12 ದಿನವೂ KGF 2 ದಾಖಲೆ ಕಲೆಕ್ಷನ್: ರಾಜಮೌಳಿಯ ಬಾಹುಬಲಿ 2, ದಂಗಲ್ ದಾಖಲೆ ಮೀರಿಸಲಿದೆಯೇ?

ಕೆಜಿಎಫ್ ಚಾಪ್ಟರ್ 2 ಕನ್ನಡ ಸಿನಿಮಾ ಹಿಂದಿ, ಮಲಯಾಳಂ, ತಮಿಳು ಮತ್ತು ತೆಲುಗಿಗೆ ಡಬ್ ಮಾಡಲಾಗಿತ್ತು.

Team Udayavani, Apr 27, 2022, 11:08 AM IST

thumb 7

ನವದೆಹಲಿ: ರಾಕಿ ಭಾಯ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ನಿರೀಕ್ಷೆಗೂ ಮೀರಿ ಜಗತ್ತಿನಾದ್ಯಂತ ಭರ್ಜರಿ ಪ್ರದರ್ಶನದ ಓಟವನ್ನು ಮುಂದುವರಿಸಿದೆ. ಮಾಸ್ ಎಂಟರ್ ಟೈನರ್ ಸಿನಿಮಾ ಬಾಕ್ಸಾಫೀಸ್ ನಲ್ಲಿ ಎಲ್ಲಾ ದಾಖಲೆಗಳನ್ನು ಅಳಿಸಿಹಾಕುತ್ತಿದ್ದು, ಇದೀಗ ಅಮೀರ್ ಖಾನ್ ಅಭಿನಯದ ದಂಗಲ್  ಹಾಗೂ ಬಾಹುಬಲಿ 2 ಸಿನಿಮಾದ ದಾಖಲೆಯನ್ನು ಮುರಿಯಲು ಸಜ್ಜಾಗುತ್ತಿದೆ.

ಕೆಜಿಎಫ್ ಚಾಪ್ಟರ್ 2 ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಪ್ರೇಕ್ಷಕರು, ಅಭಿಮಾನಿಗಳು ವೀಕ್ಷಿಸುವ ಮೂಲಕ ಭರ್ಜರಿ ಯಶಸ್ಸು ಕಾಣಲಿದೆ ಎಂದು ಹಲವಾರು ಟ್ರೇಡ್ ವಿಶ್ಲೇಷಕರು ಭವಿಷ್ಯ ನುಡಿದಿದ್ದಾರೆ. ಸಿನಿಮಾ ಮಾರುಕಟ್ಟೆ ವಿಶ್ಲೇಷಕ ಮನೋಬಲ ವಿಜಯ್ ಬಾಲನ್ ಅವರು ಕೆಜಿಎಫ್ ಚಾಪ್ಟರ್ 2 ಕೇವಲ 12 ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ 900 ಕೋಟಿ ರೂಪಾಯಿ ಗಳಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.

2016ರಲ್ಲಿ ಬಾಲಿವುಡ್ ನಲ್ಲಿ ತೆರೆ ಕಂಡಿದ್ದ ದಂಗಲ್ ಸಿನಿಮಾ ಜಾಗತಿಕವಾಗಿ ಅಂದಾಜು ಒಟ್ಟು 2,036 ಕೋಟಿ ರೂಪಾಯಿ ಗಳಿಸುವ ಮೂಲಕ ದಾಖಲೆ ಬರೆದಿತ್ತು. 2017ರಲ್ಲಿ ತೆರೆಕಂಡಿದ್ದ ಬಾಹುಬಲಿ 2 ವಿಶ್ವಾದ್ಯಂತ ಒಟ್ಟು 1,810 ಕೋಟಿ ರೂಪಾಯಿ, RRR 1114 ಕೋಟಿ ರೂ. ಗಳಿಸಿತ್ತು. ಕೆಜಿಎಫ್ ಚಾಪ್ಟರ್ 2 ಸಿನಿಮಾ ಇನ್ನೂ ಕೆಲವು ವಾರಗಳ ಕಾಲ ಯಶಸ್ವಿ ಪ್ರದರ್ಶನ ಕಾಣುವ ಮೂಲಕ ದಂಗಲ್ (ಬಾಲಿವುಡ್ ನಲ್ಲಿ ಅತೀ ಹೆಚ್ಚು ಗಳಿಕೆ ಕಂಡ 2ನೇ ಹಿಂದಿ ಸಿನಿಮಾ), ಟೈಗರ್ ಜಿಂದಾ ಹೈ (ಹೆಚ್ಚು ಗಳಿಕೆ ಕಂಡ 5ನೇ ಸಿನಿಮಾ), ಪಿಕೆ (ಹೆಚ್ಚು ಗಳಿಕೆ ಕಂಡ 4ನೇ ಸಿನಿಮಾ) ಮತ್ತು ಸಂಜು (ಹೆಚ್ಚು ಗಳಿಕೆ ಕಂಡ ಮೂರನೇ ಸಿನಿಮಾ) ಚಿತ್ರದ ದಾಖಲೆಯನ್ನು ಮೀರಿಸಲಿದೆ. ಈವರೆಗೆ ಕೆಜಿಎಫ್ ಚಾಪ್ಟರ್ 2 ಹಿಂದಿಯಲ್ಲಿ 329.40 ಕೋಟಿ ರೂ. ಗಳಿಕೆ ಕಂಡಿರುವುದಾಗಿ ಸಿನಿಮಾ ವಿಮರ್ಶಕ ತರಣ್ ಆದರ್ಶ್ ಟ್ವೀಟ್ ನಲ್ಲಿ ವಿವರಿಸಿದ್ದಾರೆ.

ಕೆಜಿಎಫ್ ಚಾಪ್ಟರ್ 2 ಕನ್ನಡ ಸಿನಿಮಾ ಹಿಂದಿ, ಮಲಯಾಳಂ, ತಮಿಳು ಮತ್ತು ತೆಲುಗಿಗೆ ಡಬ್ ಮಾಡಲಾಗಿತ್ತು. ಇದೀಗ ಪ್ಯಾನ್ ಇಂಡಿಯಾ ನೆಲೆಯಲ್ಲಿ ತೆರೆ ಕಂಡ ಈ ಸಿನಿಮಾ ಎಲ್ಲಾ ದಾಖಲೆಯನ್ನು ಪುಡಿಗಟ್ಟಿ ಮುನ್ನುಗ್ಗುತ್ತಿದೆ. ಕೆಜಿಎಫ್ ಚಾಪ್ಟರ್ 2 ಸಿನಿಮಾದಲ್ಲಿ ಯಶ್, ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ, ಬಾಲಕೃಷ್ಣ, ಪ್ರಕಾಶ್ ರೈ, ಅಚ್ಯುತ್ ಕುಮಾರ್ ಮುಖ್ಯಭೂಮಿಕೆಯಲ್ಲಿದ್ದಾರೆ. ಪ್ರಶಾಂತ್ ನೀಲ್ ಸಿನಿಮಾ ನಿರ್ದೇಶಿಸಿದ್ದು, ವಿಜಯ್ ಕಿರುಗುಂದೂರ್ ಚಿತ್ರದ ನಿರ್ಮಾಪಕ.

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.