ಡ್ರಗ್‌ ನಂಟಿದ್ದರೆ ಸಾಬೀತುಪಡಿಸಿ; ಮುಂಬಯಿ ಪೊಲೀಸರಿಗೆ ಕಂಗನಾ ಸವಾಲು


Team Udayavani, Sep 9, 2020, 6:15 AM IST

ಡ್ರಗ್‌ ನಂಟಿದ್ದರೆ ಸಾಬೀತುಪಡಿಸಿ; ಮುಂಬಯಿ ಪೊಲೀಸರಿಗೆ ಕಂಗನಾ ಸವಾಲು

ಮುಂಬಯಿ: “ನನ್ನನ್ನು ಈಗಲೇ ಡ್ರಗ್‌ ಪರೀಕ್ಷೆಗೆ ಒಳಪಡಿಸಿ. ಡ್ರಗ್‌ ಡೀಲರ್‌ಗಳೊಂದಿಗೆ ನಾನು ನಂಟು ಹೊಂದಿರುವುದು ಸಾಬೀತಾ­ದರೆ, ನಾನು ಮುಂಬಯಿ ಬಿಟ್ಟು ತೆರಳುತ್ತೇನೆ.’ ಹೀಗೆಂದು ಮುಂಬಯಿ ಪೊಲೀಸರಿಗೆ ಸವಾಲು ಹಾಕಿರುವುದು ಬಾಲಿವುಡ್‌ ನಟಿ ಕಂಗನಾ ರಣೌತ್‌. ಕಂಗನಾ ಅವರ ಮಾಜಿ ಪ್ರಿಯಕರ ಅಧ್ಯಾಯನ್‌ ಸುಮನ್‌ ಎಂಬ­ವರು ಈ ಹಿಂದೆ ನೀಡಿದ್ದ ಸಂದರ್ಶನ­ವೊಂದರಲ್ಲಿ, ಕಂಗನಾ ಡ್ರಗ್‌ ಸೇವಿಸುತ್ತಾರೆ ಮಾತ್ರವಲ್ಲ ನನಗೂ ಸೇವಿಸುವಂತೆ ಬಲ­ವಂತ­­ಪಡಿಸಿದ್ದರು ಎಂದು ಹೇಳಿದ್ದರು.

ಈ ಹೇಳಿಕೆ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಶಿವಸೇನೆ ಶಾಸಕ ಸುನೀಲ್‌ ಪ್ರಭು ಮತ್ತು ಪ್ರತಾಪ್‌ ಸರ್‌ನಾಯಕ್‌ ಸರಕಾರವನ್ನು ಮನವಿ ಮಾಡಿದ್ದು, ಅದಕ್ಕೆ ಮಹಾರಾಷ್ಟ್ರ ಸರಕಾರ ಒಪ್ಪಿದೆ. ಈ ಕುರಿತು ಮಂಗಳವಾರ ಮಾಹಿತಿ ನೀಡಿದ ಗೃಹ ಸಚಿವ ಅನಿಲ್‌ ದೇಶ್‌ಮುಖ್‌, ಡ್ರಗ್‌ ವಿಚಾರ ಸಂಬಂಧ ಕಂಗನಾ ವಿರುದ್ಧ ತನಿಖೆಗೆ ಆದೇಶಿಸುತ್ತಿರುವುದಾಗಿ ಘೋಷಿಸಿದ್ದಾರೆ.

ಇದಾದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕಂಗನಾ, “ಮುಂಬಯಿ ಪೊಲೀಸರಿಗೆ ನಾನು ಸಂಪೂರ್ಣ ಸಹಕಾರ ನೀಡುತ್ತೇನೆ. ದಯ­ವಿಟ್ಟು ನನ್ನ ರಕ್ತದ ಮಾದರಿ ಸಂಗ್ರಹಿಸಿ, ನನ್ನನ್ನು ಡ್ರಗ್‌ ಪರೀಕ್ಷೆಗೆ ಒಳಪಡಿಸಿ. ನನ್ನ ದೂರವಾಣಿ ಕರೆಗಳ ವಿವರಗಳನ್ನೂ ಪಡೆದು, ತನಿಖೆ ನಡೆಸಿ. ನನಗೆ ಯಾರಾದರೂ ಡ್ರಗ್‌ ಡೀಲರ್‌ಗಳೊಂದಿಗೆ ಲಿಂಕ್‌ ಇರುವುದು ಸಾಬೀತು ಮಾಡಿದರೆ, ನಾನು ತಪ್ಪೊಪ್ಪಿಕೊಳ್ಳು­ತ್ತೇನೆ. ಮಾತ್ರವಲ್ಲ, ಆ ಕ್ಷಣದಲ್ಲೇ ಮುಂಬಯಿ ಬಿಟ್ಟು ತೆರಳುತ್ತೇನೆ’ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಸರಕಾರ ಮತ್ತು ಕಂಗನಾ ವಿರುದ್ಧ ಕಳೆದ ಕೆಲವು ದಿನಗಳಿಂದ ನಡೆಯುತ್ತಿ­ರುವ ಜಟಾಪಟಿಯ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ಕುತೂಹಲ ಮೂಡಿಸಿದೆ. ಇನ್ನೊಂದೆಡೆ, ಕಂಗನಾ ಅವರು ಸ್ಥಳೀಯಾಡ­ಳಿತದ ಅನುಮತಿ ಪಡೆಯದೇ ಮುಂಬಯಿ ಯಲ್ಲಿ­ರುವ ತಮ್ಮ ಕಚೇರಿಯಲ್ಲಿ 12ಕ್ಕೂ ಹೆಚ್ಚು ಬದಲಾವಣೆಗಳನ್ನು ಮಾಡಿದ್ದಾರೆ ಎಂದು ಬಿಎಂಸಿ ಆರೋಪಿಸಿದೆ. ಈ ಕುರಿತ ನೋಟಿಸ್‌ವೊಂದನ್ನು ಕಚೇರಿ ಹೊರಗೆ ಅಂಟಿಸಲಾಗಿದೆ.

“ದೇವರು ನಮ್ಮೊಂದಿಗಿದ್ದಾನೆ’
ರಿಯಾ ಚಕ್ರವರ್ತಿಯನ್ನು ಎನ್‌ಸಿಬಿ ಬಂಧಿಸು­ತ್ತಿದ್ದಂತೆ ಸುಶಾಂತ್‌ ಸಿಂಗ್‌ ಅವರ ಸಹೋದರಿ ಶ್ವೇತಾ ಸಿಂಗ್‌ “ದೇವರು ನಮ್ಮೊಂದಿಗಿ­ದ್ದಾನೆ’ ಎಂದು ಟ್ವೀಟ್‌ ಮಾಡಿದ್ದಾರೆ. ಇನ್ನೊಂದೆಡೆ, ಮಂಗಳವಾರ 3ನೇ ದಿನದ ವಿಚಾರಣೆ ವೇಳೆ ಎನ್‌ಸಿಬಿ ಮುಂದೆ ಹಾಜರಾಗಿದ್ದ ರಿಯಾ, ಕಳೆದ ವಾರವಷ್ಟೇ ಬಂಧಿತನಾದ ಸಹೋದರ ಶೋವಿಕ್‌ಗೆ ಮುಖಾ­ಮುಖಿ­ಯಾಗಿದ್ದಾರೆ. ಸೋದರನನ್ನು ನೋಡು­ತ್ತಿದ್ದಂತೆ ರಿಯಾ ಕಣ್ಣೀರಿಟ್ಟಿದ್ದಾರೆ ಎಂದು ಮೂಲ­ಗಳು ಹೇಳಿವೆ.

ಸುಶಾಂತ್‌ ಸೋದರಿ ವಿರುದ್ಧ ಎಫ್ಐಆರ್‌
ಸುಶಾಂತ್‌ರ ಮಾನಸಿಕ ಕಾಯಿಲೆಗೆ ಔಷಧ ನೀಡುವಾಗ ವೈದ್ಯರ ಔಷಧ ಚೀಟಿಯನ್ನು ಫೋರ್ಜರಿ ಮಾಡಲಾಗಿದೆ ಎಂದು ಆರೋ­ಪಿಸಿ ರಿಯಾ ಸಲ್ಲಿಸಿದ್ದ ದೂರಿನ ಮೇರೆಗೆ ಮುಂಬಯಿ ಪೊಲೀಸರು ಸುಶಾಂತ್‌ ಸೋದರಿ ವಿರುದ್ಧ ಎಫ್ಐಆರ್‌ ದಾಖಲಿಸಿದ್ದಾರೆ. ಸುಶಾಂತ್‌ ಕುಟುಂಬದ ವಕೀಲರು ಈ ಎಫ್ಐಆರ್‌ ಕಾನೂನು­ಬಾಹಿರ ಎಂದಿದ್ದಾರೆ. ಜತೆಗೆ, ಎಫ್ಐಆರ್‌ ವಜಾಕ್ಕೆ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಅಥವಾ ರಿಯಾ ವಿರುದ್ಧ ಮಾನಹಾನಿ ಕೇಸ್‌ ದಾಖಲಿ­­ಸಲು ಯೋಚಿಸಿದ್ದೇವೆ ಎಂದಿದ್ದಾರೆ.

ಟಾಪ್ ನ್ಯೂಸ್

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.