ಸುಶಾಂತ್ ಆತ್ಮಹತ್ಯೆ ಪ್ರಕರಣ: ಕಂಗನಾ ರಣಾವುತ್ ಗೆ ಮತ್ತೆ ಸಮನ್ಸ್ ನೀಡಿದ ಮುಂಬೈ ಪೊಲೀಸರು
Team Udayavani, Jul 23, 2020, 11:43 AM IST
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಮುಂಬೈ ಪೊಲೀಸರು ನಡೆಸುತ್ತಿದ್ದು, ಈಗಾಗಲೇ ಹಲವರ ವಿಚಾರಣೆ ನಡೆಸಿದ್ದಾರೆ. ಬಾಲಿವುಡ್ ನಟಿ ಕಂಗನಾ ರಣಾವುತ್ ರಿಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ಹೊಸ ಸಮನ್ಸ್ ನೀಡಿದ್ದಾರೆ.
ಕಳೆದ ಜುಲೈ 14ರಂದು ಸುಶಾಂತ್ ಬಾಂದ್ರಾದ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು. ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಸುಶಾಂತ್ ಗೆಳತಿ ರಿಯಾ ಸೇರಿದಂತೆ ಹಲವು ಒತ್ತಾಯಿಸಿದ್ದರು. ಬಾಲಿವುಡ್ ನಲ್ಲಿ ನಡೆಯುತ್ತಿರುವ ಸ್ವಜನ ಪಕ್ಷಪಾತಕ್ಕೆ ಸುಶಾಂತ್ ಬಲಿಯಾಗಿದ್ದಾರೆ ಎಂದು ಕಂಗನಾ ರಣಾವುತ್ ಆರೋಪಿಸಿದ್ದರು.
ನಿರ್ದೇಶಕ ಕರಣ್ ಜೋಹರ್ ಸುಶಾಂತ್ ಗೆ ಅವಮಾನಿಸಿದ್ದರು. ಸುಶಾಂತ್ ಸಿನಿಮಾಗಳಿಗೆ ಥಿಯೇಟರ್ ಸಿಗದಂತೆ ಒಳಸಂಚು ಮಾಡಲಾಗಿತ್ತು. ಬಾಲಿವುಡ್ ನಲ್ಲಿ ನೆಪೊಟಿಸಂ ಜೋರಾಗಿದೆ ಎಂದು ಕಂಗನಾ ಆರೋಪಿಸಿದ್ದರು. ಈ ಕಾರಣದಿಂದ ಕಂಗನಾ ರ ವಿಚಾರಣೆ ಮಾಡಲು ಮುಂಬೈ ಪೊಲೀಸರು ನಿರ್ಧರಿಸಿದ್ದಾರೆ.
ಈ ಹಿಂದೆ ಕಂಗಾನರ ಮುಂಬೈ ನಿವಾಸಕ್ಕೆ ನೋಟಿಸ್ ನೀಡಿದಾಗ ಆಕೆ ಮನೆಯಲ್ಲಿ ಇರದ ಕಾರಣ ಉತ್ತರಿಸಿರಲಿಲ್ಲ. ನಂತರ ಕಂಗನಾ ಸೋದರಿ ರಂಗೋಲಿಗೆ ಪೊಲೀಸರು ಮಾಹಿತಿ ನೀಡಿದ್ದರು. ಕಂಗನಾ ತನ್ನ ತವರಾದ ಹಿಮಾಚಲ ಪ್ರದೇಶದಲ್ಲಿದ್ದಾರೆ. ಹೀಗಾಗಿ ಮುಂಬೈಗೆ ಬಂದು ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ಮತ್ತೊಂದು ಸಮನ್ಸ್ ನೀಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?