ಅಂದು ‘ನೋ’ ಎಂದವಳು ಇಂದು ‘ಎಸ್’ ಅಂತಾಳಾ?  ಶಾರುಖ್ ಸಿನಿಮಾದಲ್ಲಿ ‘ಸೂಪರ್’ ಬೆಡಗಿ ?


Team Udayavani, Jun 25, 2021, 2:30 PM IST

023

ತಮಿಳಿನ ಖ್ಯಾತ ನಿರ್ದೇಶಕ ಅಟ್ಲೀ ಅವರು ಬಾಲಿವುಡ್ ಕಿಂಗ್ ಶಾರುಖ್ ಖಾನ್ ಹೊಸ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನುವುದು ಹಳೆಯ ಸುದ್ದಿ. ಹೊಸ ಅಪ್ಡೇಟ್ ಏನಪ್ಪಾ ಅಂದ್ರೆ, ಬಹುನಿರೀಕ್ಷಿತ ಈ ಸಿನಿಮಾಗೆ ಸೌತ್ ಸಿನಿ ರಂಗದ ಬಹುಬೇಡಿಕೆಯ ನಟಿಗೆ ಆಫರ್ ಮಾಡಲಾಗಿದೆಯಂತೆ.

ಹೌದು, ಸತತ ಸೋಲುಗಳ ಬಳಿಕ ಗೆಲುವು ಎದುರು ನೋಡುತ್ತಿರುವ ಕಿಂಗ್ ಖಾನ್ ಶಾರುಖ್, ಆಟ್ಲೀ ಜೊತೆ ಕೈ ಜೋಡಿಸಿದ್ದಾರೆ. ಕಳೆದ ವರ್ಷದಿಂದ ಈ ಸಿನಿಮಾ ಸಿನಿ ರಂಗದಲ್ಲಿ ಸದ್ದು ಮಾಡುತ್ತಿದೆ. ಬರುವ ಆಗಸ್ಟ್ ನಲ್ಲಿ ಚಿತ್ರೀಕರಣ ಶುರುವಾಗಲಿದೆ. ಸದ್ಯ ಪ್ರಿಪ್ರೊಡಕ್ಷನ್ ಕೆಲಸದಲ್ಲಿ ಬ್ಯುಝಿಯಾಗಿರುವ ನಿರ್ದೇಶಕರು, ತಾರಾಗಣದ ಆಯ್ಕೆಯಲ್ಲಿ ತೊಡಗಿಕೊಂಡಿದ್ದಾರೆ.

ಶಾರುಖ್ ಖಾನ್ ಅವರ ಈ ಹೊಸ ಚಿತ್ರಕ್ಕೆ ಲೇಡಿ ಸೂಪರ್ ಸ್ಟಾರ್ ನಯನತಾರಾ ಅವರಿಗೆ ಮೊದಲ ಆಫರ್ ಮಾಡಲಾಗಿದೆಯಂತೆ. ದಕ್ಷಿಣ ಭಾರತೀಯ ಸಿನಿಮಾರಂಗದ ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಮೊದಲಿಗರಾಗಿರುವ ನಯನತಾರಾ, ಮೊದಲ ಬಾರಿಗೆ ಶಾರುಖ್ ಚಿತ್ರಕ್ಕೆ ನಾಯಕಿಯಾಗಿ ಮಿಂಚಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.

ನಯನತಾರಾ ಈಗಾಗಲೇ ಅಟ್ಲೀ ಜೊತೆ ಕೆಲಸ ಮಾಡಿದ್ದಾರೆ. ತನ್ನ ವೃತ್ತಿ ಜೀವನದ ಅತೀ ದೊಡ್ಡ ಹಿಟ್ ಗಳಲ್ಲಿ ಒಂದಾಗಿರುವ ‘ರಾಜ ರಾಣಿ’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡಿದ್ದರು. ಬಳಿಕ ಅಟ್ಲೀ ಜೊತೆ ‘ಬಿಗಿಲ್’ ಸಿನಿಮಾದಲ್ಲೂ ಕೆಲಸ ಮಾಡಿದ್ದರು.

ಅಂದಹಾಗೆ ನಯನತಾರಾ ಈ ಹಿಂದೆಯೇ ಶಾರುಖ್ ಜೊತೆ ನಟಿಸಬೇಕಿತ್ತು. ಶಾರುಖ್ ಖಾನ್ ನಟನೆಯ ‘ಚೆನ್ನೈ ಎಕ್ಸ್ ಪ್ರೆಸ್’ ಸಿನಿಮಾದ ಹಾಡಿನಲ್ಲಿ ಕಾಣಿಸಿಕೊಳ್ಳಲು ನಯನತಾರಾಗೆ ಆಫರ್ ಮಾಡಲಾಗಿತ್ತು. ಆದರೆ ನಯನತಾರಾ ಅಂದು ಆ ಆಫರ್ ಅನ್ನು ತಿರಸ್ಕರಿಸಿದ್ರು ಎನ್ನುವ ಮಾತು ಕೇಳಿಬಂದಿತ್ತು. ಬಳಿಕ ಆ ಹಾಡಿಗೆ ದಕ್ಷಿಣದ ಮತ್ತೋರ್ವ ಖ್ಯಾತ ನಟಿ ಪ್ರಿಯಾಮಣಿ ಹೆಜ್ಜೆಹಾಕಿದ್ದರು.

ಇನ್ನು ನಯನತಾರಾ ಅವರು ಕನ್ನಡದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರ ಅಭಿನಯದ ‘ಸೂಪರ್’ ಸಿನಿಮಾದಲ್ಲಿಯೂ ನಟಿಸಿದ್ದಾರೆ.

ಇದೀಗ ಮತ್ತೆ ಶಾರುಖ್ ಜೊತೆ ನಟಿಸಲು ಗ್ರೀನ್ ಸಿಗ್ನಲ್ ಕೊಡುತ್ತಾರಾ ಎಂದು ಕಾದುನೋಡಬೇಕು. ಒಂದುವೇಳೆ ಶಾರುಖ್ ಮತ್ತು ನಯನತಾರಾ ಒಟ್ಟಿಗೆ ತೆರೆಮೇಲೆ ಬಂದರೆ ಅಭಿಮಾನಿಗಳಿಗೆ ದೊಡ್ಡ ಹಬ್ಬವಾಗಲಿದೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.