನು ಮತ್ತು ನಮ್ಮ ಚಲನಚಿತ್ರವನ್ನು ನಮ್ಮ ಎಲ್ಲಾ ಶತ್ರುಗಳು ಮತ್ತು ದೇಶವಿರೋಧಿ ಅಂಶಗಳಿಂದ ರಕ್ಷಿಸುವುದಾಗಿ, ಸಿನಿಮಾ ನೋಡಲು ರಾಷ್ಟ್ರೀಯವಾದಿಗಳನ್ನು ಪ್ರೇರೇಪಿಸುವುದಾಗಿ ಅವರು ಹೇಳಿದರು” ಎಂದು ನಟಿ ಹೇಳಿದ್ದಾರೆ.

ʼತೇಜಸ್’ ಸಿನಿಮಾವನ್ನು ಶಾಲಾ-ಕಾಲೇಜುಗಳಲ್ಲಿ ಪ್ರದರ್ಶಿಸಬೇಕು. ಇದರಿಂದ ಭಾರತೀಯ ವಾಯುಪಡೆಯ ಬಗ್ಗೆ ಹೆಮ್ಮೆಯ ಭಾವನೆ ಯುವಜನರ ಮನಸ್ಸಿನಲ್ಲಿ ಮೂಡುತ್ತದೆ ಎಂದು ಕಂಗನಾ ಹೇಳಿದ್ದಾರೆ.

ಸರ್ವೇಶ್ ಮೇವಾರ ನಿರ್ದೇಶನದ ʼತೇಜಸ್‌ʼ ಸಿನಿಮಾಕ್ಕೆ ನಿರೀಕ್ಷೆಗೆ ತಕ್ಕ ಪ್ರತಿಕ್ರಿಯೆ ಕೇಳಿ ಬರುತ್ತಿಲ್ಲ. ಇದುವರೆಗೆ ಸಿನಿಮಾ 4.25 ಕೋಟಿ ರೂ.ವನ್ನು ಮಾತ್ರಗಳಿಸಿದೆ.

ಕಂಗನಾ ಜೊತೆ ಸಿನಿಮಾದಲ್ಲಿ ಅಂಶುಲ್ ಚೌಹಾಣ್, ವರುಣ್ ಮಿತ್ರ, ಆಶಿಶ್ ವಿದ್ಯಾರ್ಥಿ, ವಿಶಾಕ್ ನಾಯರ್, ಕಶ್ಯಪ್ ಶಂಗಾರಿ, ಸುನಿತ್ ಟಂಡನ್, ರಿಯೊ ಕಪಾಡಿಯಾ, ಮೋಹನ್ ಅಗಾಶೆ ಮತ್ತು ಮುಷ್ತಾಕ್ ಕಾಕ್ ಮುಂತಾದವರು ನಟಿಸಿದ್ದಾರೆ.

 

 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.