Bollywood: ಮೂರನೇ ಬಾರಿ ರಿಲೀಸ್‌ ಡೇಟ್‌ ಬದಲಾಯಿಸಿದ ʼಮೇರಿ ಕ್ರಿಸ್ಮಸ್‌ʼ; ಇಲ್ಲಿದೆ ಕಾರಣ


Team Udayavani, Oct 3, 2023, 10:52 AM IST

Bollywood: ಮೂರನೇ ಬಾರಿ ರಿಲೀಸ್‌ ಡೇಟ್‌ ಬದಲಾಯಿಸಿದ ʼಮೇರಿ ಕ್ರಿಸ್ಮಸ್‌ʼ; ಇಲ್ಲಿದೆ ಕಾರಣ

ಮುಂಬಯಿ: ಇದೇ ವರ್ಷದ ಡಿಸೆಂಬರ್‌ ನಲ್ಲಿ ತೆರೆಗೆ ಬರಲಿರುವ ಬಿಟೌನ್‌ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ಒಂದಾಗಿರುವ ʼಮೇರಿ ಕ್ರಿಸ್ಮಸ್‌ʼ ಸಿನಿಮಾದ ಬಗ್ಗೆ ಬಿಗ್‌ ಅಪ್ಡೇಟ್‌ ವೊಂದು ಹೊರಬಿದ್ದಿದೆ.

ಬಿಟೌನ್‌ ಬೆಡಗಿ ಕತ್ರಿನಾ ಕೈಫ್‌ ಹಾಗೂ ತಮಿಳು ಸೂಪರ್‌ ಸ್ಟಾರ್‌ ವಿಜಯ್‌ ಸೇತುಪತಿ  ಮುಖ್ಯಭೂಮಿಕೆಯ ʼಮೇರಿ ಕ್ರಿಸ್ಮಸ್‌ʼ  ಸಿನಿಮಾ ಅನೌನ್ಸ್‌ ಆದ ದಿನದಿಂದಲೇ ಸದ್ದು ಮಾಡುತ್ತಿದೆ. ಸೌತ್‌ ಹಾಗೂ ಬಿಟೌನ್‌ ಜೋಡಿಯನ್ನಿಟ್ಟುಕೊಂಡು ವಿಭಿನ್ನ ಕಥೆಯನ್ನು ಹೇಳಲು ಹೊರಟಿರುವ  ಶ್ರೀರಾಮ್ ರಾಘವನ್ ಅವರ ಈ ಸಿನಿಮಾದಿಂದ ಮತ್ತೊಂದು ಬಿಗ್‌ ಅಪ್ಡೇಟ್‌ ಹೊರಬಿದ್ದಿದೆ.

ಡಿಸೆಂಬರ್‌ ತಿಂಗಳಿನಲ್ಲಿ ಬಾಲಿವುಡ್‌ನಲ್ಲಿ ದೊಡ್ಡ ಸಿನಿಮಾಗಳು ರಿಲೀಸ್‌ ಆಗಲಿದೆ. ಇದರಲ್ಲಿ ಪ್ರಭಾಸ್‌ ಅವರ ʼಸಲಾರ್‌ʼ, ಶಾರುಖ್‌ ಖಾನ್‌ ಅವರ ʼಡಂಕಿʼ , ಸಿದ್ದಾರ್ಥ್‌ ಮಲ್ಹೋತ್ರಾ ಅವರ ʼಯೋಧʼ ಸೇರಿದಂತೆ ಹಲವು ಸಿನಿಮಾಗಳು ಸೇರಿವೆ.

ಈ ಕಾರಣದಿಂದ ʼಮೇರಿ ಕ್ರಿಸ್ಮಸ್‌ʼ ಸಿನಿಮಾ ರಿಲೀಸ್‌ ಡೇಟ್‌ ಮತ್ತೆ ಬದಲಾಗಿದೆ. ಮೊದಲು ಡಿಸೆಂಬರ್‌ 23 ರಂದು ಸಿನಿಮಾ ರಿಲೀಸ್‌ ಆಗಬೇಕಿತ್ತು. ಆದಾದ ಬಳಿಕ ಡಿಸೆಂಬರ್‌ 15 ರಂದು ಸಿನಿಮಾ ತೆರೆಗೆ ಬರುವುದಾಗಿ ಚಿತ್ರತಂಡ ಹೇಳಿತ್ತು. ಡಿಸೆಂಬರ್‌ 15 ರಂದು ಸಿದ್ಧಾರ್ಥ್ ಮಲ್ಹೋತ್ರಾ ಅವರ ʼಯೋಧʼ ಸಿನಿಮಾ ರಿಲೀಸ್‌ ಆಗಲಿದೆ. ಈ ಕಾರಣದಿಂದ ʼಮೇರಿ ಕ್ರಿಸ್ಮಸ್‌ʼ ರಿಲೀಸ್‌ ಡೇಟ್‌ ಮತ್ತೆ ಬದಲಾಗಿದೆ.

ʼಮೇರಿ ಕ್ರಿಸ್ಮಸ್‌ʼ ಸಿನಿಮಾ ಒಂದು ವಾರ ಮೊದಲು ಅಂದರೆ ಡಿಸೆಂಬರ್‌ 8 ರಂದು ರಿಲೀಸ್‌ ಆಗಲಿದೆ ಎಂದು ಟ್ರೇಡ್​ ವಿಶ್ಲೇಷಕ ತರಣ್​ ಆದರ್ಶ್​ ಟ್ವೀಟ್‌ ಮಾಡಿದ್ದಾರೆ.

ಸೌತ್‌ ಸ್ಟಾರ್‌ ಜೊತೆ ಕತ್ರಿನಾ ಕಾಣಿಸಿಕೊಳ್ಳಲಿದ್ದಾರೆ.  ಲೀಡ್‌ ರೋಲ್‌ ನಲ್ಲಿ ಕತ್ರಿನಾ ಜೊತೆ ಸೇತುಪತಿ ಅವರನ್ನುಆಯ್ದುಕೊಂಡಿದ್ದರ ಬಗ್ಗೆ ಸ್ವತಃ ಶ್ರೀರಾಮ್ ರಾಘವನ್ ಅವರು ಮಾತನಾಡಿದ್ದರು.

“ಇದು ಕಥೆಯ ಬೇಡಿಕೆಯಾಗಿದೆ. ನೀವು ಸಿನಿಮಾವನ್ನು ನೋಡಿದರೆ, ಈ ಸಿನಿಮಾದಲ್ಲಿ ಈ ರೀತಿಯ ಆಫ್‌ ಬೀಟ್ ಜೋಡಿಯನ್ನು ಯಾಕೆ ಆಯ್ಕೆ ಮಾಡಲಾಗಿದೆ ಎನ್ನುವುದು ನಿಮಗೆ ತಿಳಿಯುತ್ತದೆ. ಸಿನಿಮಾದಲ್ಲಿ ಇಬ್ಬರ ಪಾತ್ರವೂ ತುಂಬಾ ಆಸಕ್ತಿದಾಯಕವಾಗಿದೆ. ಈ ಹಿಂದೆ ಇವರಿಬ್ಬರು ಜೊತೆಯಾಗಿ ನಟಿಸಿಲ್ಲ. ಹಾಗಾಗಿ ಸಿನಿಮಾದಲ್ಲಿ ಹೊಸ ಜೋಡಿಯನ್ನು ನೋಡಿದಂತಾಗುತ್ತದೆ ಎಂದು ಹೇಳಿದ್ದರು.

ಕತ್ರಿನಾ ಹಾಗೂ ಸೇತುಪತಿ ಅವರ ಪಾತ್ರಗಳು ಬದಲಾಗುವುದಿಲ್ಲ. ಸಹ ಕಲಾವಿದರು ತಮಿಳು ವರ್ಷನ್‌ ನಲ್ಲಿ ಬದಲಾಗಲಿದ್ದಾರೆ. ಶೇ.95 ರಷ್ಟು ಸಿನಿಮಾ ಒಂದೇ ಆಗಲಿದೆ. ಕೆಲ ಪಾತ್ರ ಹಾಗೂ ಭಾಷೆಯ ಬದಲಾವಣೆ ಇರಲಿದೆ ಅಷ್ಟೇ ಎಂದು ನಿರ್ದೇಕರು ಹೇಳಿದ್ದರು.

ಇನ್ನು ಮೂಲತಃ ತಮಿಳಿನವರು ಆಗಿರುವ ನಿರ್ದೇಶಕ ರಾಘವನ್ ಈ ಸಿನಿಮಾವನ್ನು ತಮಿಳು ಭಾಷೆಯಲ್ಲೂ ಮಾಡಲಿದ್ದಾರೆ. ಅಂದರೆ ತಮಿಳು ಹಾಗೂ ಹಿಂದಿಯಲ್ಲಿ ಪತ್ಯೇಕವಾಗಿ ಸಿನಿಮಾ ಶೂಟ್‌ ಆಗಲಿದೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.