ಚೆನ್ನೈ: ಖ್ಯಾತ ಸಂಗೀತ ನಿರ್ದೇಶಕ ಎಆರ್ ರಹಮಾನ್ ಗೆ ಮಾತೃ ವಿಯೋಗ
ಕರೀಮಾ ಬೇಗಂ ಅವರು ರಾಜಾಗೋಪಾಲ್ ಕುಲಶೇಖರನ್(ಆರ್ ಕೆ ಶೇಖರ್) ಅವರನ್ನು ವಿವಾಹವಾಗಿದ್ದರು.
Team Udayavani, Dec 28, 2020, 2:31 PM IST
ಮುಂಬೈ: ಆಸ್ಕರ್ ಹಾಗೂ ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಸಂಗೀತ ನಿರ್ದೇಶಕ ಎಆರ್ ರಹಮಾನ್ ಅವರ ತಾಯಿ ಕರೀಮಾ ಬೇಗಂ ಸೋಮವಾರ(ಡಿಸೆಂಬರ್ 28, 2020) ಚೆನ್ನೈನಲ್ಲಿ ನಿಧನರಾಗಿದ್ದು, ಮಾತೃ ವಿಯೋಗದ ಕುರಿತು ರಹಮಾನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕರೀಮಾ ಬೇಗಂ ಅವರು ನಿಧನರಾಗಿದ್ದು, ಪಾರ್ಥೀವ ಶರೀರದ ಅಂತಿಮ ದರ್ಶನದ ನಂತರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಕರೀಮಾ ಬೇಗಂ ಅವರು ರಾಜಾಗೋಪಾಲ್ ಕುಲಶೇಖರನ್(ಆರ್ ಕೆ ಶೇಖರ್) ಅವರನ್ನು ವಿವಾಹವಾಗಿದ್ದರು. ಕುಲಶೇಖರನ್ ಹೆಸರಾಂತ ಸಂಗೀತ ನಿರ್ದೇಶಕರಾಗಿದ್ದು, ಮಲಯಾಳಂ ಸಿನಿಮಾಗಳಲ್ಲಿ ಕಾರ್ಯನಿರ್ವಹಿಸಿದ್ದರು. ಸುಮಾರು 52 ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದು (23 ಮಲಯಾಳಂ ಸಿನಿಮಾ) ಇವರು ನಿರ್ದೇಶಿಸಿದ್ದ ಚೊಟ್ಟಾ ಮುತಲ್ ಚುಡಾಲಾ ವಾರೆ ಸಂಗೀತ ಕೇರಳದಲ್ಲಿ ಸೂಪರ್ ಹಿಟ್ ಆಗಿತ್ತು.
ಇದನ್ನೂ ಓದಿ:ಜ.1ರಿಂದ ಶಾಲೆ-ಕಾಲೇಜು, ವಿದ್ಯಾಗಮ ಆರಂಭ: ಸಚಿವರು, ಶಾಸಕರಿಗೆ ಪತ್ರ ಬರೆದ ಸುರೇಶ್ ಕುಮಾರ್
ತನ್ನ ಬದುಕಿಗೆ ತಾಯಿಯ ಕೊಡುಗೆ ಅಪಾರ ಎಂಬುದಾಗಿ ಎಆರ್ ರಹಮಾನ್ ಹಲವು ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು. ರಹಮಾನ್ ತಂದೆಯ ಸ್ಟುಡಿಯೋದಲ್ಲಿ ಸಹಾಯಕರಾಗಿ ಕೆಲಸ ಮಾಡಿದ್ದರು. ತಂದೆ ಆರ್ ಕೆ ಶೇಖರ್ ವಿಧಿವಶರಾದಾಗ ರಹಮಾನ್ ಗೆ ಒಂಬತ್ತು ವರ್ಷ. ಬಳಿಕ ಕುಟುಂಬ ನಿರ್ವಹಣೆ ಜವಾಬ್ದಾರಿ ಎಆರ್ ರಹಮಾನ್ ಗೆ ಹೆಗಲಿಗೆ ಬಿದ್ದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ