ಬಾಲಿವುಡ್ಗೆ ಕನ್ನಡದ ಬಾದ್ ಷಾ | ಸಲ್ಲು ಭಾಯ್ಗೆ ಕಿಚ್ಚ ಸುದೀಪ್ ಆ್ಯಕ್ಷನ್ ಕಟ್
Team Udayavani, Oct 12, 2021, 4:17 PM IST
ಬೆಂಗಳೂರು : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಬಾಲಿವುಡ್ ಹೊಸದಲ್ಲ. ಈಗಾಗಲೇ ಅವರು ಸಾಕಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಮತ್ತೊಮ್ಮೆ ಹಿಂದಿ ಚಿತ್ರರಂಗದ ಅಂಗಳಕ್ಕೆ ಕಾಲಿಡಲಿದ್ದಾರೆ. ಹಾಗಂತಾ ಹೀರೋ ಅಥವಾ ವಿಲನ್ ಆಗಿ ಅಲ್ಲ…
ಹೌದು, ಆಡು ಮುಟ್ಟದ ಸೊಪ್ಪಿಲ್ಲ..ಕಿಚ್ಚ ಕಾಲಿಡದ ಚಿತ್ರರಂಗವಿಲ್ಲ ಎನ್ನುವುದು ಸುದೀಪ್ ಅಭಿಮಾನಿಗಳ ಮಾತು. ತಮ್ಮ ಅಭಿನಯದ ಮೂಲಕ ಸ್ಯಾಂಡಲ್ವುಡ್ ನಿಂದ ಹಾಲಿವುಡ್ ವರೆಗೂ ಹೆಸರು ಮಾಡಿರುವ ಸುದೀಪ ಇದೀಗ ಮತ್ತೊಂದು ಬಾರಿ ಬಾಲಿವುಡ್ಗೆ ಹಾರಲು ಸಜ್ಜಾಗಿದ್ದಾರೆ. ಹಾಗಂತಾ ಈ ಬಾರಿ ಅಭಿನಯಕ್ಕಾಗಿ ಹಿಂದಿ ಚಿತ್ರರಂಗದತ್ತ ಮುಖ ಮಾಡುತ್ತಿಲ್ಲ. ಬದಲಾಗಿ ನಿರ್ದೇಶಕರ ಕ್ಯಾಪ್ ತೊಟ್ಟು ಆ್ಯಕ್ಷನ್ ಕಟ್ ಹೇಳಲಿದ್ದಾರೆ.
ಮೈ ಆಟೋಗ್ರಾಫ್’ ಚಿತ್ರದ ಮುಖಾಂತರ ಚಂದನವನದಲ್ಲಿ ನಟನೆಯ ಜೊತೆ ನಿರ್ದೇಶನಕ್ಕೂ ಸೈ ಎಂದು ಗುರುತಿಸಿಕೊಂಡವರು ನಟ ಕಿಚ್ಚ ಸುದೀಪ್. ಇದಾದ ಬಳಿಕ ಅವರು ಆ್ಯಕ್ಷನ್ ಕಟ್ ಹೇಳಿದ್ದ ‘ಜಸ್ಟ್ ಮಾತ್ ಮಾತಲ್ಲಿ’, ‘ನಂ.73 ಶಾಂತಿನಿವಾಸ’ ಹೀಗೆ ಹಲವು ಚಿತ್ರಗಳೂ ಹಿಟ್ ಆಗಿದ್ದವು. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ನಿರ್ದೇಶನ ಮಾಡಲು ಸುದೀಪ್ ಸಜ್ಜಾಗಿದ್ದಾರೆ. ಶೀಘ್ರದಲ್ಲೇ ಅವರನ್ನು ಭೇಟಿಯಾಗಿ ಕಥೆ ಹೇಳಲೂ ತಯಾರಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಸುದೀಪ್, ‘ಈಗಾಗಲೇ ಒಂದು ಸ್ಕ್ರಿಪ್ಟ್ ಸಿದ್ಧಪಡಿಸಿದ್ದೇನೆ. ಅದು ಬಹಳ ಸೂಕ್ಷ್ಮವಾಗಿದೆ. ಇಡೀ ದಕ್ಷಿಣ ಭಾರತಕ್ಕೆ ಈ ಸಿನಿಮಾ ಮಾಡಬೇಕು ಎನ್ನುವ ಆಸೆ ನನ್ನದು. ಈ ಕುರಿತು ಸಲ್ಮಾನ್ ಖಾನ್ ಅವರ ಜೊತೆ ಮಾತನಾಡಿ, ‘ನಿಮಗೊಂದು ಕಥೆ ಬರೆದಿದ್ದೇನೆ ಅದನ್ನು ಹೇಳಬೇಕು’ ಎಂದು ಕೇಳಿಕೊಂಡಿದ್ದೆ. ಸೆಪ್ಟೆಂಬರ್ ಕೊನೆಯ ವಾರದಲ್ಲಿ ಅವರನ್ನು ಭೇಟಿಯಾಗಬೇಕಿತ್ತು, ಆದರೆ ಅದು ಸಾಧ್ಯವಾಗಲಿಲ್ಲ. ಆ ಪಾತ್ರ ಅಲ್ಲಿ ಅವರು ಮಾಡಿದರೇ ಚೆಂದ, ಇಲ್ಲಿ ನಾನು ಮಾಡಿದರೇ ಚಂದ. ಆಸೆ ಇಟ್ಟುಕೊಂಡು ನಾನೇ ಅಲ್ಲಿ ಮಾಡಬೇಕು ಎಂದರೆ ತಪ್ಪಾಗುತ್ತದೆ. ಇದು ಸಿನಿಮಾದ ಅಗತ್ಯತೆ.
ಸಿನಿಮಾನೇ ಬೇರೆ ಗೆಳೆತನವೇ ಬೇರೆ. ಅವರು ಒಪ್ಪಿಕೊಳ್ಳಬೇಕು. ಅವರ ಬಳಿಗೆ ಹೋಗಿ ಚರ್ಚಿಸಿದ ಬಳಿಕವಷ್ಟೇ ಮುಂದಿನದ್ದನ್ನು ಹೇಳಲು ಸಾಧ್ಯ. ಕಥೆಯನ್ನು ಅವರಿಗೆ ಹೇಳುವುದಕ್ಕೆ ನಾನು ಕಾತುರದಿಂದಿದ್ದೇನೆ. ಒಪ್ಪುವುದು ಬಿಡುವುದು ಅವರಿಗೆ ಬಿಟ್ಟಿದ್ದು, ನಾನು ಈ ಕಥೆ ಬರೆದಿದ್ದು ನನಗಾಗಿ. ಆದರೆ ಈ ಕುರಿತು ಜ್ಯಾಕ್ ಮಂಜು ಅವರ ಜೊತೆ ಚರ್ಚಿಸಿದಾಗ ಅವರೂ ಸಲ್ಮಾನ್ ಖಾನ್ ಅವರು ಈ ಪಾತ್ರಕ್ಕೆ ಸೂಕ್ತ ಎಂದರು. ನಿರ್ದೇಶಕನಾಗಿ ನಾನು ನನ್ನ ಕಥೆಗೆ ನ್ಯಾಯ ಒದಗಿಸಬೇಕು, ಅಲ್ಲವೇ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ