Producer: ಲೈಂಗಿಕ ಕಿರುಕುಳ ಆರೋಪ; ಖ್ಯಾತ ಧಾರಾವಾಹಿ ನಿರ್ಮಾಪಕನ ವಿರುದ್ಧ ದೂರು ನೀಡಿದ ನಟಿ
Team Udayavani, Jun 20, 2023, 9:21 AM IST
ಮುಂಬಯಿ: ಹಿಂದಿ ಕಿರುತೆರೆಯಲ್ಲಿ ಜನಪ್ರಿಯ ಮನರಂಜನಾ ಧಾರಾವಾಹಿಗಳಲ್ಲಿ ಒಂದಾಗಿರುವ ʼತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಕಾರ್ಯಕ್ರಮದ ನಿರ್ಮಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ದೂರು ದಾಖಲಾಗಿದೆ.
ಕಳೆದ 15 ವರ್ಷಗಳಿಂದ ʼತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರಾವಾಹಿಯಲ್ಲಿ ಕೆಲಸ ಮಾಡುತ್ತಿದ್ದ ನಟಿಯೊಬ್ಬರು ಇತ್ತೀಚೆಗೆ ಧಾರಾವಾಹಿಯ ನಿರ್ಮಾಪಕ ಅಸಿತ್ ಕುಮಾರ್ ಮೋದಿ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಮಾಡಿದ್ದರು. ಇದೀಗ ಅದೇ ನಟಿ ಪೊವಾಯಿ ಪೊಲೀಸ್ ಠಾಣೆಯಲ್ಲಿ ನಿರ್ಮಾಪಕ ಸೇರಿ ಮೂವರ ವಿರುದ್ಧ ಲಿಖಿತ ದೂರನ್ನು ನೀಡಿದ್ದಾರೆ.
ಇದನ್ನೂ ಓದಿ: Tollywood;ಮೆಗಾ ಕುಟುಂಬದಲ್ಲಿ ಸಂತಸ; ಹೆಣ್ಣು ಮಗುವಿಗೆ ಜನ್ಮ ನೀಡಿದ ಉಪಾಸನಾ
ತನಗೆ ʼತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರಾವಾಹಿಯ ನಿರ್ಮಾಪಕ ಅಸಿತ್ ಕುಮಾರ್ ಮೋದಿ ಅವರು ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ ಆರೋಪವನ್ನು ಮಾಡಿ ಪೊಲೀಸರಿಗೆ ಲಿಖಿತವಾಗಿ ದೂರನ್ನು ನೀಡಿದ್ದಾರೆ. ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳದ ಆರೋಪ ಮಾಡಿ ಪ್ರಾಜೆಕ್ಟ್ ಹೆಡ್ ಸೊಹೈಲ್ ರಮಣಿ ಮತ್ತು ಕಾರ್ಯಕಾರಿ ನಿರ್ಮಾಪಕ ಜತಿನ್ ಬಜಾಜ್ ವಿರುದ್ಧವೂ ದೂರನ್ನು ನೀಡಿದ್ದಾರೆ.
ಸದ್ಯ ಪೊಲೀಸರು ನಟಿಯ ದೂರನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಮತ್ತು 509 (ಮಹಿಳೆಯೊಬ್ಬಳ ಮೇಲಿನ ದೌರ್ಜನ್ಯ ಅಥವಾ ಕ್ರಿಮಿನಲ್ ಬಲ) ಅಡಿಯಲ್ಲಿ ಪೊವಾಯಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇದುವರೆಗೆ ನಿರ್ಮಾಪಕನ ಬಂಧನವಾಗಿಲ್ಲ ಎಂದು ವರದಿ ತಿಳಿಸಿದೆ.
Mumbai, Maharashtra | Powai Police has registered a case against Taarak Mehta Ka Ooltah Chashmah producer Asit Modi, operation head Sohail Ramani, and executive producer Jatin Bajaj under sections 354 and 509 of the IPC based on a complaint by an actor of the show. No arrests…
— ANI (@ANI) June 20, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ