“ಕಾಂತಾರ’ದ “ವರಾಹ ರೂಪಂ’ ಹಾಡಿನ ಪ್ರಸಾರಕ್ಕೆ ಕೋರ್ಟ್ ತಡೆ
ಕೂಡಲೇ ಹಾಡಿನ ಪ್ರಸಾರ ಸ್ಥಗಿತಗೊಳಿಸುವಂತೆ ಆದೇಶ
Team Udayavani, Oct 29, 2022, 7:50 AM IST
ಕಲ್ಲಿಕೋಟೆ: ಥೈಕುಡಂ ಬ್ರಿಡ್ಜ್ ಸಂಗೀತ ಬ್ಯಾಂಡ್ನ ಅನುಮತಿಯಿಲ್ಲದೇ “ವರಾಹ ರೂಪಂ’ ಹಾಡನ್ನು ಪ್ರಸಾರ ಮಾಡುವಂತಿಲ್ಲ ಎಂದು “ಕಾಂತಾರ’ ಚಿತ್ರತಂಡಕ್ಕೆ ಕೇರಳದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧ ಹೇರಿದೆ.
ಥಿಯೇಟರ್ಗಳಲ್ಲಿ ಹಾಗೂ ಸ್ಟ್ರೀಮಿಂಗ್ ಪ್ಲಾಟ್ಫಾರಂಗಳಲ್ಲಿ ಈ ಹಾಡಿನ ಪ್ರಸಾರವನ್ನು ಸ್ಥಗಿತಗೊಳಿಸುವಂತೆ ಶುಕ್ರವಾರ ನ್ಯಾಯಾಲಯ ಆದೇಶಿಸಿದೆ. “ಕಾಂತಾರ’ ಸಿನಿಮಾದಲ್ಲಿನ ವರಾಹ ರೂಪಂ ಹಾಡಿನ ಕೆಲವು ಭಾಗಗಳನ್ನು ನಮ್ಮ ಒರಿಜಿನಲ್ “ನವರಸಂ’ ಹಾಡಿನಿಂದ ನೇರವಾಗಿ ಎತ್ತಲಾಗಿದೆ ಎಂದು ಆರೋಪಿಸಿ ಥೈಕುಡಂ ಬ್ರಿಡ್ಜ್ ಸಂಗೀತ ಬ್ಯಾಂಡ್ ಕೇರಳದ ಕೋರ್ಟ್ ಮೆಟ್ಟಿಲೇರಿತ್ತು.
ಈ ಹಿನ್ನೆಲೆಯಲ್ಲಿ ಶುಕ್ರವಾರ ಆದೇಶ ಹೊರಡಿಸಿರುವ ಕೋರ್ಟ್, “ವರಾಹ ರೂಪಂ ಹಾಡಿನ ಪ್ರಸಾರ ಕೂಡಲೇ ಸ್ಥಗಿತಗೊಳಿಸಬೇಕು’ ಎಂದು ಕಾಂತಾರ ಚಿತ್ರತಂಡಕ್ಕೆ ಸೂಚಿಸಿದೆ. ಜತೆಗೆ, ಬ್ಯಾಂಡ್ನ ಒಪ್ಪಿಗೆಯಿಲ್ಲದೇ ಹಾಡನ್ನು ಬಳಸಬಾರದು ಎಂದು ಅಮೆಜಾನ್, ಯೂಟ್ಯೂಬ್, ನ್ಪೋಟಿಫೈ, ಜಿಯೋಸಾವನ್ ಮತ್ತು ಇತರೆ ಸಂಗೀತ ವಿತರಣಾ ಪ್ಲಾಟ್ಫಾರಂಗಳಿಗೆ ನಿರ್ದೇಶನ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ