ಮುರಿದು ಬಿದ್ದ ಪುತ್ರನ ದಾಂಪತ್ಯ | ಭಾವುಕರಾದ ನಟ ನಾಗಾರ್ಜುನ್
Team Udayavani, Oct 2, 2021, 11:00 PM IST
ಹೈದರಾಬಾದ್: ಪುತ್ರ ನಾಗಚೈತನ್ಯನ ದಾಂಪತ್ಯ ಜೀವನ ಮುರಿದು ಬಿದ್ದಿದ್ದಕ್ಕೆ ನಟ ನಾಗಾರ್ಜುನ ಅಕ್ಕಿನೇನಿ ಬೇಸರಗೊಂಡಿದ್ದಾರೆ.
‘ಭಾರವಾದ ಹೃದಯದಿಂದ ಇದನ್ನು ಹೇಳುತ್ತಿದ್ದೇನೆ. ಸ್ಯಾಮ್ ಮತ್ತು ಚೈ ನಡುವೆ ಆಗಿದ್ದು ದುರದೃಷ್ಟಕರ. ಗಂಡ-ಹೆಂಡತಿ ನಡುವೆ ನಡೆಯುವುದು ತೀರಾ ವೈಯಕ್ತಿಕ. ಸ್ಯಾಮ್ ಮತ್ತು ಚೈ ಇಬ್ಬರೂ ನನಗೆ ಪ್ರೀತಿ ಪಾತ್ರರು. ನನ್ನ ಕುಟುಂಬ ಯಾವತ್ತೂ ಸ್ಯಾಮ್ ಜೊತೆ ಕಳೆದ ಒಳ್ಳೆಯ ಕ್ಷಣಗಳನ್ನು ನೆನಪು ಮಾಡಿಕೊಳ್ಳುತ್ತದೆ ಮತ್ತು ಅವಳು ಯಾವತ್ತೂ ನಮಗೆ ಪ್ರೀತಿ ಪಾತ್ರಳಾಗಿಯೇ ಇರುತ್ತಾಳೆ. ಇಬ್ಬರಿಗೂ ಧೈರ್ಯಕೊಟ್ಟು ದೇವರು ಕಾಪಾಡಲಿ’ ಎಂದು ನಾಗಾರ್ಜುನ ಭಾವುಕರಾಗಿ ಟ್ವಿಟರಿನಲ್ಲಿ ಬರೆದುಕೊಂಡಿದ್ದಾರೆ ನಾಗಾರ್ಜುನ.
— Nagarjuna Akkineni (@iamnagarjuna) October 2, 2021
ಪ್ರೀತಿಸಿ ಮದುವೆಯಾಗಿದ್ದ ನಾಗಚೈನತ್ಯ ಹಾಗೂ ಸಮಂತಾ ಅವರು ಇಂದು ಅಧಿಕೃತವಾಗಿ ಬ್ರೇಕಪ್ ಮಾಡಿಕೊಂಡರು. ನಾಲ್ಕು ವರ್ಷಗಳ ದಾಂಪತ್ಯಕ್ಕೆ ಗುಡ್ ಬೈ ಹೇಳಿದ ಈ ಜೋಡಿ, ನಮ್ಮ ಖಾಸಗಿ ಬದುಕನ್ನು ಎಲ್ಲರೂ ಗೌರವಿಸಿ, ಇಂತಹ ಸಂದರ್ಭದಲ್ಲಿ ನಮ್ಮ ಜೊತೆ ನಿಲ್ಲಿ ಎಂದು ಮಾಧ್ಯಮಗಳಿಗೆ ಹಾಗೂ ಅಭಿಮಾನಿಗಳಿಗೆ ಮನವಿ ಮಾಡಿದೆ.
ಚೈ ಹಾಗೂ ಸ್ಯಾಮ್ ವಿಚ್ಛೇದನದ ಸುದ್ದಿ ಕಳೆದ ಕೆಲ ದಿನಗಳಿಂದ ಕೇಳಿ ಬರುತ್ತಿತ್ತು. ನಾಗಾರ್ಜುನ ಸಹ ಮಗನ ವೈವಾಹಿಕ ಜೀವನವನ್ನು ಸರಿಪಡಿಸಲು ಸಾಕಷ್ಟು ಪ್ರಯತ್ನ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು