ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?


ಸುಹಾನ್ ಶೇಕ್, Apr 15, 2024, 3:44 PM IST

11

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರಿಗೆ ಜೀವ ಬೆದರಿಕೆ ಹಾಗೂ ಪಂಜಾಬಿ ಗಾಯಕ ಸಿಧು ಮೂಸೆವಾಲ ಕೊಲೆ ಪ್ರಕರಣ ಸೇರಿದಂತೆ ಅಪರಾಧ ಜಗತ್ತಿನಲ್ಲಿ ಗ್ಯಾಂಗ್‌ ಸ್ಟರ್‌ ಆಗಿ ಗುರುತಿಸಿಕೊಂಡಿರುವ ಲಾರೆನ್ಸ್ ಬಿಷ್ಣೋಯಿ  ಅವರ ಹೆಸರು ಮತ್ತೆ ಮುನ್ನೆಲೆಗೆ ಬಂದಿದೆ.

ಭಾನುವಾರ(ಏ.14 ರಂದು) ಸಲ್ಮಾನ್‌ ಖಾನ್‌ ಅವರ ನಿವಾಸದ ಎದುರು ಗುಂಡಿನ ದಾಳಿ ನಡೆಸಿದ ಹಿಂದೆ ಲಾರೆನ್ಸ್ ಬಿಷ್ಣೋಯಿ ತಂಡದ ಹೆಸರು ಕೇಳಿ ಬಂದಿದೆ. ಜೈಲಿನಲ್ಲೇ ಇದ್ದುಕೊಂಡು ತನ್ನ ತಂಡದ ಮೂಲಕ ಪಂಜಾಬಿ ಗಾಯಕರು ಹಾಗೂ ಬಿಟೌನ್ ಸೆಲೆಬ್ರಿಟಿಗಳಿಗೆ ಬೆದರಿಕೆ ಹಾಕುತ್ತಿರುವ ಈ ಲಾರೆನ್ಸ್ ಬಿಷ್ಣೋಯಿ ಯಾರು? ಕಳೆದ 10 ವರ್ಷಗಳಿಂದ ಅಪರಾಧ ಜಗತ್ತಿನಲ್ಲಿ ಬೆಳೆದ ಲಾರೆನ್ಸ್ ಬಿಷ್ಣೋಯಿ  ಹಿನ್ನೆಲೆ ಏನು? ಎನ್ನುವುದರ ಬಗ್ಗೆ ಒಂದು ವರದಿ ಇಲ್ಲಿದೆ.

ಪೊಲೀಸ್‌ ಕಾನ್ಸ್‌ ಸ್ಟೇಬಲ್‌ ಮಗ: ಲಾರೆನ್ಸ್ ಬಿಷ್ಣೋಯಿಯದು ಮಧ್ಯಮ ವರ್ಗದ ಕುಟುಂಬದ. ಪೊಲೀಸ್‌ ಕಾನ್ಸ್‌ ಸ್ಟೇಬಲ್‌ ಆಗಿರುವ ತಂದೆಗೆ ಊರಿನವರ ಮುಂದೆ ನಾಲ್ಕು ಮಾತಿನ ಗೌರವ ಸಿಗುತ್ತಿತ್ತು. ತಂದೆ ಅಂದುಕೊಂಡಂತೆ ಆಗಿದ್ದರೆ ಮಗ ಲಾರೆನ್ಸ್‌ ಇಂದು ಒಳ್ಳೆಯ ಅಧಿಕಾರಿಯೊ, ಒಳ್ಳೆಯ ಕೆಲಸದಲ್ಲೋ ಇರುತ್ತಿದ್ದ ಆದರೆ ಆದದ್ದೇ ಬೇರೆ.

ಹರಿಯಾಣ ಪೊಲೀಸ್ ಪೇದೆಯ ಮಗನಾಗಿದ್ದ ಲಾರೆನ್ಸ್ ಪಂಜಾಬ್‌ನ ಫಿರೋಜ್‌ಪುರದಲ್ಲಿ ಜನಿಸಿ ಉನ್ನತ ಶಿಕ್ಷಣವನ್ನು ಪಡೆದು, ಪಂಜಾಬ್ ವಿಶ್ವವಿದ್ಯಾಲಯದಿಂದ ಎಲ್‌ ಎಲ್‌ ಬಿ ಪದವಿಯನ್ನು ಪಡೆದರು. ಶಿಕ್ಷಿತನಾಗಿದ್ದ ಮಗನನ್ನು ನೋಡಿ ಗೌರವ ಪಡುತ್ತಿದ್ದ ಕುಟುಂಬ, ಮಗನ ರಾಜಕೀಯ ಸೇರ್ಪಡೆಯಿಂದ ಗೌರವ ಕಳೆದುಕೊಳ್ಳುವಂತಾಗಿತ್ತು.

ಅದು ಲಾರೆನ್ಸ್‌ ಕಾಲೇಜಿನಲ್ಲಿದ್ದ ಸಮಯ. ಚಂಡೀಗಢದಲ್ಲಿ ನಡೆದ ಕಾಲೇಜು ಚುನಾವಣೆಗಳಲ್ಲಿ ವಿದ್ಯಾರ್ಥಿ ರಾಜಕೀಯಕ್ಕೆ ಮೊದಲ ಬಾರಿಗೆ ಲಾರೆನ್ಸ್‌ ಎಂಟ್ರಿ ಕೊಟ್ಟಿದ್ದ. ಇದು ಆತನ ಅಪರಾಧ ಜಗತ್ತಿನ ಪ್ರಾರಂಭಿಕ ಹೆಜ್ಜೆಗಳಾಗಿತ್ತು. ಶಿಕ್ಷಣ ಪಡೆದು ಒಳ್ಳೆಯ ದಾರಿಯಲ್ಲಿ ಸಾಗಬೇಕಿದ್ದ ಲಾರೆನ್ಸ್‌ ಕಾಲೇಜು ದಿನದಲ್ಲೇ ಕುಖ್ಯಾತ ದರೋಡೆಕೋರನಾಗಿದ್ದ ಜಗ್ಗು ಭಗವಾನ್‌ಪುರಿಯ ತಂಡದಲ್ಲಿ ಕಾಣಿಸಿಕೊಳ್ಳುತ್ತಾರೆ. ಸಣ್ಣಪುಟ್ಟ ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಾರೆ. 2013 ರಲ್ಲಿ ಕಾಲೇಜು ಚುನಾವಣೆಯ ವಿಜೇತ ಅಭ್ಯರ್ಥಿ ಮತ್ತು ಲುಧಿಯಾನ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯ ಸಮಯದಲ್ಲಿ ಪ್ರತಿಸ್ಪರ್ಧಿ ಅಭ್ಯರ್ಥಿ ಆಗಿದ್ದಾತನನ್ನು ಗುಂಡಿಕ್ಕಿ ಹತ್ಯೆಗೈಯುವ ಮೂಲಕ ಅಪರಾಧ ಜಗತ್ತಿನಲ್ಲಿ ಮೊದಲ ಕ್ರೂರ ಅಧ್ಯಾಯಕ್ಕೆ ಮುನ್ನುಡಿ ಬರೆದುಬಿಟ್ಟಿದ್ದ. ಇದಾದ ಬಳಿಕ 2014 ರಲ್ಲಿ ರಾಜಸ್ಥಾನ ಪೊಲೀಸರ ಎನ್‌ಕೌಂಟರ್‌ನಲ್ಲಿ ಗುಂಡೇಟು ತಿಂದು ಜೈಲುಪಾಲಾಗುತ್ತಾನೆ.

ಕೆಲ ಸಮಯದ ಬಳಿಕ ಜೈಲಿನಿಂದ ಜಾಮೀನು ಪಡೆದು ಹೊರಬಂದ ಬಿಷ್ಣೋಯಿ ಮತ್ತೆ ಅಪರಾಧ ಜಗತ್ತಿನಲ್ಲಿ ನಾನಾ ಕೃತ್ಯವನ್ನು ಎಸೆಗುತ್ತಾನೆ. ಈ ಕಾರಣದಿಂದ 2016 ರಲ್ಲಿ ಮತ್ತೆ ಬಂಧನಕ್ಕೊಳಾಗುತ್ತಾನೆ.  2021 ರವರೆಗೆ ರಾಜಸ್ಥಾನದ ಜೈಲಿನಲ್ಲಿದ್ದ ಬಿಷ್ಣೋಯಿಯನ್ನು ನಂತರ ಮಹಾರಾಷ್ಟ್ರ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (MCOCA) ಅಡಿಯಲ್ಲಿ ದೆಹಲಿಯ ತಿಹಾರ್ ಜೈಲಿಗೆ ವರ್ಗಾಯಿಸಲಾಗುತ್ತದೆ.

ಆದರೆ ಜೈಲಿನಲ್ಲಿದ್ದುಕೊಂಡೇ ಬಿಷ್ಣೋಯಿ  ತನ್ನ ಕ್ರಿಮಿನಲ್ ನೆಟ್‌ವರ್ಕ್ ನ್ನು  ಬೆಳೆಸುತ್ತಾನೆ. ಬಿಷ್ಣೋಯಿ ಭಾರತದಲ್ಲಿನ 5 ರಾಜ್ಯಗಳಲ್ಲಿ ಸುಮಾರು 700 ಶಾರ್ಪ್‌ಶೂಟರ್‌ಗಳ ಗ್ಯಾಂಗ್‌ಗೆ ಕಮಾಂಡರ್ ಆಗಿದ್ದು, ಈತನ ಸಂಪರ್ಕ ಕೆನಡಾದವರೆಗೂ ಇದೆ. ಈತನ ವಿರುದ್ಧ ಕೊಲೆ, ಕೊಲೆ ಯತ್ನ, ಬೆದರಿಕೆ, ದರೋಡೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.

2018 ರಲ್ಲಿ ಬಿಷ್ಣೋಯಿ ಹೆಸರು ಭಾರತದಲ್ಲಿ ಸಂಚಲನ ಸೃಷ್ಟಿಸುತ್ತದೆ. ಅದಕ್ಕೆ ಕಾರಣ ಬಿಷ್ಣೋಯಿ ಬಾಲಿವುಡ್‌ ನಟ ಸಲ್ಮಾನ್‌ ಖಾನ್ ಅವರಿಗೆ ಜೀವ ಬೆದರಿಕೆಯನ್ನು ಹಾಕಿದ್ದು!.

1998ರಲ್ಲಿ ‘ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್​ಗಾಗಿ ಸಲ್ಮಾನ್​ ಖಾನ್​ ರಾಜಸ್ಥಾನದ ಜೋಧ್‌ಪುರಕ್ಕೆ ತೆರಳಿದ್ದರು.  ಆ ಸಮಯದಲ್ಲಿ ಸಲ್ಮಾನ್ ಖಾನ್ ಒಂದು ಕೃಷ್ಣ ಮೃಗವನ್ನು ಬೇಟೆಯಾಡಿದ್ದರು.  ಬಿಷ್ಣೋಯಿ ಸಮುದಾಯದವರು ಪ್ರಕೃತಿ ಆರಾಧಕರು. ಬಿಷ್ಣೋಯಿಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಈ ಪ್ರಾಣಿಯನ್ನು ಕೊಲ್ಲುವುದನ್ನು ಅಥವಾ ಮರವನ್ನು ಕಡಿಯುವುದನ್ನು ಬಿಷ್ಣೋಯಿಗಳು ಎಂದಿಗೂ ಸಹಿಸುವುದಿಲ್ಲ.

ಅಂದಿನಿಂದ ಇಂದಿನವರೆಗೆ ಸಲ್ಮಾನ್‌ ಖಾನ್‌ ಅವರಿಗೆ ಅನೇಕ ಬಾರಿ ಗ್ಯಾಂಗ್ ಸ್ಟರ್‌ ಲಾರೆನ್ಸ್‌ ಇ-ಮೇಲ್‌ ಮೂಲಕ ಬೆದರಿಕೆಯನ್ನು ಹಾಕುತ್ತಲೇ ಬಂದಿದ್ದ. ಇತ್ತೀಚೆಗೆ ಗುಂಡಿನ ದಾಳಿ ನಡೆಸಿ, ಮತ್ತೊಮ್ಮೆ ಸಲ್ಮಾನ್‌ ಖಾನ್‌ ಗೆ ಎಚ್ಚರಿಕೆಯನ್ನು ನೀಡಿದ್ದ. 2022 ಹಾಗೂ 2023 ರ ಅವಧಿಯಲ್ಲಿ ಬಿಷ್ಣೋಯಿ ಹಲವು ಬಾರಿ ಸಲ್ಮಾನ್‌ ಖಾನ್‌ ಗೆ ಬೆದರಿಕೆಯನ್ನು ಹಾಕಿದ್ದ.

-ಸುಹಾನ್‌ ಶೇಕ್

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

‌Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್‌ ರಾವ್‌

Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್‌ ರಾವ್‌

1-nati

Contact lenses ಧರಿಸಿದ ನಟಿಗೆ ಈಗ ಕಣ್ಣೇ ಕಾಣಿಸ್ತಿಲ್ಲ!

ಅರ್ಜುನ್‌ ಜತೆ ಬ್ರೇಕಪ್‌ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್‌ʼ ಎಂಟ್ರಿ?

ಅರ್ಜುನ್‌ ಜತೆ ಬ್ರೇಕಪ್‌ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್‌ʼ ಎಂಟ್ರಿ?

1428

Viral: ಖ್ಯಾತ ನಟಿಯ ಬಾತ್‌ರೂಮ್‌ ವಿಡಿಯೋ ಲೀಕ್.. ನಟಿಯಿಂದಲೇ ವಿಡಿಯೋ ರೆಕಾರ್ಡ್?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.