‘ಸಂಜು ಒಬ್ಬ ದೃಢ ಮನಸ್ಸಿನ ಹೋರಾಟಗಾರ’: ಪತ್ನಿ ಮಾನ್ಯತಾ ಟ್ವೀಟ್
Team Udayavani, Aug 12, 2020, 5:00 PM IST
ಮುಂಬಯಿ: ಬಾಲಿವುಡ್ ನಟ ಸಂಜಯ್ ದತ್ ಅವರು ಥರ್ಡ್ ಸ್ಟೇಜ್ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿರುವ ವಿಚಾರ ಬಾಲಿವುಡ್ ಹಾಗೂ ಸಂಜು ಬಾಬಾ ಅಭಿಮಾನಿಗಳನ್ನು ಶಾಕ್ ಗೊಳಗಾಗುವಂತೆ ಮಾಡಿದೆ.
ಈ ನಡುವೆ ದತ್ ಅವರ ಪತ್ನಿ ಮಾನ್ಯತಾ ಅವರು ತನ್ನ ಪತಿಯ ಅನಾರೋಗ್ಯ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ.
ಅದರಲ್ಲಿ ಅವರು ತಮ್ಮ ಪತಿಯ ಮನೋಸ್ಥೈರ್ಯದ ಕುರಿತಾಗಿ ಭರವಸೆಯ ಮಾತನ್ನಾಡಿದ್ದಾರೆ ಮಾತ್ರವಲ್ಲದೇ ಈ ಕಠಿಣ ಪರಿಸ್ಥಿತಿಯನ್ನು ಸಂಜು ಗೆದ್ದು ಬರಲಿದ್ದಾರೆ ಎಂದು ಮಾನ್ಯತಾ ಅವರ ನಂಬಿಕೆಯಾಗಿದೆ.
‘ಸಂಜು ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಈ ಕಠಿಣ ಪರಿಸ್ಥಿತಿಯಿಂದ ಪಾರಾಗಲು ನಮಗೆ ನಿಮ್ಮೆಲ್ಲರ ಭರವಸೆ ಹಾಗೂ ಪ್ರಾರ್ಥನೆಗಳ ಅಗತ್ಯವಿದೆ. ಈ ಹಿಂದೆಯೂ ಇಂತಹ ಅನೇಕ ಕಠಿಣ ಪರಿಸ್ಥಿತಿಗಳನ್ನು ನಮ್ಮ ಕುಟುಂಬ ಎದುರಿಸಿದೆ ಮತ್ತು ಅವುಗಳನ್ನು ಗೆದ್ದು ಬಂದಿದೆ. ಹಾಗಾಗಿ ಇದರಿಂದಲೂ ನಾವು ಪಾರಾಗಲಿದ್ದೇವೆ ಎಂಬ ವಿಶ್ವಾಸ ನನಗಿದೆ’ ಎಂದು ಮಾನ್ಯತಾ ಅವರು ಇಂದು ಬಿಡುಗಡೆ ಮಾಡಿರುವ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಂಜಯ್ ದತ್ ಅವರು ಶ್ವಾಸಕೋಶದ ಮೂರನೇ ಹಂತದ ಕ್ಯಾನ್ಸರ್ ನಿಂದ ಬಳಲುತ್ತಿರುವ ವಿಚಾರ ಮಂಗಳವಾರವಷ್ಟೇ ಸುದ್ದಿಯಾಗಿತ್ತು. ಮತ್ತು ಇದರ ಚಿಕಿತ್ಸೆಗಾಗಿ ತಾನು ‘ಮೆಡಿಕಲ್ ಬ್ರೇಕ್’ ತೆಗೆದುಕೊಳ್ಳುತ್ತಿರುವುದಾಗಿ ಸಂಜು ಬಾಬಾ ಅವರು ತಮ್ಮ ಟ್ವಿಟ್ಟರ್ ಸಂದೇಶದ ಮೂಲಕ ತಿಳಿಸಿದ್ದರು. ಮತ್ತು ತಮ್ಮ ಅಭಿಮಾನಿಗಳಿಗೆ ಧೈರ್ಯ ತಾಳುವಂತೆಯೂ ಸಂಜು ಮನವಿ ಮಾಡಿಕೊಂಡಿದ್ದರು.
— Sanjay Dutt (@duttsanjay) August 11, 2020
ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣದಿಂದಾಗಿ ನಟ ಸಂಜಯ್ ದತ್ ಅವರು ಕಳೆದ ವಾರ ನಗರದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ಅವರು ಆಗಸ್ಟ್ 10ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ತಮ್ಮ ಮನೆಗೆ ಹಿಂದಿರುಗಿದ್ದರು.
ದತ್ ಅವರ ಕೋವಿಡ್ 19 ಪರೀಕ್ಷಾ ವರದಿ ನೆಗೆಟಿವ್ ಬಂದಿತ್ತು ಆದರೆ ಇಲ್ಲಿ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವ ವಿಚಾರ ತಪಾಸಣೆಯಲ್ಲಿ ಬೆಳಕಿಗೆ ಬಂದಿತ್ತು.
ನಟ ಸಂಜಯ್ ದತ್ ಅವರು ಆಗಸ್ಟ್ 08ರಂದು ಮಾಡಿದ್ದ ಟ್ವೀಟ್:
Just wanted to assure everyone that I’m doing well. I’m currently under medical observation & my COVID-19 report is negative. With the help & care of the doctors, nurses & staff at Lilavati hospital, I should be home in a day or two. Thank you for your well wishes & blessings ?
— Sanjay Dutt (@duttsanjay) August 8, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ