Jailer: ರಜಿನಿ, ಶಿವಣ್ಣ,ಮೋಹನ್‌ ಲಾಲ್..‌ ʼಜೈಲರ್‌ʼಗಾಗಿ ಕಲಾವಿದರು ಪಡೆದ ಸಂಭಾವನೆ ಎಷ್ಟು?


Team Udayavani, Aug 15, 2023, 6:00 PM IST

tdy-17

ಚೆನ್ನೈ: ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ʼಜೈಲರ್‌ʼ ಮೆಗಾ ಬ್ಲಾಕ್‌ ಬಸ್ಟರ್‌ ಹಿಟ್ ಆಗಿದೆ. ಬಾಕ್ಸ್‌ ಆಫೀಸ್‌ ನಲ್ಲಿ ಸಿನಿಮಾದ ಅಬ್ಬರ ಜೋರಾಗಿದೆ. ಅನೇಕ ಕಡೆ ಥಿಯೇಟರ್‌ ಗಳು ಹೌಸ್ ಫುಲ್‌ ಆಗಿದೆ. ಇದುವೆರೆಗೆ ʼಜೈಲರ್‌ʼ ವರ್ಲ್ಡ್‌ ವೈಡ್‌ 300 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿದೆ.

ರಜಿನಿಕಾಂತ್‌ ಮಾಸ್‌ & ಕ್ಲಾಸ್‌ ಲುಕ್‌ ಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಸಿನಿಮಾದಲ್ಲಿ ರಜಿನಿಕಾಂತ್‌ ಮಾತ್ರವಲ್ಲದೆ ಇತರ ಕಲಾವಿದರ ಪಾತ್ರ ಕೂಡ ಪ್ರೇಕ್ಷಕರ ಶಿಳ್ಳೆ, ಚಪ್ಪಾಳೆಗಳ ಪ್ರಶಂಸೆಯನ್ನು ಪಡೆದುಕೊಂಡಿದೆ.

ʼಜೈಲರ್‌ʼ ನಲ್ಲಿ ಕನ್ನಡದ ಶಿವರಾಜ್‌ ಕುಮಾರ್‌, ಮಾಲಿವುಡ್‌ನ ಮೋಹನ್‌ ಲಾಲ್‌ ಹಾಗೂ ಹಿಂದಿಯ ಜಾಕಿ ಶ್ರಾಫ್‌ ಮುಂತಾದ ದಿಗ್ಗಜ ಕಲಾವಿದರು ನಟಿಸಿದ್ದಾರೆ. ಒಂದೇ ಸಿನಿಮಾದಲ್ಲಿ ಈ ಕಲಾವಿದರು ನಟಿಸಿದ್ದು,ತಮ್ಮ ಪಾತ್ರಗಳಿಗೆ ಎಷ್ಟು ಸಂಭಾವನೆ ಪಡೆದುಕೊಂಡಿರಬಹುದೆನ್ನುವ ಕುತೂಹಲಕ್ಕೆ ʼ ʼಟೈಮ್ಸ್ ಆಫ್ ಇಂಡಿಯಾʼ ತೆರೆ ಎಳೆದಿದ್ದು, ಕಲಾವಿದರ ಸಂಭಾವನೆ ಬಗ್ಗೆ ವರದಿಯೊಂದನ್ನು ಮಾಡಿದೆ.

ದಿಲೀಪ್‌ಕುಮಾರ್ ನಿರ್ದೇಶನದ ʼಜೈಲರ್‌‌ʼ ಸಿನಿಮಾದಲ್ಲಿನ ರಜಿನಿಕಾಂತ್ ಅವರ ಪಾತ್ರಕ್ಕೆ ಸೂಪರ್‌ ಸ್ಟಾರ್‌  110 ಕೋಟಿ ರೂಪಾಯಿಯನ್ನು ಸಂಭಾವನೆಯಾಗಿ ಪಡೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ʼಜೈಲರ್ʼ 225 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಿದ್ದು ರಜಿನಿಕಾಂತ್ ಅವರು ತಮ್ಮ ಸಂಭಾವನೆಯೊಂದಿಗೆ ಚಿತ್ರದ ಒಟ್ಟು ಬಜೆಟ್‌ನ 48% ರಷ್ಟನ್ನು ಪಡೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ರಜಿನಿಕಾಂತ್‌ ನಷ್ಟೇ ಸಿನಿಮಾದಲ್ಲಿ ತಮ್ಮ ಪಾತ್ರದ ಮೂಲಕ ಸ್ಯಾಂಡಲ್‌ ವುಡ್‌ನ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಹಾಗೂ ಮಾಲಿವುಡ್‌ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್‌ ಅವರೂ ಕೂಡ ಪ್ರೇಕ್ಷಕರ ಮನಗೆದ್ದಿದ್ದಾರೆ.

ಇವರಿಬ್ಬರ ಸಂಭಾವನೆಯ ವಿಚಾರಕ್ಕೆ ಬಂದರೆ, ಮೋಹನ್ ಲಾಲ್ ಮ್ಯಾಥ್ಯೂ ಪಾತ್ರಕ್ಕಾಗಿ 8 ಕೋಟಿ ರೂ., ಶಿವರಾಜಕುಮಾರ್ ʼಜೈಲರ್ʼ ಸಿನಿಮಾದಲ್ಲಿನ ನಟನೆಗಾಗಿ 4 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

ಕನ್ನಡ, ಮಲಯಾಳಂನ ನಟರು ಮಾತ್ರವಲ್ಲದೆ, ಬಾಲಿವುಡ್‌ ನಟ ಜಾಕಿಶ್ರಾಫ್‌ ಅವರು ಕೂಡ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಜಾಕಿಶ್ರಾಫ್ ತಮ್ಮ ಪಾತ್ರಕ್ಕೆ 4 ಕೋಟಿ ಸಂಭಾವನೆಯನ್ನು ಪಡೆದುಕೊಂಡಿದ್ದಾರೆ.

ಇನ್ನು ತಮನ್ನಾ ಭಾಟಿಯಾ ಅವರು 4 ಕೋಟಿ ಸಂಭಾವನೆ, ಹಿರಿಯ ನಟಿ ರಮ್ಯಾ ಕೃಷ್ಣನ್ ಅವರು ತಮ್ಮ ಪಾತ್ರಕ್ಕೆ 1 ಕೋಟಿ ರೂ. ಸಂಭಾವನೆ ಪಡೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ʼಜೈಲರ್‌ʼ ಸಿನಿಮಾದ ಹಿಟ್ ನಿಂದ ನಿರ್ದೇಶಕ ನೆಲ್ಸನ್‌ ದೊಡ್ಡದಾಗಿ ಕಂಬ್ಯಾಕ್ ಮಾಡಿದ್ದಾರೆ. ಅವರ ಈ ಹಿಂದಿನ ʼಬೀಸ್ಟ್‌ʼ ಸಿನಿಮಾ ಅಷ್ಟಾಗಿ ಸದ್ದು ಮಾಡಿರಲಿಲ್ಲ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.