ಮೊದಲ ದಿನದ ಗಳಿಕೆಯಲ್ಲಿ ಮಿಶನ್ ಮಂಗಲ್ ಮುಂದೆ

ಮತ್ತೊಮ್ಮೆ ಜಾನ್ ಅಬ್ರಹಾಂಗಿಂತ ಅಕ್ಷಯ್ ಕುಮಾರ್ ಮುಂದೆ

Team Udayavani, Aug 16, 2019, 11:00 PM IST

Mission-Mangal-726

ಮಿಶನ್ ಮಂಗಲ್ ನಿರ್ಧಾರಿತ ಕಕ್ಷೆಗೆ ಸೇರುವ ಲಕ್ಷಣಗಳು ಗೋಚರಿಸಿವೆ. ಕೆಲವು ವರ್ಷಗಳಿಂದ ವಿಭಿನ್ನ ಪಾತ್ರಗಳ ಮೂಲಕವೇ ಒಂದಿಷ್ಟು ನೈಜ ಪ್ರೇಕ್ಷಕರನ್ನು ಗಳಿಸಿಕೊಂಡಿರುವ ಅಕ್ಷಯ್ ಕುಮಾರ್ ಮಿಶನ್ ಮಂಗಲ್ ನ ಮೊದಲ ದಿನದ ಬಾಕ್ಸಾಫೀಸ್ ಸಂಗ್ರಹ ಮೋಸ ಮಾಡಿಲ್ಲ.

ಹಾಗೆ ಹೇಳುವುದಾದರೆ, ಮಿಶನ್ ಮಂಗಲ್ ನ ಮೊದಲ ದಿನದ ಗಳಿಕೆಯೇ ಇದುವರೆಗಿನ ಅಕ್ಷಯ್ ಕುಮಾರ್ ಚಿತ್ರಗಳ ಪೈಕಿ ಹೆಚ್ಚು. ಚಿತ್ರ ಬಿಡುಗಡೆಗೊಂಡ ಮೊದಲ ದಿನ ದೇಶದ ಸುಮಾರು 3 ಸಾವಿರ ಚಿತ್ರಮಂದಿರಗಳಲ್ಲಿ  ಪ್ರದರ್ಶಿತವಾಗಿತ್ತು. ಒಟ್ಟೂ 29 ಕೋಟಿ ರೂ. ಗಳಿಕೆಯನ್ನು ಕಂಡಿದೆ. ಈ ಹಿಂದಿನ ಅವರ ಚಿತ್ರ ಗೋಲ್‌ಡ್‌ 25 ಕೋಟಿ ರೂ. ಮೊದಲ ದಿನ ಗಳಿಸಿತ್ತು.

ಆಗಸ್ಟ್ 15 ಸ್ವಾತಂತ್ರ್ಯೋತ್ಸವ ದಿನ. ಜನರೆಲ್ಲಾ ದೇಶಭಕ್ತಿಯ ಆಚರಣೆಯಲ್ಲಿ ತೊಡಗಿರುತ್ತಾರೆ. ಈ ಹೊತ್ತಿಿನಲ್ಲಿ ದೇಶವೇ ಹೆಮ್ಮೆ ಪಡುವ ಮಂಗಲಯಾನದ ಕುರಿತಾದ ಚಿತ್ರ ಬಿಡುಗಡೆಗೊಂಡರೆ ಒಂದಿಷ್ಟು ವ್ಯಾಪಾರ ಕುದುರಬಹುದೆಂಬ ಚಿತ್ರ ತಂಡದ ಲೆಕ್ಕಾಚಾರ ಕೈ ಹಿಡಿದಿದೆ.

ಜಗನ್ ಶಕ್ತಿ ನಿರ್ದೇಶನದ ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ಜತೆ ಹಿಂದಿಯ ಚಿತ್ರನಟಿಯರ ದಂಡೇ ಇದೆ. ವಿದ್ಯಾ ಬಾಲನ್, ತಾಪಸ್ಸಿ ಪನ್ನು, ಸೋನಾಕ್ಷಿ ಸಿನ್ಹಾ, ಕೀರ್ತಿ ಕುಲ್ಹರಿ, ನಿತ್ಯಾ ಮೆನನ್ ಇದ್ದಾರೆ.

ಬಾಟ್ಲಾ ಹೌಸ್ ಪ್ರಭಾವ ಕಡಿಮೆ
ಮಿಶನ್ ಮಂಗಲ್ ಗೆ ಬಾಕ್ಸಾಫೀಸಿನಲ್ಲಿ ಜಾನ್ ಅಬ್ರಹಾಂ ಅಭಿನಯದ ಬಾಟ್ಲಾ ಹೌಸ್ ಪೈಪೋಟಿ ಕೊಡಬಹುದೇ ಎಂದು ಲೆಕ್ಕ ಹಾಕಲಾಗಿತ್ತು. ಆದರೆ ಅಂಥ ಪ್ರಭಾವ ಬೀರಿದಂತೆ ತೋರುತ್ತಿಲ್ಲ. ಬಾಟ್ಲಾ ಹೌಸ್ ಮೊದಲ ದಿನ ಸುಮಾರು 14 ಕೋಟಿ ರೂ. ಗಳಿಸಿದೆ.

ಹಾಗೆಂದು ಇದೇನೂ ಅಕ್ಷಯ್ ಕುಮಾರ್ ಹಾಗೂ ಜಾನ್ ಅಬ್ರಹಾಂ ಸಿನಿಮಾ ಕೌಂಟರ್ ನಲ್ಲಿ ಮುಖಾಮುಖಿಯಾಗುತ್ತಿರುವುದೇನೂ ಹೊಸದಲ್ಲ. ಆದರೆ ಹಿಂದೆಯೂ ಅಕ್ಷಯ್ ಗೆದ್ದಿದ್ದರು, ಈ ಬಾರಿಯೂ ಅಕ್ಷಯ್ ಗೆದ್ದಿದ್ದಾರೆ.

ಜಾನ್ ಅಬ್ರಹಾಂ ರ ಸತ್ಯಮೇವ ಜಯತೇ ಸಿನಿಮಾ ಬಿಡುಗಡೆಯ ದಿನದಂದೇ ಅಕ್ಷಯ್ ಕುಮಾರ್ ಅವರ ಗೋಲ್ಡ್ ಚಿತ್ರ ಬಿಡುಗಡೆಯಾಗಿತ್ತು. ಗೋಲ್ಡ್ 25 ಕೋಟಿ ಗಳಿಸಿದ್ದರೆ, ಸತ್ಯಮೇವ ಜಯತೇ 20 ಕೋಟಿ ಗಳಿಸಿತ್ತು. ಮಂಗಲ್ ಮಿಶನ್ ವೀಕೆಂಡ್ ನಲ್ಲಿ ಎಷ್ಟು ಗಳಿಸೀತೆಂಬ ಕುತೂಹಲ ಕಾಡಿದೆ.

 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.