ಕೋಟ್ಯಂತರ ರೂ.ವಂಚನೆ ಆರೋಪ : ಬಂಧನದ ಭೀತಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ?
Team Udayavani, Aug 9, 2021, 1:51 PM IST
ಮುಂಬೈ : ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ತಾಯಿ ಸುನಂದಾ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದೀಗ ತಾಯಿ-ಮಗಳು ಬಂಧನದ ಭೀತಿಯಲ್ಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಶಿಲ್ಪಾ ಶೆಟ್ಟಿ ಅವರು ಇವೋಸಿಸ್ ವೆಲ್ನೆಸ್ ಫಿಟ್ನೆಸ್ ಕೇಂದ್ರ ನಡೆಸುತ್ತಿದ್ದಾರೆ. ಇದಕ್ಕೆ ಶಿಲ್ಪಾ ಶೆಟ್ಟಿ ಮುಖ್ಯಸ್ಥೆಯಾಗಿದ್ದರೆ, ಅವರ ತಾಯಿ ಸುನಂದಾ ನಿರ್ದೇಶಕಿ ಆಗಿದ್ದಾರೆ. ಅದರ ಶಾಖೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ತೆರೆಯುವುದಾಗಿ ಹೇಳಿ ಇಬ್ಬರು ವ್ಯಕ್ತಿಗಳಿಂದ ಕೋಟ್ಯಂತರ ರೂಪಾಯಿ ಪಡೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಕುರಿತು ಜೋಸ್ನಾ ಚೌಹಾಣ್ ಮತ್ತು ರೋಹಿತ್ ವೀರ್ ಸಿಂಗ್ ಎಂಬುವವರು ಲಖನೌನ ಹಜರತ್ಗಂಜ್ ಮತ್ತು ವಿಭೂತಿ ಖಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಪ್ರಕರಣದ ವಿಚಾರಣೆ ನಡೆಸಲು ಲಖನೌ ಪೊಲೀಸರು ಮುಂಬೈಗೆ ಆಗಮಿಸಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಒಂದು ವೇಳೆ ಶಿಲ್ಪಾ ಶೆಟ್ಟಿ ಮತ್ತು ಸುನಂದಾ ಶೆಟ್ಟಿ ಮೋಸ ಮಾಡಿರುವುದಕ್ಕೆ ಸೂಕ್ತ ಸಾಕ್ಷಿ ಸಿಕ್ಕರೆ, ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು ನಟಿ ಶಿಲ್ಪಾ ಶೆಟ್ಟಿಯವರ ಪತಿ ರಾಜ್ ಕುಂದ್ರಾ ಅವರು ಈಗಾಗಲೇ ಜೈಲಿನಲ್ಲಿದ್ದಾರೆ. ನೀಲಿ ಸಿನಿಮಾ ನಿರ್ಮಾಣ ಹಾಗೂ ಹಂಚಿಕೆ ಆರೋಪದಡಿ ಅವರನ್ನು ಜುಲೈ 19 ರಂದು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಈಗಾಗಲೇ ಶಿಲ್ಪಾ ಶೆಟ್ಟಿಯವರನ್ನು ಮುಂಬೈ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಸಂಕಷ್ಟದಲ್ಲಿ ಹೊರಬರುವ ಮುನ್ನವೆ ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಇದೀಗ ಮತ್ತೊಂದು ಸಮಸ್ಯೆ ಒಂದೊದಗಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ