ಸುಶಾಂತ್ ಮನೆಯ ಬಾಗಿಲ ಲಾಕ್ ತೆಗೆಯಲು ಹೋದಾಗ ಏನಾಗಿತ್ತು? ಕೀ ಮೇಕರ್ ಹೇಳಿದ್ದೇನು

ತನ್ನ ಸಹಾಯಕನ ಜತೆಗೂಡಿ ರಫೀಕ್ ಬಾಂದ್ರಾಕ್ಕೆ ತಲುಪಿದಾಗ ಇಬ್ಬರನ್ನೂ ಆರನೇ ಮಹಡಿಗೆ ಕರೆದೊಯ್ದಿದ್ದರಂತೆ.

Team Udayavani, Aug 21, 2020, 4:42 PM IST

ಸುಶಾಂತ್ ಮನೆಯ ಬಾಗಿಲ ಲಾಕ್ ತೆಗೆಯಲು ಹೋದಾಗ ಏನಾಗಿತ್ತು? ಕೀ ಮೇಕರ್ ಹೇಳಿದ್ದೇನು

ನವದೆಹಲಿ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳಲ್ಲಿ ಒಬ್ಬರಾಗಿದ್ದ ಕೀ ಮೇಕರ್ ಮಹತ್ವದ ವಿಚಾರವನ್ನು ಬಹಿರಂಗಗೊಳಿಸಿರುವುದು ಬೆಳಕಿಗೆ ಬಂದಿದೆ. ಜೂನ್ 14ರಂದು ನಟ ಸುಶಾಂತ್ ಮನೆಯ ಬಾಗಿಲ ಲಾಕ್ ಒಡೆದ ನಂತರ ಕೀ ಮೇಕರ್  ಗೆ ಸುಶಾಂತ್ ಕೋಣೆಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲವಾಗಿತ್ತು. ಅಲ್ಲದೇ ಕೂಡಲೇ ಈ ಸ್ಥಳದಿಂದ ಹೊರಡಬೇಕು ಎಂದು ಸೂಚನೆ ಕೊಟ್ಟಿರುವುದಾಗಿ ವರದಿ ತಿಳಿಸಿದೆ.

ಕೀ ಮೇಕರ್ ನನ್ನು ರಫೀಕ್ ಚಾವಿವಾಲಾ ಎಂದು ಗುರುತಿಸಲಾಗಿದೆ. ಜೀ ನ್ಯೂಸ್ ಗೆ ತಿಳಿಸಿರುವ ಮಾಹಿತಿ ಪ್ರಕಾರ, ಜೂನ್ 14ರಂದು ಮಧ್ಯಾಹ್ನ 1.05 ನಿಮಿಷಕ್ಕೆ ಸಿದ್ದಾರ್ಥ್ ಪಿಥಾನಿ ಕರೆ ಮಾಡಿದ್ದು, ಬಾಂದ್ರಾದ ಮನೆಯ ಬಾಗಿಲನ್ನು ಬೀಗವನ್ನು ತೆಗೆದುಕೊಡುವಂತೆ ಕೇಳಿದ್ದರು. ನಂತರ ರಫೀಕ್, ತನಗೆ ಡೋರ್ ಲಾಕ್ ನ ಚಿತ್ರವನ್ನು ವಾಟ್ಸಪ್ ಮಾಡುವಂತೆ ಹೇಳಿರುವುದಾಗಿ ತಿಳಿಸಿದ್ದಾರೆ.

ಆದರೆ ತನಗೆ ಅದು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮನೆ ಎಂಬ ಬಗ್ಗೆ ಏನೂ ಮಾಹಿತಿ ತಿಳಿದಿರಲಿಲ್ಲವಾಗಿತ್ತು. ಅಷ್ಟೇ ಅಲ್ಲ ತನಗೆ ಕರೆ ಮಾಡಿದ ವ್ಯಕ್ತಿಯ ಪರಿಚಯವೂ ಇಲ್ಲ. ನಂತರ ತನಗೆ ತಿಳಿದು ಬಂದದ್ದು, ಹಲವಾರು ಮಾಧ್ಯಮಗಳಲ್ಲಿ ಸಿದ್ದಾರ್ಥ ಪಿಥಾನಿ ಹೆಸರು ಪ್ರಕಟವಾದ ಬಳಿಕ ಎಂಬುದಾಗಿ ಕೀ ಮೇಕರ್ ವಿವರಿಸಿದ್ದಾರೆ.

ಇದನ್ನೂ: ಸುಧೀರ್‌ ಗುಪ್ತಾಗೆ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆ ಪ್ರಕರಣದ ತನಿಖೆಯ ಹೊಣೆ

ಕರೆ ಮಾಡಿದ್ದ ವ್ಯಕ್ತಿ ತನಗೆ ಜಾಗದ ಮಾಹಿತಿ ನೀಡಿದ್ದರು. ನಂತರ ತನ್ನ ಸಹಾಯಕನ ಜತೆಗೂಡಿ ರಫೀಕ್ ಬಾಂದ್ರಾಕ್ಕೆ ತಲುಪಿದಾಗ ಇಬ್ಬರನ್ನೂ ಆರನೇ ಮಹಡಿಗೆ ಕರೆದೊಯ್ದಿದ್ದರಂತೆ. ನಂತರ ರೂಂ ಬಾಗಿಲನ್ನು ತೆಗೆದುಕೊಡುವಂತೆ ಸೂಚಿಸಿದ್ದರು.  ಕೆಲವು ಸಮಯ ನಕಲಿ ಕೀ ಬಳಸಿ ಪ್ರಯತ್ನಿಸಿದ ನಂತರ, ಈ ಬಾಗಿಲ ಲಾಕ್ ಅನ್ನು ಒಡೆಯಲೇಬೇಕು ಎಂದು ರಫೀಕ್ ತಿಳಿಸಿದ್ದರು.

ಇದನ್ನೂ ಓದಿ: ಮುಂಬೈ ಪೊಲೀಸರಿಗೆ ಮುಖಭಂಗ, ಸುಶಾಂತ್ ಸಿಂಗ್ ಪ್ರಕರಣ ಸಿಬಿಐಗೆ ಒಪ್ಪಿಸಿದ ಸುಪ್ರೀಂಕೋರ್ಟ್

ಕೀ ಮೇಕರ್ ಹೇಳಿಕೆ ಪ್ರಕಾರ, ಅದು ಕಂಪ್ಯೂಟರೀಕೃತ ಲಾಕ್ ಆಗಿದ್ದು, ಅದನ್ನು ಸುತ್ತಿಗೆ ಬಳಸಿ ಒಡೆಯಲಾಗಿತ್ತು. ಈ ಕೆಲಸಕ್ಕಾಗಿ 2 ಸಾವಿರ ರೂಪಾಯಿ ನೀಡಿ, ಕೂಡಲೇ ಸ್ಥಳದಿಂದ ಹೊರಡುವಂತೆ ಸೂಚಿಸಿದ್ದರು. ಆದರೆ ಮನೆಯ ಒಳಹೋಗಲು ಹಾಗೂ ಸುಶಾಂತ್ ಕೋಣೆಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಖಾತೆಯಿಂದ 15 ಕೋಟಿ ವರ್ಗಾವಣೆ: ಗೆಳತಿ ರಿಯಾ ಬಂಧನ ಸಾಧ್ಯತೆ?

ಸುಶಾಂತ್ ಮನೆಯ ಸ್ಥಳದಿಂದ ಹೊರಬಿದ್ದ ನಂತರ ನಟನ ಸಹೋದರಿ ಅಲ್ಲಿಗೆ ಆಗಮಿಸಿರುವುದಾಗಿ ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಆದರೆ ತನಗೆ ಈವರೆಗೂ ತನಿಖಾ ಸಂಸ್ಥೆಯಿಂದ ಯಾವುದೇ ಕರೆ ಬಂದಿಲ್ಲ ಎಂದು ಹೇಳಿದ್ದಾರೆ. ಒಂದು ವೇಳೆ ಕರೆ ಬಂದರೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ಆದರೆ ಈಗಾಗಲೇ ತನಿಖೆ ನಡೆಸಿದ್ದ ಮುಂಬೈ ಪೊಲೀಸರಿಗೆ ರಫೀಕ್ ಹೇಳಿಕೆ ನೀಡಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.