ಜಾಮೀನು ಅರ್ಜಿ ವಿಚಾರಣೆಗೆ ನಿರಾಕರಣೆ : ಕುಂದ್ರಾ ಪೊಲೀಸ್ ಕಸ್ಟಡಿಯ ಅವಧಿ ವಿಸ್ತರಣೆ
Team Udayavani, Jul 23, 2021, 2:20 PM IST
ಮುಂಬೈ: ನೀಲಿ ಚಿತ್ರಗಳ ನಿರ್ಮಾಣದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರು ಪೊಲೀಸ್ ಕಸ್ಟಡಿಯ ಅವಧಿ ಜುಲೈ 27ವರೆಗೆ ವಿಸ್ತರಣೆ ಆಗಿದೆ.
ಪೋರ್ನ್ ಸಿನಿಮಾ ನಿರ್ಮಾಣದ ಆರೋಪದ ಮೇಲೆ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ (ಜುಲೈ 19) ಬಂಧಿಸಿದ್ದರು. ನಂತರ ಅವರನ್ನು ಜುಲೈ 23 ವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಹೆಚ್ಚುವರಿಯಾಗಿ 7 ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಮುಂಬೈ ಪೊಲೀಸರು ಮುಂಬೈನ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಮನವಿ ಮಾಡಿದ್ದರು. ಆದರೆ, ನ್ಯಾಯಾಲಯ ಅವರನ್ನು ನಾಲ್ಕು ದಿನ ಮಾತ್ರ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಇದೆ ವೇಲೆ ಕುಂದ್ರಾ ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಲು ನ್ಯಾಯಾಲಯ ನಿರಾಕರಿಸಿದೆ. ರಾಜ್ ಕುಂದ್ರಾ ತನಿಖೆಗೆ ಸೂಕ್ತ ಸಹಕಾರ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ, ಪೊಲೀಸರಿಗೆ ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದೆ. ಈ ಕಾರಣಕ್ಕೆ ಹೆಚ್ಚುವರಿಯಾಗಿ 7 ದಿನಗಳ ಕಾಲ ರಾಜ್ ಕುಂದ್ರಾ ವಶಕ್ಕೆ ನೀಡಬೇಕು ಎಂದು ನ್ಯಾಯಾಲಯದಲ್ಲಿ ಪೊಲೀಸರು ಅನುಮತಿ ಕೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
Lok Sabha ಅಖಾಡಕ್ಕೆ ಲಾಲು ಪ್ರಸಾದ್ ಪುತ್ರಿ ಡಾ| ರೋಹಿಣಿ ಹೆಜ್ಜೆ