ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?


ಸುಹಾನ್ ಶೇಕ್, Apr 15, 2024, 3:44 PM IST

11

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರಿಗೆ ಜೀವ ಬೆದರಿಕೆ ಹಾಗೂ ಪಂಜಾಬಿ ಗಾಯಕ ಸಿಧು ಮೂಸೆವಾಲ ಕೊಲೆ ಪ್ರಕರಣ ಸೇರಿದಂತೆ ಅಪರಾಧ ಜಗತ್ತಿನಲ್ಲಿ ಗ್ಯಾಂಗ್‌ ಸ್ಟರ್‌ ಆಗಿ ಗುರುತಿಸಿಕೊಂಡಿರುವ ಲಾರೆನ್ಸ್ ಬಿಷ್ಣೋಯಿ  ಅವರ ಹೆಸರು ಮತ್ತೆ ಮುನ್ನೆಲೆಗೆ ಬಂದಿದೆ.

ಭಾನುವಾರ(ಏ.14 ರಂದು) ಸಲ್ಮಾನ್‌ ಖಾನ್‌ ಅವರ ನಿವಾಸದ ಎದುರು ಗುಂಡಿನ ದಾಳಿ ನಡೆಸಿದ ಹಿಂದೆ ಲಾರೆನ್ಸ್ ಬಿಷ್ಣೋಯಿ ತಂಡದ ಹೆಸರು ಕೇಳಿ ಬಂದಿದೆ. ಜೈಲಿನಲ್ಲೇ ಇದ್ದುಕೊಂಡು ತನ್ನ ತಂಡದ ಮೂಲಕ ಪಂಜಾಬಿ ಗಾಯಕರು ಹಾಗೂ ಬಿಟೌನ್ ಸೆಲೆಬ್ರಿಟಿಗಳಿಗೆ ಬೆದರಿಕೆ ಹಾಕುತ್ತಿರುವ ಈ ಲಾರೆನ್ಸ್ ಬಿಷ್ಣೋಯಿ ಯಾರು? ಕಳೆದ 10 ವರ್ಷಗಳಿಂದ ಅಪರಾಧ ಜಗತ್ತಿನಲ್ಲಿ ಬೆಳೆದ ಲಾರೆನ್ಸ್ ಬಿಷ್ಣೋಯಿ  ಹಿನ್ನೆಲೆ ಏನು? ಎನ್ನುವುದರ ಬಗ್ಗೆ ಒಂದು ವರದಿ ಇಲ್ಲಿದೆ.

ಪೊಲೀಸ್‌ ಕಾನ್ಸ್‌ ಸ್ಟೇಬಲ್‌ ಮಗ: ಲಾರೆನ್ಸ್ ಬಿಷ್ಣೋಯಿಯದು ಮಧ್ಯಮ ವರ್ಗದ ಕುಟುಂಬದ. ಪೊಲೀಸ್‌ ಕಾನ್ಸ್‌ ಸ್ಟೇಬಲ್‌ ಆಗಿರುವ ತಂದೆಗೆ ಊರಿನವರ ಮುಂದೆ ನಾಲ್ಕು ಮಾತಿನ ಗೌರವ ಸಿಗುತ್ತಿತ್ತು. ತಂದೆ ಅಂದುಕೊಂಡಂತೆ ಆಗಿದ್ದರೆ ಮಗ ಲಾರೆನ್ಸ್‌ ಇಂದು ಒಳ್ಳೆಯ ಅಧಿಕಾರಿಯೊ, ಒಳ್ಳೆಯ ಕೆಲಸದಲ್ಲೋ ಇರುತ್ತಿದ್ದ ಆದರೆ ಆದದ್ದೇ ಬೇರೆ.

ಹರಿಯಾಣ ಪೊಲೀಸ್ ಪೇದೆಯ ಮಗನಾಗಿದ್ದ ಲಾರೆನ್ಸ್ ಪಂಜಾಬ್‌ನ ಫಿರೋಜ್‌ಪುರದಲ್ಲಿ ಜನಿಸಿ ಉನ್ನತ ಶಿಕ್ಷಣವನ್ನು ಪಡೆದು, ಪಂಜಾಬ್ ವಿಶ್ವವಿದ್ಯಾಲಯದಿಂದ ಎಲ್‌ ಎಲ್‌ ಬಿ ಪದವಿಯನ್ನು ಪಡೆದರು. ಶಿಕ್ಷಿತನಾಗಿದ್ದ ಮಗನನ್ನು ನೋಡಿ ಗೌರವ ಪಡುತ್ತಿದ್ದ ಕುಟುಂಬ, ಮಗನ ರಾಜಕೀಯ ಸೇರ್ಪಡೆಯಿಂದ ಗೌರವ ಕಳೆದುಕೊಳ್ಳುವಂತಾಗಿತ್ತು.

ಅದು ಲಾರೆನ್ಸ್‌ ಕಾಲೇಜಿನಲ್ಲಿದ್ದ ಸಮಯ. ಚಂಡೀಗಢದಲ್ಲಿ ನಡೆದ ಕಾಲೇಜು ಚುನಾವಣೆಗಳಲ್ಲಿ ವಿದ್ಯಾರ್ಥಿ ರಾಜಕೀಯಕ್ಕೆ ಮೊದಲ ಬಾರಿಗೆ ಲಾರೆನ್ಸ್‌ ಎಂಟ್ರಿ ಕೊಟ್ಟಿದ್ದ. ಇದು ಆತನ ಅಪರಾಧ ಜಗತ್ತಿನ ಪ್ರಾರಂಭಿಕ ಹೆಜ್ಜೆಗಳಾಗಿತ್ತು. ಶಿಕ್ಷಣ ಪಡೆದು ಒಳ್ಳೆಯ ದಾರಿಯಲ್ಲಿ ಸಾಗಬೇಕಿದ್ದ ಲಾರೆನ್ಸ್‌ ಕಾಲೇಜು ದಿನದಲ್ಲೇ ಕುಖ್ಯಾತ ದರೋಡೆಕೋರನಾಗಿದ್ದ ಜಗ್ಗು ಭಗವಾನ್‌ಪುರಿಯ ತಂಡದಲ್ಲಿ ಕಾಣಿಸಿಕೊಳ್ಳುತ್ತಾರೆ. ಸಣ್ಣಪುಟ್ಟ ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಾರೆ. 2013 ರಲ್ಲಿ ಕಾಲೇಜು ಚುನಾವಣೆಯ ವಿಜೇತ ಅಭ್ಯರ್ಥಿ ಮತ್ತು ಲುಧಿಯಾನ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯ ಸಮಯದಲ್ಲಿ ಪ್ರತಿಸ್ಪರ್ಧಿ ಅಭ್ಯರ್ಥಿ ಆಗಿದ್ದಾತನನ್ನು ಗುಂಡಿಕ್ಕಿ ಹತ್ಯೆಗೈಯುವ ಮೂಲಕ ಅಪರಾಧ ಜಗತ್ತಿನಲ್ಲಿ ಮೊದಲ ಕ್ರೂರ ಅಧ್ಯಾಯಕ್ಕೆ ಮುನ್ನುಡಿ ಬರೆದುಬಿಟ್ಟಿದ್ದ. ಇದಾದ ಬಳಿಕ 2014 ರಲ್ಲಿ ರಾಜಸ್ಥಾನ ಪೊಲೀಸರ ಎನ್‌ಕೌಂಟರ್‌ನಲ್ಲಿ ಗುಂಡೇಟು ತಿಂದು ಜೈಲುಪಾಲಾಗುತ್ತಾನೆ.

ಕೆಲ ಸಮಯದ ಬಳಿಕ ಜೈಲಿನಿಂದ ಜಾಮೀನು ಪಡೆದು ಹೊರಬಂದ ಬಿಷ್ಣೋಯಿ ಮತ್ತೆ ಅಪರಾಧ ಜಗತ್ತಿನಲ್ಲಿ ನಾನಾ ಕೃತ್ಯವನ್ನು ಎಸೆಗುತ್ತಾನೆ. ಈ ಕಾರಣದಿಂದ 2016 ರಲ್ಲಿ ಮತ್ತೆ ಬಂಧನಕ್ಕೊಳಾಗುತ್ತಾನೆ.  2021 ರವರೆಗೆ ರಾಜಸ್ಥಾನದ ಜೈಲಿನಲ್ಲಿದ್ದ ಬಿಷ್ಣೋಯಿಯನ್ನು ನಂತರ ಮಹಾರಾಷ್ಟ್ರ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (MCOCA) ಅಡಿಯಲ್ಲಿ ದೆಹಲಿಯ ತಿಹಾರ್ ಜೈಲಿಗೆ ವರ್ಗಾಯಿಸಲಾಗುತ್ತದೆ.

ಆದರೆ ಜೈಲಿನಲ್ಲಿದ್ದುಕೊಂಡೇ ಬಿಷ್ಣೋಯಿ  ತನ್ನ ಕ್ರಿಮಿನಲ್ ನೆಟ್‌ವರ್ಕ್ ನ್ನು  ಬೆಳೆಸುತ್ತಾನೆ. ಬಿಷ್ಣೋಯಿ ಭಾರತದಲ್ಲಿನ 5 ರಾಜ್ಯಗಳಲ್ಲಿ ಸುಮಾರು 700 ಶಾರ್ಪ್‌ಶೂಟರ್‌ಗಳ ಗ್ಯಾಂಗ್‌ಗೆ ಕಮಾಂಡರ್ ಆಗಿದ್ದು, ಈತನ ಸಂಪರ್ಕ ಕೆನಡಾದವರೆಗೂ ಇದೆ. ಈತನ ವಿರುದ್ಧ ಕೊಲೆ, ಕೊಲೆ ಯತ್ನ, ಬೆದರಿಕೆ, ದರೋಡೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.

2018 ರಲ್ಲಿ ಬಿಷ್ಣೋಯಿ ಹೆಸರು ಭಾರತದಲ್ಲಿ ಸಂಚಲನ ಸೃಷ್ಟಿಸುತ್ತದೆ. ಅದಕ್ಕೆ ಕಾರಣ ಬಿಷ್ಣೋಯಿ ಬಾಲಿವುಡ್‌ ನಟ ಸಲ್ಮಾನ್‌ ಖಾನ್ ಅವರಿಗೆ ಜೀವ ಬೆದರಿಕೆಯನ್ನು ಹಾಕಿದ್ದು!.

1998ರಲ್ಲಿ ‘ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್​ಗಾಗಿ ಸಲ್ಮಾನ್​ ಖಾನ್​ ರಾಜಸ್ಥಾನದ ಜೋಧ್‌ಪುರಕ್ಕೆ ತೆರಳಿದ್ದರು.  ಆ ಸಮಯದಲ್ಲಿ ಸಲ್ಮಾನ್ ಖಾನ್ ಒಂದು ಕೃಷ್ಣ ಮೃಗವನ್ನು ಬೇಟೆಯಾಡಿದ್ದರು.  ಬಿಷ್ಣೋಯಿ ಸಮುದಾಯದವರು ಪ್ರಕೃತಿ ಆರಾಧಕರು. ಬಿಷ್ಣೋಯಿಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಈ ಪ್ರಾಣಿಯನ್ನು ಕೊಲ್ಲುವುದನ್ನು ಅಥವಾ ಮರವನ್ನು ಕಡಿಯುವುದನ್ನು ಬಿಷ್ಣೋಯಿಗಳು ಎಂದಿಗೂ ಸಹಿಸುವುದಿಲ್ಲ.

ಅಂದಿನಿಂದ ಇಂದಿನವರೆಗೆ ಸಲ್ಮಾನ್‌ ಖಾನ್‌ ಅವರಿಗೆ ಅನೇಕ ಬಾರಿ ಗ್ಯಾಂಗ್ ಸ್ಟರ್‌ ಲಾರೆನ್ಸ್‌ ಇ-ಮೇಲ್‌ ಮೂಲಕ ಬೆದರಿಕೆಯನ್ನು ಹಾಕುತ್ತಲೇ ಬಂದಿದ್ದ. ಇತ್ತೀಚೆಗೆ ಗುಂಡಿನ ದಾಳಿ ನಡೆಸಿ, ಮತ್ತೊಮ್ಮೆ ಸಲ್ಮಾನ್‌ ಖಾನ್‌ ಗೆ ಎಚ್ಚರಿಕೆಯನ್ನು ನೀಡಿದ್ದ. 2022 ಹಾಗೂ 2023 ರ ಅವಧಿಯಲ್ಲಿ ಬಿಷ್ಣೋಯಿ ಹಲವು ಬಾರಿ ಸಲ್ಮಾನ್‌ ಖಾನ್‌ ಗೆ ಬೆದರಿಕೆಯನ್ನು ಹಾಕಿದ್ದ.

-ಸುಹಾನ್‌ ಶೇಕ್

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.