ಹಾರ್ದಿಕ್ ಜತೆ ವಿಚ್ಚೇದನದ ಸುದ್ದಿ ಬೆನ್ನಲ್ಲೇ ದಿಶಾ ಪಟಾನಿ ಗೆಳೆಯನ ಜತೆ ಕಾಣಿಸಿಕೊಂಡ ನತಾಶಾ
Team Udayavani, May 25, 2024, 6:41 PM IST
ಮುಂಬಯಿ: ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಪತ್ನಿ ನತಾಶಾ ಸ್ಟಾನ್ಕೊವಿಕ್ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡಿದೆ ಎನ್ನುವ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ.
ನತಾಶಾ ಸ್ಟಾನ್ಕೊವಿಕ್ – ಹಾರ್ದಿಕ್ 2020 ರ ಮೇ ತಿಂಗಳಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ವಿವಾಹವಾಗಿದ್ದರು. ಈ ದಂಪತಿ ಮದುವೆಗೂ ಮುನ್ನ ಒಂದು ಮಗು ಮಾಡಿಕೊಂಡಿತ್ತು. ಈ ವಿಚಾರದಿಂದ ಇಬ್ಬರ ನಡುವಿನ ಸಂಬಂಧದ ಬಗ್ಗೆ ಅನೇಕ ಊಹಾಪೋಹಾಗಳು ಹರಿದಾಡಿತ್ತು.
ಡೇಟಿಂಗ್ ನಲ್ಲಿದ್ದ ಸಂದರ್ಭದಲ್ಲಿ ಹಾಗೂ ಮದುವೆ ಬಳಿಕ ಹಾರ್ದಿಕ್ – ನತಾಶಾ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಫೋಟೊಗಳನ್ನು ಹಂಚಿಕೊಂಡಿದ್ದರು. ಆದರೆ ಇತ್ತೀಚೆಗೆ ಬಂದಿರುವ ಮಾಹಿತಿ ಪ್ರಕಾರ ನತಾಶಾ ಹಾರ್ದಿಕ್ ಅವರ ಎಲ್ಲಾ ಹಳೆಯ ಫೋಟೋಗಳನ್ನು ಸೋಶಿಯಲ್ ಮೀಡಿಯಾ ಖಾತೆಯಿಂದೆ ತೆಗೆದು ಹಾಕಿದ್ದಾರೆ. ಇದಲ್ಲದೆ ಅವರು ಈ ಬಾರಿ ಐಪಿಎಲ್ ನಲ್ಲಿ ಮುಂಬೈ ತಂಡಕ್ಕೆ ಬೆಂಬಲವಾಗಿ ನತಾಶಾ ಬಂದಿಲ್ಲ ಎನ್ನಲಾಗಿದೆ.
ಇದು ಹಾರ್ದಿಕ್ – ನತಾಶಾ ನಡುವಿನ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡಿದೆ ಎನ್ನುವುದ್ದಕ್ಕೆ ಸಾಕ್ಷಿ ಎನ್ನಲಾಗುತ್ತಿದೆ. ಈ ನಡುವೆ ಪಾಂಡ್ಯ ಅವರು ತಮ್ಮ ಪತ್ನಿಯಿಂದ ವಿಚ್ಛೇದನ ಪಡೆದರೆ ಜೀವನಾಂಶದ ಕಾರಣದಿಂದಾಗಿ 70% ಆಸ್ತಿಯನ್ನು ಕಳೆದುಕೊಳ್ಳಬಹುದು ಎನ್ನುವ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಈ ಸುದ್ದಿ ಚರ್ಚೆಯಲ್ಲಿರುವಾಗಲೇ ನಟಿ ನತಾಶಾ ಮತ್ತೊಬ್ಬರ ಜೊತೆ ಕಾಣಿಸಿಕೊಂಡಿರುವ ಫೋಟೋ ಭಾರೀ ವೈರಲ್ ಆಗಿದೆ.
ನಟಿ ಕಂ ಮಾಡೆಲ್ ನತಾಶಾ ದಿಶಾ ಪಟಾನಿಯ ಗೆಳೆಯ ಎಂದು ಹೇಳಲಾಗುತ್ತಿರುವ ಅಲೆಕ್ಸಾಂಡರ್ ಅಲೆಕ್ಸ್ ಇಲಿಕ್ ಜೊತೆ ಕಾಣಿಸಿಕೊಂಡಿದ್ದಾರೆ.
ರೆಸ್ಟೋರೆಂಟ್ನಲ್ಲಿ ಇಬ್ಬರು ಭೇಟಿಯಾದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ನತಾಶಾ ಮತ್ತು ಅಲೆಕ್ಸ್ ಮುಂಬೈನ ರೆಸ್ಟೋರೆಂಟ್ ನಲ್ಲಿ ಜೊತೆಯಾಗಿ ಊಟ ಮಾಡಿದ್ದಾರೆ ಎನ್ನಲಾಗಿದೆ.
ಹಾರ್ದಿಕ್ – ನತಾಶಾ ವಿಚ್ಛೇದನ ಸುದ್ದಿಯ ನಡುವೆ ಈ ಭೇಟಿ ಹಲವು ಗೊಂದಲಗಳಿಗೆ ಹಾಗೂ ವದಂತಿಗಳಿಗೆ ಕಾರಣವಾಗಿದೆ. ಆದರೆ ಇದುವರೆಗೆ ಹಾರ್ದಿಕ್ ಪಾಂಡ್ಯ ಅಥವಾ ನತಾಶಾ ಅವರಾಗಲಿ, ಅವರ ಕುಟುಂಬವಾಗಲಿ ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
ಬಿಗ್ ಬಾಸ್ ಸೀಸನ್ -2 ನಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದ ನತಾಶಾ ಅಕ್ಷಯ್ ಕುಮಾರ್ ಅವರ ʼಹಾಲಿ ಡೇʼ ಸಿನಿಮಾದಲ್ಲಿ ಸಣ್ಣ ಪಾತ್ರವೊಂದನ್ನು ಮಾಡಿದ್ದರು. ಬಿಗ್ ಬಾಸ್ 14 ಖ್ಯಾತಿಯ ಅಲಿ ಗೋನಿ ಜೊತೆ ಡೇಟ್ ಮಾಡಿದ್ದ ಅವರು,ಕೆಲ ಭಿನ್ನಾಭಿಪ್ರಾಯಗಳಿಂದ ಬೇರ್ಪಟ್ಟಿದ್ದರು.
ಫುಕ್ರೆ ರಿಟರ್ನ್ಸ್ ಸಿನಿಮಾದಲ್ಲೂ ಸಣ್ಣ ಪಾತ್ರವನ್ನು ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ʼಚಂದು ಚಾಂಪಿಯನ್ʼಗೆ ಪಾಸಿಟಿವ್ ರೆಸ್ಪಾನ್ಸ್: ಮೊದಲ ದಿನ ಗಳಿಸಿದ್ದೆಷ್ಟು?
ಗಲಾಟೆ ವಿವಾದ: ವ್ಯಕ್ತಿ ವಿರುದ್ಧ ಕೇಸು ದಾಖಲಿಸಿದ ರವೀನಾ
ನಟಿ ಶಿಲ್ಪಾ ಶೆಟ್ಟಿ ದಂಪತಿ ವಿರುದ್ಧ 90 ಲಕ್ಷ ರೂ. ವಂಚನೆ ಆರೋಪ?
Kerala ಕಾಲೇಜಿನಲ್ಲಿ ನಟಿ ಸನ್ನಿ ಲಿಯೋನ್ ನೃತ್ಯ ಪ್ರದರ್ಶನ ರದ್ದು: ಕಾರಣ?
Bollywood: ಮತ್ತೆ ಸೀಕ್ವೆಲ್ ನತ್ತ ಮುಖಮಾಡಿದ ಸನ್ನಿ ಡಿಯೋಲ್: ʼಬಾರ್ಡರ್ -2ʼ ಅನೌನ್ಸ್
MUST WATCH
ಹೊಸ ಸೇರ್ಪಡೆ
Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ
Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ
Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ
Holalkere: ರಾಜ್ಯ ಸರ್ಕಾರ ಬೆಲೆ ಏರಿಕೆ ನೀತಿ ಖಂಡಿಸಿ ಗೋವಿಂದ ಕಾರಜೋಳ ಆಕ್ರೋಶ
Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.