ನನ್ನ ಮಕ್ಕಳಿಗೆ ಬೇಡವೇ ಬೇಡ ಬಣ್ಣದ ಲೋಕದ ಬದುಕು : ನಟಿ ಕರೀನಾ ಕಪೂರ್


Team Udayavani, Aug 17, 2021, 3:56 PM IST

ghftyrt

ಮುಂಬೈ: ಬಾಲಿವುಡ್ ನಟಿ ಕರೀನಾ ಕಪೂರ್ ತಮ್ಮಿಬ್ಬರು ಮಕ್ಕಳನ್ನು ಸಿನಿಮಾ ರಂಗಕ್ಕೆ ಪರಿಚಯಿಸುವುದಿಲ್ಲ ಎಂದಿದ್ದಾರೆ. ತನ್ನ ಮಕ್ಕಳು ಹೀರೋ ಆಗುವುದು ನನಗೆ ಇಷ್ಟವಿಲ್ಲ ಎಂದು ನುಡಿದಿದ್ದಾರೆ.

ಬಾಲಿವುಡ್ ಬೆಬೋ ಕರೀನಾ ಕಪೂರ್ ಅವರದು ಚಿತ್ರರಂಗದ ಹಿನ್ನೆಲೆಯುಳ್ಳ ಕುಟುಂಬ. ಇವರ ಪತಿ ಸೈಫ್ ಅಲಿಖಾನ್ ಕೂಡ ಬಾಲಿವುಡ್ ಜೊತೆ ನಂಟು ಹೊಂದಿದವರೆ. ಸೈಫ್ ಅಲಿಖಾನ್ ಅವರ ತಾಯಿ ಸಿನಿಮಾ ನಟಿಯಾಗಿ ಖ್ಯಾತಿ ಪಡೆದಿದ್ದರು. ಕಪೂರ್ ಕುಟುಂಬವಂತೂ ಬಾಲಿವುಡ್ ನಲ್ಲಿ ಬೆರೆತುಕೊಂಡಿದ್ದು ಎಲ್ಲರಿಗೂ ತಿಳಿದಿರುವ ವಿಚಾರ. ಹೀಗೆ ಬಣ್ಣದ ಲೋಕವನ್ನೇ ಉಸಿರಾಗಿಸಿಕೊಂಡಿರುವ ಕುಟುಂಬದಿಂದ ಬಂದಿರುವ ನಟಿ ಕರೀನಾ ಕಪೂರ್, ಇದೀಗ ತಮ್ಮ ಮಕ್ಕಳನ್ನು ಬಣ್ಣದ ಲೋಕದಿಂದ ದೂರವಿಡಲು ನಿರ್ಧರಿಸಿದ್ದಾರೆ.

ಸಿನಿಮಾ ನಟ-ನಟಿಯರ ಮಕ್ಕಳು ಚಿತ್ರರಂಗಕ್ಕೆ ಕಾಲಿವುಡುವುದು ಸಾಮಾನ್ಯ. ಬಾಲಿವುಡ್ ಸೇರಿದಂತೆ ಇತರೆ ಚಿತ್ರರಂಗದಲ್ಲಿ ಇಂತಹ ಸಾಕಷ್ಟು ಉದಾಹರಣೆಗಳು ನಮ್ಮ ಕಣ್ಮುಂದೆ ಇವೆ. ಸೆಲೆಬ್ರಿಟಿ ತಂದೆ-ತಾಯಿಗಳು ಕೂಡ ತಮ್ಮ ಮಕ್ಕಳನ್ನು ಚಿತ್ರರಂಗಕ್ಕೆ ಕರೆತಂದು, ಅವರ ಬೆನ್ನೆಲುಬಾಗಿ ನಿಲ್ಲುತ್ತಾರೆ. ಆದರೆ, ಕರೀನಾ ಮಾತ್ರ ತನ್ನ ಮಕ್ಕಳು ಹೀರೋ ಆಗುವುದಕ್ಕೆ ಬಿಡುವುದಿಲ್ಲ ಎಂದು ತಮ್ಮ ದೃಢ ನಿರ್ಧಾರ ಪ್ರಕಟಿಸಿದ್ದಾರೆ.

ಇತ್ತೀಚಿಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಅವರು, ನನ್ನ ಇಬ್ಬರು ಮಕ್ಕಳನ್ನು ಒಳ್ಳೆಯ ವ್ಯಕ್ತಿಗಳನ್ನಾಗಿ (ಸಜ್ಜನರು) ಬೆಳೆಸಬೇಕೆಂದು ನಾನು ಬಯಸುತ್ತೇನೆ. ನನ್ನ ಮಕ್ಕಳು ಒಳ್ಳೆಯವರು, ಹೃದಯವಂತರು ಎಂದು ಮುಂದಿನ ದಿನಗಳಲ್ಲಿ ಜನರು ಮಾತಾಡಿಕೊಳ್ಳಬೇಕು. ನನ್ನ ಮಗ ಬೆಳ್ಳಿ ಪರದೆ ಮೇಲೆ ಹೀರೋ ಆಗುವುದು ನನಗೆ ಇಷ್ಟವಿಲ್ಲ. ಒಂದು ವೇಳೆ ನನ್ನ ಮಗ ತೈಮೂರ್ ಮೌಂಟ್ ಎವರೆಸ್ಟ್ ಏರುವ ಗುರಿ ಹೊಂದಿದರೆ ನಾನು ಅದನ್ನು ಬೆಂಬಲಿಸುತ್ತೇನೆ. ಅವನು ಬಯಸಿದ್ದು ಆಗಲಿ, ಅವನ ಮೇಲೆ ಯಾವುದೇ ಒತ್ತಡ ಹೇರುವುದಿಲ್ಲ ಎಂದಿದ್ದಾರೆ.

ಕರೀನಾ ಕಪೂರ್ ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಮಾತಾಡಿರುವುದು ಇದೆ ಮೊದಲಲ್ಲ. ಅವರ ಮೊದಲ ಮಗ ತೈಮೂರ್ ಖಾನ್ ಎರಡು ವರ್ಷದವನಿದ್ದಾಗ ಇದೇ ರೀತಿ ಮಾತನಾಡಿದ್ದರು. ನನ್ನ ಮಗನನ್ನು ಸೆಲೆಬ್ರಿಟಿಯಂತೆ ಬಿಂಬಿಸಬೇಡಿ ಎಂದು ಮಾಧ್ಯಮಗಳಿಗೆ ಅವರು ಮನವಿ ಮಾಡಿಕೊಂಡಿದ್ದರು. ಎಲ್ಲರಂತೆ ಆತನೂ ಬೆಳೆಯಲಿ, ಎಲ್ಲ ಮಕ್ಕಳಂತೆ ಅವನೂ ಬಾಲ್ಯವನ್ನೂ ಏಂಜಾಯ್ ಮಾಡಲಿ. ಅವನ ಹಿಂದೆ ಬಿದ್ದು ಅವನನ್ನು ಸೆಲೆಬ್ರಿಟಿಯಂತೆ ಮಾಡಬೇಡಿ ಎಂದು ಕರೀನಾ ಕೇಳಿಕೊಂಡಿದ್ದರು.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

Mumbai: ಬೈಕ್‌ನಲ್ಲಿ ಬಂದು ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಅಪರಿಚಿತರು

Mumbai: ಬೈಕ್‌ನಲ್ಲಿ ಬಂದು ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಅಪರಿಚಿತರು

Movie: ʼಪುಷ್ಪ-2ʼ ಎದುರು ʼಸಿಂಗಂ ಅಗೇನುʼ ರಿಲೀಸ್‌ ಡೌಟು; ಕಾರಣವೇನು?

Movie: ʼಪುಷ್ಪ-2ʼ ಎದುರು ʼಸಿಂಗಂ ಅಗೇನುʼ ರಿಲೀಸ್‌ ಡೌಟು; ಕಾರಣವೇನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.