ಆಸ್ಕರ್ ಗೆ ಸಲ್ಲಿಕೆ ಆಗುತ್ತಾ ‘Laapataa Ladies’?: ನಿರ್ದೇಶಕಿ ಕಿರಣ್ ರಾವ್ ಸ್ಪಷ್ಟನೆ
Team Udayavani, Feb 20, 2024, 12:58 PM IST
ಮುಂಬಯಿ: ಆಮೀರ್ ಖಾನ್ ಮಾಜಿ ಪತ್ನಿ ಕಿರಣ್ ರಾವ್ ನಿರ್ದೇಶನದ ‘ಲಾಪತಾ ಲೇಡೀಸ್’ ಸಿನಿಮಾ ಬಾಲಿವುಡ್ ನಲ್ಲಿ ನಿರೀಕ್ಷೆ ಹೆಚ್ಚಿಸಿದೆ. ವಿಭಿನ್ನ ಕಥಾಹಂದರವುಳ್ಳ ಸಿನಿಮಾ ರಿಲೀಸ್ ಗೆ ದಿನಗಣನೆ ಬಾಕಿ ಉಳಿದಿದ್ದು, ರಿಲೀಸ್ ಡೇಟ್ ಹತ್ತಿರವಾಗುತ್ತಿದ್ದಂತೆ ಸಿನಿಮಾದ ಬಗ್ಗೆ ಕುತೂಹಲವೂ ಹೆಚ್ಚಿದೆ.
ಸೋಮವಾರ (ಫೆ.19 ರಂದು) ದೆಹಲಿಯಲ್ಲಿ ‘ಲಾಪತಾ ಲೇಡೀಸ್’ ಸಿನಿಮಾದ ಸ್ಪೆಷೆಲ್ ಸ್ಕ್ರೀನಿಂಗ್ ಆಯೋಜನೆ ಮಾಡಲಾಗಿತ್ತು. ಸಿನಿಮಾ ಪ್ರದರ್ಶನ ಆದ ಬಳಿಕ ಪ್ರತಿಕಾಗೋಷ್ಠಿಯನ್ನು ನಡೆಸಲಾಗಿತ್ತು. ಈ ವೇಳೆ ನಿರ್ದೇಶಕಿ ಕಿರಣ್ ರಾವ್ ಅವರಿಗೆ ‘ಲಾಪತಾ ಲೇಡೀಸ್’ ಸಿನಿಮಾವನ್ನು ಆಸ್ಕರ್ ಗೆ ಕಳುಹಿಸುತ್ತೀರಾ ಎನ್ನುವ ಪ್ರಶ್ನೆಯನ್ನು ಕೇಳಲಾಗಿದೆ.
“ಗಲ್ಲಾಪೆಟ್ಟಿಗೆಯಲ್ಲಿ ಸಿನಿಮಾಕ್ಕೆ ಹೇಗೆ ಪ್ರತಿಕ್ರಿಯೆ ಬರುತ್ತದೆ ಎನ್ನುವುದನ್ನು ನೋಡಬೇಕಿದೆ. ಪ್ರೇಕ್ಷಕರು ಹಾಗೂ ದೇಶ ನಮ್ಮ ಕೆಲಸವನ್ನು ಮೆಚ್ಚಿದರೆ ಅದು ನಮಗೆ ಸಿಗುವ ದೊಡ್ಡ ಗೌರವವಾವಾಗಿದೆ. ಇದನ್ನು ಅನುಸರಿಯೇ ನಾವು ಮುಂದಿನ ವರ್ಷ ಆಸ್ಕರ್ಗೆ ಚಿತ್ರವನ್ನು ಸಲ್ಲಿಸಲು ನಾವು ಪರಿಗಣಿಸುತ್ತೇವೆ. ವರ್ಷದ ಅತ್ಯುತ್ತಮ ಚಲನಚಿತ್ರಗಳನ್ನು ನಿರ್ಣಯಿಸುವ ಮತ್ತು ಆಯ್ಕೆ ಮಾಡುವ ನಿರ್ದಿಷ್ಟ ಸಮುದಾಯವಿದೆ. ಅಲ್ಲಿ ನಮ್ಮ ಸಿನಿಮಾವನ್ನು ಯೋಗ್ಯವೆಂದು ಪರಿಗಣಿಸಿದರೆ, ನಾವು ಅದನ್ನು ಪ್ರತಿಷ್ಠಿತ ಆಸ್ಕರ್ಗೆ ಸಲ್ಲಿಸುತ್ತೇವೆ. ಸದ್ಯಕ್ಕೆ ನಾವು ಮಾರ್ಚ್ 1ರಂದು ಸಿನಿಮಾ ರಿಲೀಸ್ ಆದ ಬಳಿಕೆ ಅದಕ್ಕೆ ಬರುವ ಅಭಿಪ್ರಾಯಕ್ಕಾಗಿ ಕಾಯುತ್ತಿದ್ದೇವೆ” ಎಂದು ಕಿರಣ್ ರಾವ್ ಹೇಳಿದ್ದಾರೆ.
‘ಲಾಪತಾ ಲೇಡೀಸ್’ಸಿನಿಮಾದಲ್ಲಿ ನಿತಾಂಶಿ ಗೋಯೆಲ್, ಪ್ರತಿಭಾ ರಂತ, ಸ್ಪರ್ಶ ಶ್ರೀವಾಸ್ತವ,ಛಾಯಾ ಕದಂ ಮತ್ತು ರವಿ ಕಿಶನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಬಿಪ್ಲಬ್ ಗೋಸ್ವಾಮಿಯವರ ಪ್ರಶಸ್ತಿ ವಿಜೇತ ಕಥೆಯನ್ನು ಸಿನಿಮಾ ಆಧರಿಸಿದೆ. ಅಮೀರ್ ಖಾನ್ ಪ್ರೊಡಕ್ಷನ್ಸ್ ಮತ್ತು ಕಿಂಡ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಲನಚಿತ್ರವನ್ನು ನಿರ್ಮಿಸಲಾಗಿದೆ. ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸ್ನೇಹಾ ದೇಸಾಯಿ ಬರೆದಿದ್ದಾರೆ, ಹೆಚ್ಚುವರಿ ಸಂಭಾಷಣೆಗಳನ್ನು ದಿವ್ಯನಿಧಿ ಶರ್ಮಾ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್