ಚಿತ್ರೀಕರಣಕ್ಕೆ ಹೊಸ ಮಾರ್ಗಸೂಚಿ: ಸಿನೆಮಾದಲ್ಲಿ ಚುಂಬನ, ಆಲಿಂಗನಕ್ಕೆ ಕೋವಿಡ್ ಸೆನ್ಸಾರ್‌!

ಚಿತ್ರೀಕರಣಕ್ಕೆ ಹೊಸ ಮಾರ್ಗಸೂಚಿ ಪ್ರಕಟಿಸಿದ ನಿರ್ಮಾಪಕರ ಸಂಘ ; ನಿತ್ಯ ಅಭ್ಯಾಸಕ್ಕೂ ಹಲವು ನಿಯಮ ಜಾರಿ

Team Udayavani, May 29, 2020, 7:10 AM IST

ಚಿತ್ರೀಕರಣಕ್ಕೆ ಹೊಸ ಮಾರ್ಗಸೂಚಿ: ಸಿನೆಮಾದಲ್ಲಿ ಚುಂಬನ, ಆಲಿಂಗನಕ್ಕೆ ಕೋವಿಡ್ ಸೆನ್ಸಾರ್‌!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಚಲನಚಿತ್ರದ ನಾಯಕ, ನಾಯಕಿ ಪರಸ್ಪರ ಆಲಿಂಗಿಸದೆ, ಮುತ್ತಿಟ್ಟು ಮುದ್ದಾಡದೆ, ಕನಿಷ್ಠ ಮೈ ಕೈ ಕೂಡ ತಾಗಿಸದಂತೆ ನಟಿಸುವುದು, ರೊಮ್ಯಾಂಟಿಕ್‌ ಹಾಡುಗಳಿಗೆ ದೂರದಲ್ಲಿ ನಿಂತು ನರ್ತಿಸುವುದನ್ನೊಮ್ಮೆ ಊಹಿಸಿಕೊಳ್ಳಿ…

ನಿಮಗೆ 50, 60ರ ದಶಕದ ಸಿನಿಮಾಗಳು ನೆನಪಾಗಿರಲೇಬೇಕು. ಆದರೆ, ಎರಡು ತಿಂಗಳ ಬಳಿಕ ಚಿತ್ರೀಕರಣ ಮರು ಆರಂಭಿಸಲಿರುವ ಚಿತ್ರರಂಗ ಹಾಗೂ ಕಿರುತೆರೆ ಉದ್ಯಮ ಇದೇ ರೀತಿ ಚಿತ್ರೀಕರಣ ನಡೆಸುವ ಪರಿಸ್ಥಿತಿ ಎದುರಾಗಿದೆ, ಕಾರಣ, ಕೋವಿಡ್!

ಕೋವಿಡ್ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಮನೋರಂಜನಾ ಉದ್ಯಮ ತನ್ನ ಚಟುವಟಿಕೆಗಳನ್ನು ಆರಂಭಿಸುವ ಮುನ್ನ ಚಿತ್ರೀಕರಣದ ಸ್ಥಳದಲ್ಲಿ ನಟ, ನಟಿಯರು, ಕಲಾವಿದರು, ತಂತ್ರಜ್ಞರು ಮತ್ತಿತರ‌ ವೃತ್ತಿಪರ ಸಿಬಂದಿ ಪಾಲಿಸಬೇಕಿರುವ ಸಾಮಾನ್ಯ ಅಭ್ಯಾಸಗಳ ಕುರಿತು ಭಾರತೀಯ ನಿರ್ಮಾಪಕರ ಸಂಘ 37 ಪುಟಗಳ ಹೊಸ ಕಾರ್ಯನಿರ್ವಹಣೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಿದೆ. ಉದ್ಯಮದ ಪಾಲುದಾರರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಜೊತೆ ವೀಡಿಯೋ ಕಾನ್ಫರೆನ್ಸ್‌ ಮೂಲಕ ಚರ್ಚೆ ನಡೆಸಿದ ಎರಡು ದಿನಗಳ ಬಳಿಕ ಈ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಕಲಾವಿದರು, ಸಿಬಂದಿಗೆ ಕೆಲವು ನಿತ್ಯ ಅಭ್ಯಾಸಗಳ ಸಲಹೆ ನೀಡಲಾಗಿದೆ. ಅದರಂತೆ, 45 ನಿಮಿಷ ಮೊದಲೇ ಸೆಟ್‌ಗೆ ಬರಬೇಕು, ಸಾಮಾಜಿಕ ಅಂತರ ಪಾಲಿಸಲು ನೆಲದ ಮೇಲೆ ಮಾರ್ಕಿಂಗ್‌ ಮಾಡಬೇಕು, ಸ್ನಾನ, ಕೈತೊಳೆಯುವಿಕೆಗೆ, ಸ್ವಚ್ಛತೆಗೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಲಾಗಿದೆ.

ಇನ್ನೊಂದೆಡೆ ಕೇಶ ವಿನ್ಯಾಸ, ಮೇಕಪ್‌ ಸಂದರ್ಭದಲ್ಲಿ ಉತ್ಪನ್ನಗಳನ್ನು ಒಮ್ಮೆ ಮಾತ್ರ ಬಳಸಬೇಕು, ವಿಗ್‌ಗಳನ್ನು ಬಳಕೆಗೆ ಮುನ್ನ, ಬಳಸಿದ ಬಳಿಕ ಸ್ವಚ್ಛಗೊಳಿಸಬೇಕು, ಸ್ವಂತ ಮೇಕಪ್‌ ಕಿಟ್‌ ಬಳಸಬೇಕು, ಮೇಕಪ್‌ ಮಾಡುವಾಗ ಮಾಸ್ಕ್ ಬದಲು ಫೇಸ್‌ ಶೀಲ್ಡ್‌ಗಳನ್ನು ಧರಿಸಲು ಸಲಹೆ ನೀಡಲಾಗಿದೆ.

ಸುರಕ್ಷತಾ ಸಲಹೆಗಳೇನು?

– ಎಲ್ಲರೂ ಮುಖಕ್ಕೆ ಮೂರು ಪದರಗಳ ವೈದ್ಯಕೀಯ ಮಾಸ್ಕ್, ಕೈಗವಸು ಧರಿಸುವುದು ಕಡ್ಡಾಯ

– ಚುಂಬನ, ಆಲಿಂಗನ, ಕೈಕುಲುಕುವುದು ಸೇರಿ ಯಾವುದೇ ರೀತಿಯ ದೈಹಿಕ ಶುಭಾಶಯಗಳಿಗೆ ಅವಕಾಶವಿಲ್ಲ

– ಸಹೋದ್ಯೋಗಿಗಳ ನಡುವೆ ಕನಿಷ್ಠ ಎರಡು ಮೀಟರ್‌ ಅಂತರ ಕಡ್ಡಾಯ

– ಚಿತ್ರೀಕರಣದ ಸೆಟ್‌, ಕಚೇರಿ, ಸ್ಟುಡಿಯೋಗಳಲ್ಲಿ ಸಿಗರೇಟ್‌ ಶೇರ್‌ ಮಾಡುವಂತಿಲ್ಲ

– 60 ವರ್ಷ ಮೇಲ್ಪಟ್ಟ ಕಲಾವಿದರು, ಸಿಬ್ಬಂದಿಯನ್ನು ಕನಿಷ್ಠ ಮೂರು ತಿಂಗಳು ಸೆಟ್‌ಗೆ ಕರೆಸುವಂತಿಲ್ಲ

ಟಾಪ್ ನ್ಯೂಸ್

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

13

“ದೊಡ್ಡ ಸೌತ್‌ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್‌ ಜೊತೆ ಬೇಬೋ ನಟಿಸೋದು ಪಕ್ಕಾ?

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಆಸ್ಪತ್ರೆ ವರದಿ ಹೇಳಿದ್ದನು

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.