Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Team Udayavani, Apr 17, 2024, 11:08 AM IST
ಮುಂಬಯಿ: ಬಾಲಿವುಡ್ ನಟಿ ಮಲೈಕಾ ಆರೋರಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುತ್ತಾರೆ. ಮಲೈಕಾ ಅವರ ಮಗ ಕಾರ್ಯಕ್ರಮವೊಂದರಲ್ಲಿ ಅವರ ಬಳಿ ಕೇಳಿದ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅರ್ಬಾಜ್ ಖಾನ್ – ಮಲೈಕಾ ಅರೋರಾ ಅವರ ಪುತ್ರ ಅರ್ಹಾನ್ ಖಾನ್ ಚಾಟ್ ಶೋವೊಂದರಲ್ಲಿ ತಮ್ಮ ತಾಯಿಯ ಬಳಿ ಪ್ರಶ್ನೆಯೊಂದನ್ನು ಕೇಳಿ ಪೇಚಿಗೆ ಸಿಲುಕುವಂತೆ ಮಾಡಿದ್ದಾರೆ.
ಅರ್ಬಾಜ್ ಖಾನ್ ಹಾಗೂ ಮಲೈಕಾ 19 ವರ್ಷಗಳ ದಾಂಪತ್ಯ ಜೀವನಕ್ಕೆ 2017 ರಲ್ಲಿ ವಿಚ್ಛೇದನ ನೀಡಿದ್ದರು. ಈ ದಂಪತಿಗೆ ಅರ್ಹಾನ್ ಖಾನ್ ಎನ್ನುವ ಮಗನಿದ್ದಾನೆ. ಪರಸ್ಪರ ದೂರವಾದರೂ ಆಗಾಗ ತನ್ನ ಮಗನ ಜೊತೆಯಲ್ಲಿ ಮಲೈಕಾ ಹಾಗೂ ಅರ್ಬಾಜ್ ಕಾಣಿಸಿಕೊಳ್ಳುತ್ತಾರೆ.
ಮಲೈಕಾ ತನ್ನಗಿಂತ ಕಿರಿಯನಾಗಿರುವ ಅರ್ಜುನ್ ಕಪೂರ್ ಜೊತೆ ಡೇಟ್ ನಲ್ಲಿದ್ದಾರೆ. ಇವರಿಬ್ಬರ ಡೇಟಿಂಗ್ ವಿಚಾರ ಮದುವೆಯ ಹಂತದವರೆಗೂ ಬಂದಿದೆ. ಆಗಾಗ ಮದುವೆ ವಿಚಾರ ಪ್ರಸ್ತಾಪಕ್ಕೆ ಬಂದಿದೆ. ಆದರೆ ಇಬ್ಬರು ಈ ಬಗ್ಗೆ ಅಷ್ಟಾಗಿ ಯೋಚನೆ ಮಾಡಿಲ್ಲ.
ಇನ್ನು ಅರ್ಬಾಜ್ ಖಾನ್ ಇತ್ತೀಚೆಗೆ ಶುರಾ ಖಾನ್ ಅವರನ್ನು ವಿವಾಹವಾಗಿದ್ದಾರೆ.
ಅರ್ಹಾನ್ ಖಾನ್ ನಡೆಸಿಕೊಡುವ ಚಾಟ್ ಶೋ ‘ಧಮ್ ಬಿರಿಯಾನಿ’ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮಲೈಕಾ ಅವರು ಭಾಗಿಯಾಗಿದ್ದಾರೆ. ಈ ಚಾಟ್ ಶೋನಲ್ಲಿ ಮುಕ್ತವಾಗಿ ವೈಯಕ್ತಿಕ ವಿಚಾರದ ಬಗ್ಗೆಯೂ ಪ್ರಶ್ನೆಯನ್ನು ಕೇಳಲಾಗಿದೆ.
ಅರ್ಹಾನ್ ಖಾನ್ ತನ್ನ ತಾಯಿಯ ಬಳಿ, “ನೀವು ಯಾವಾಗ ಮದುವೆ ಆಗಲಿದ್ದೀರಿ ಹೇಳಿ” ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಮಲೈಕಾ ತನ್ನ ಮಗನ ಬಳಿಯೇ “ನೀವು ನಿನ್ನ ವರ್ಜಿನಿಟಿ(ಕನ್ಯತ್ವ) ಯಾವಾಗ ಕಳೆದುಕೊಂಡಿದ್ದೀಯಾ?” ಎಂದು ಕೇಳಿದ್ದಾರೆ ಇದಕ್ಕೆ ಅರ್ಹಾನ್ ಏನನ್ನು ಉತ್ತರಿಸದೇ ಸುಮ್ಮನೇ ಕೂತಿದ್ದಾರೆ.
ಸದ್ಯ ಈ ಕಾರ್ಯಕ್ರಮದ ಟೀಸರ್ ಮಾತ್ರ ರಿಲೀಸ್ ಮಾಡಲಾಗಿದ್ದು, ಪೂರ್ತಿ ಕಾರ್ಯಕ್ರಮ ಬುಧವಾರ(ಏ.17 ರಂದು) ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ. ʼಧಮ್ ಬಿರಿಯಾನಿʼ ಯೂಟ್ಯೂಬ್ ನಲ್ಲಿ ಪ್ರಸಾರವಾಗಲಿದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ