Covid-19 ಲಾಕ್ ಡೌನ್; ಜೋರ್ಡಾನ್ ನಲ್ಲಿ ಸಿಕ್ಕಿಹಾಕಿಕೊಂಡ ನಟ ಪ್ರಥ್ವಿರಾಜ್ ಹಾಗೂ ಸಿನಿತಂಡ
ಪ್ರಥ್ವಿರಾಜ್ ಅಭಿನಯದ "ಆದುಜೀವಿತಂ" ಸಿನಿಮಾದ ಚಿತ್ರೀಕರಣಕ್ಕಾಗಿ ಸಿನಿಮಾ ತಂಡ ಜೋರ್ಡಾನ್ ಗೆ ತೆರಳಿತ್ತು.
Team Udayavani, Apr 2, 2020, 12:58 PM IST
ಜೋರ್ಡಾನ್:ಮಲಯಾಳಂ ಸಿನಿಮಾ ನಿರ್ದೇಶಕ ಬ್ಲೇಸೈ, ಸ್ಟಾರ್ ನಟ ಪ್ರಥ್ವಿರಾಜ್ ಸುಕುಮಾರನ್ ಸೇರಿದಂತೆ ಚಿತ್ರತಂಡದ 58 ಮಂದಿ ಕೋವಿಡ್ 19 ಹರಡುವಿಕೆಯ ಭಯದಿಂದ ಹೇರಲಾಗಿದ್ದ ಲಾಕ್ ಡೌನ್ ನಿಂದಾಗಿ ಜೋರ್ಡಾನ್ ನಲ್ಲಿ ಸಿಕ್ಕಿಹಾಕಿಕೊಂಡಿರುವ ಬಗ್ಗೆ ವರದಿಯಾಗಿದೆ.
ಪ್ರಥ್ವಿರಾಜ್ ಅಭಿನಯದ “ಆದುಜೀವಿತಂ” ಸಿನಿಮಾದ ಚಿತ್ರೀಕರಣಕ್ಕಾಗಿ ಸಿನಿಮಾ ತಂಡ ಜೋರ್ಡಾನ್ ಗೆ ತೆರಳಿತ್ತು. ಆದರೆ ಕೋವಿಡ್ 19 ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಘೋಷಿಸಿದ್ದರಿಂದ ಇಡೀ ತಂಡ ಶೂಟಿಂಗ್ ಇಲ್ಲದೇ ಜೋರ್ಡಾನ್ ನಲ್ಲಿಯೇ ಉಳಿಯುವಂತಾಗಿದೆ ಎಂದು ವರದಿ ತಿಳಿಸಿದೆ.
ಏತನ್ಮಧ್ಯೆ ಅನಿವಾಸಿ ಕೇರಳಿಯರ ಇಲಾಖೆ ಗುರುವಾರ ಜೋರ್ಡಾನ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ, ಮಲಯಾಳಂ ಸಿನಿಮಾ ನಟ ಪ್ರಥ್ವಿರಾಜ್ ಸುಕುಮಾರನ್ ಹಾಗೂ ನಿರ್ದೇಶಕ ಬ್ಲೇಸೈ ಮತ್ತು ಸಿಬ್ಬಂದಿಗಳ ಬಗ್ಗೆ ವಿಚಾರಿಸಿರುವುದಾಗಿ ವರದಿ ವಿವರಿಸಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಅನಿವಾಸಿ ಕೇರಳಿಯರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರನ್ನು ಸಂಪರ್ಕಿಸಿ, ಜೋರ್ಡಾನ್ ನಲ್ಲಿರುವ ಭಾರತೀಯ ರಾಯಭಾರಿ ಜತೆ ಮಾತನಾಡಿ ಅಲ್ಲಿನ ಪರಿಸ್ಥಿತಿಯನ್ನು ತಿಳಿದುಕೊಳ್ಳುವಂತೆ ಸೂಚಿಸಿದ್ದರು.
ರಾಯಭಾರಿ ಕಚೇರಿ ಸಿನಿಮಾ ನಿರ್ದೇಶಕ, ನಟ ಪ್ರಥ್ವಿರಾಜ್ ಬಗ್ಗೆ ಮಾಹಿತಿ ಕಲೆ ಹಾಕಿ ಎಲ್ಲರೂ ಸುರಕ್ಷಿತರಾಗಿರುವುದಾಗಿ ಮಾಹಿತಿ ನೀಡಿದೆ. ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ಚಿತ್ರೀಕರಣದಿಂದ ದೂರ ಉಳಿಯುವುದಾಗಿ ಚಿತ್ರ ನಿರ್ದೇಶಕ ತಿಳಿಸಿದ್ದಾರೆ. ಪರಿಸ್ಥಿತಿ ಸಹಜಸ್ಥಿತಿಗೆ ಮರಳಿದ ನಂತರ ಸಿನಿಮಾ ಚಿತ್ರೀಕರಣ ಮುಂದುವರಿಸುವುದಾಗಿ ಹೇಳಿದೆ.
ಬ್ಲೇಸೈ ನಿರ್ದೇಶನದ “ಅದುಜೀವಿತಂ” ಸಿನಿಮಾದಲ್ಲಿ ಪ್ರಥ್ವಿರಾಜ್ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಜೋರ್ಡಾನ್ ನಲ್ಲಿ 212 ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಕೋವಿಡ್ 19 ಸೋಂಕು ಪೀಡಿತರು ಗುಣಮುಖರಾಗಿದ್ದಾರೆ. ಈವರೆಗೆ ಯಾವುದೇ ಸಾವಿನ ಬಗ್ಗೆ ವರದಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…