ಬಾಲಿವುಡ್ ನಟ ಅರ್ಜುನ್ ರಾಮ್ ಪಾಲ್ ನಿವಾಸ, ಕಚೇರಿ ಮೇಲೆ ಎನ್ ಸಿಬಿ ದಾಳಿ
ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಬಂಧಿತರಾಗಿದ್ದ ಡ್ರಗ್ಸ್ ಪೆಡ್ಲರ್ಸ್ ಜತೆ ಸಂಪರ್ಕ ಹೊಂದಿರುವುದು ಪತ್ತೆ
Team Udayavani, Nov 9, 2020, 3:35 PM IST
ಮುಂಬೈ: ಬಾಲಿವುಡ್ ನಟ ಅರ್ಜುನ್ ರಾಮ್ ಪಾಲ್ ಗೆ ಸೇರಿದ್ದ ಮುಂಬೈಯ ಅಂಧೇರಿ, ಖಾರ್ ಮತ್ತು ಬಾಂದ್ರಾದ ನಿವಾಸ ಮತ್ತು ಕಚೇರಿಗಳ ಮೇಲೆ ಎನ್ ಸಿಬಿ (ಮಾದಕ ವಸ್ತು ನಿಯಂತ್ರಣ ವಿಭಾಗ) ಅಧಿಕಾರಿಗಳು ಸೋಮವಾರ(ನವೆಂಬರ್ 09,2020) ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ಬಾಲಿವುಡ್ ನಿರ್ಮಾಪಕ ಫಿರೋಜ್ ನಾಡಿಯಾಡ್ವಾಲಾ ನಿವಾಸದ ಮೇಲೆ ದಾಳಿ ನಡೆಸಿದ್ದ ಎನ್ ಸಿಬಿ ಫಿರೋಜ್ ಪತ್ನಿಯನ್ನು ಬಂಧಿಸಿತ್ತು. ಅಲ್ಲದೇ ಮಾದಕ ವಸ್ತು ಗಾಂಜಾವನ್ನು ಮನೆಯಲ್ಲಿ ವಶಪಡಿಸಿಕೊಂಡಿತ್ತು ಎಂದು ವರದಿ ಹೇಳಿದೆ.
ನಾಡಿಯಾಡ್ವಾಲಾ ಪತ್ನಿಯ ಬಂಧನದ ಬೆನ್ನಲ್ಲೆ ನಟ ಅರ್ಜುನ್ ರಾಮ್ ಪಾಲ್ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆದಿದೆ. ಕಳೆದ ತಿಂಗಳು ಎನ್ ಸಿಬಿ ಅಧಿಕಾರಿಗಳು ಅರ್ಜುನ್ ರಾಮ್ ಪಾಲ್ ಗೆಳತಿ ಗೆಬ್ರಿಯೆಲ್ಲಾ ಸಹೋದರ ಅಗಿಸಿಲಾವೋಸ್ ಡೆಮೇಟ್ರಿಯೇಡ್ಸ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದ ವೇಳೆ ಈತ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಬಂಧಿತರಾಗಿದ್ದ ಡ್ರಗ್ಸ್ ಪೆಡ್ಲರ್ಸ್ ಜತೆ ಸಂಪರ್ಕ ಹೊಂದಿರುವುದು ಪತ್ತೆಯಾಗಿತ್ತು ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಶಂಕರ್ @66: ಬಹುಮುಖ ಪ್ರತಿಭೆಯ ನಟ ಶಂಕರ್ ನಾಗ್ ನೆನಪು ಅಜರಾಮರ
ಮುಂಬೈನ ನಿವಾಸದಲ್ಲಿ ಬಾಲಿವುಡ್ ನಟ ಸುಶಾಂತ್ ಸಿಂಗ್ ಜೂನ್ 14ರಂದು ತಮ್ಮ ನಿವಾಸದಲ್ಲಿ ನೇಣಿಗೆ ಶರಾಗಿದ್ದು, ಈ ಘಟನೆ ನಮತರ ಬಾಲಿವುಡ್ ನಲ್ಲಿರುವ ಡ್ರಗ್ ಮಾಫಿಯಾದ ನಂಟಿನ ವಿಷಯಗಳು ಹೊರಬರಲಾರಂಭಿಸಿದ್ದು, ಎನ್ ಸಿಬಿ ಜಾಲದ ಬೆನ್ನುಹಿಡಿದು ತನಿಖೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ