ವಕೀಲ್ ಸಾಬ್ ವಿಶೇಷ ಪ್ರದರ್ಶನ ರದ್ದು: ಪವನ್ ಕಲ್ಯಾಣ್ ಅಭಿಮಾನಿಗಳಿಂದ ಚಿತ್ರಮಂದಿರಗಳು ಧ್ವಂಸ


Team Udayavani, Apr 9, 2021, 3:42 PM IST

cbgdxfgd

ಹೈದರಾಬಾದ್: ನಟ ಪವನ್ ಕಲ್ಯಾಣ್ ಅಭಿನಯದ ‘ವಕೀಲ್ ಸಾಬ್’ ಚಿತ್ರಪ್ರದರ್ಶನ ಸ್ಥಗಿತಗೊಳಿಸಿದ್ದಕ್ಕೆ ಆಕ್ರೋಶಗೊಂಡ ಅಭಿಮಾನಿಗಳು ಚಿತ್ರಮಂದಿರ ಧ್ವಂಸಗೊಳಿಸಿರುವ ಘಟನೆ ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ ನಡೆದಿದೆ.

ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ವಕೀಲ್ ಸಾಬ್ ಸಿನಿಮಾ ರಾಜ್ಯಾದ್ಯಂತ ಇಂದು (ಏಪ್ರಿಲ್ 9 ) ಬಿಡುಗಡೆಯಾಗಿದೆ. ಆದರೆ, ಗುರುವಾರ ರಾತ್ರಿ ಅಭಿಮಾನಿಗಳಿಗೋಸ್ಕರ ಆಯೋಜಿಸಲಾಗಿದ್ದ ಚಿತ್ರಪ್ರದರ್ಶನವನ್ನು ರದ್ದುಗೊಳಿಸಿರುವುದು ಈ ಘಟನೆಗೆ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ.

ತಿರುಪತಿ ವ್ಯಾಪ್ತಿಗೆ ಬರುವ ಕೃಷ್ಣತೇಜಾ, ಶಾಂತಿ ಹಾಗೂ ಸಂದ್ಯಾ ಸೇರಿದಂತೆ ಐದು ಸಿನಿಮಾ ಮಂದಿರಗಳ ಮೇಲೆ ಉದ್ರಿಕ್ತ ಅಭಿಮಾನಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಥಿಯೇಟರ್‍ ಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ.

ತೆಲಂಗಾಣದ ಜೋಗುಳಾಂಬಾ ಗದ್ವಾಲ್ ನಲ್ಲಿರುವ ಶ್ರೀನಿವಾಸ ಚಿತ್ರ ಮಂದಿರ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದೆ. ಸ್ಯಾಟ್ ಲೈಟ್ ಸಮಸ್ಯೆಯಿಂದ ಮೊದಲ ಶೋ ರದ್ದಾದ ಪರಿಣಾಮ ಫ್ಯಾನ್ಸ್ ಗಳು ಚಿತ್ರಮಂದಿರದ ಬಾಗಿಲು ಹಾಗೂ ಕಿಟಕಿಗಳನ್ನು ಮುರಿದು ಹಾಕಿದ್ದಾರೆ. ಈ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಘಟನೆ ಕುರಿತು ಸ್ಥಳೀಯ ಮಾಧ್ಯಮಗಳ ಎದುರು ಆಕ್ರೋಶ ವ್ಯಕ್ತಪಡಿಸಿರುವ ಪವನ್ ಕಲ್ಯಾಣ್ ಅಭಿಮಾನಿಗಳು, ಆಂಧ್ರ ಪ್ರದೇಶದ ಸರ್ಕಾರವು ಉದ್ದೇಶಪೂರ್ವಕವಾಗಿ ಸಿನಿಮಾ ಪ್ರದರ್ಶನ ರದ್ದುಪಡಿಸಿದೆ ಎಂದು ದೂರಿದ್ದಾರೆ.

ಅದೇ ರೀತಿ ಪಶ್ಚಿಮ ಗೋದಾವರಿ ಜಿಲ್ಲೆಯ ನಿಡದವೊಲು ಪ್ರದೇಶದ ಎಂಎಲ್‍ಎ ಮನೆ ಎದುರು ಪ್ರತಿಭಟನೆ ನಡೆಸಿರುವ ಅಭಿಮಾನಿಗಳು, ವಿಶೇಷ ಪ್ರದರ್ಶನ ಶುರುಮಾಡುವಂತೆ ಆಗ್ರಹಿಸಿದರು.

ಕಡಪಾ ಜಿಲ್ಲೆ ಬೆಡ್ವಾಲ್ ಪ್ರದೇಶದಲ್ಲಿ ಚಿತ್ರಮಂದಿರದ ಸಿಬ್ಬಂದಿ ಹಾಗೂ ಪವನ್ ಕಲ್ಯಾಣ್ ಅಭಿಮಾನಿಗಳ ಮಧ್ಯೆ ಸಂಘರ್ಷ ನಡೆದಿದೆ. ಅಭಿಮಾನಿಗಳ ಗುಂಪು ಟಾಕೀಸ್‍ನಲ್ಲಿರುವ ಚೇರ್ ಗಳನ್ನು ಮುರಿದಿರುವ ಕುರಿತು ವರದಿಯಾಗಿದೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.