![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ರಾಕಿಂಗ್ ಸ್ಟಾ ರ್ ಯಶ್ ಬರ್ತ್ಡೇಗೆ ಕೆಜಿಎಫ್-2 ಟೀಸರ್ ಇಲ್ಲ
Team Udayavani, Jan 7, 2020, 10:36 AM IST
![cinema-tdy-02](https://www.udayavani.com/wp-content/uploads/2020/01/cinema-tdy-02-620x372.jpg)
“ದಯವಿಟ್ಟು ಕ್ಷಮಿಸಿ…’ – ಹೀಗೆ ಕ್ಷಮೆ ಕೇಳಿರೋದು “ಕೆಜಿಎಫ್’ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್. ಅಷ್ಟಕ್ಕೂ ಅವರು ಕ್ಷಮೆ ಕೇಳಲು ಕಾರಣ. ಯಶ್ ಬರ್ತ್ಡೇಗೆ ಟೀಸರ್ ಬಿಡುಗಡೆ ಯಾಗದಿರುವುದು.
ಹೌದು, ಜನವರಿ 8 ರಂದು ಯಶ್ ಬರ್ತ್ ಡೇ. ಹಾಗಾಗಿ, ಅಂದು “ಕೆಜಿಎಫ್ 2′ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ ಎಂಬ ಸುದ್ದಿ ಇತ್ತು. ಆದರೆ, ಯಶ್ ಹುಟ್ಟುಹಬ್ಬದ ದಿನ “ಕೆಜಿಎಫ್ 2′ ಚಿತ್ರದ ಟೀಸರ್ ಬಿಡುಗಡೆಯಾಗುತ್ತಿಲ್ಲ. ಯಶ್ ಅಭಿಮಾನಿಗಳು ಟೀಸರ್ ಬಿಡುಗಡೆಯಾಗಲಿದೆ ಎಂಬ ಖುಷಿಯಲ್ಲಿದ್ದರು. ಆದರೆ, ಬಿಡುಗಡೆಯಾಗುವುದಿಲ್ಲ ಎಂಬ ಸುದ್ದಿಯನ್ನು ಸ್ವತಃ ನಿರ್ದೇಶಕ ಪ್ರಶಾಂತ್ ನೀಲ್ ಅವರೇ ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ಪ್ರಶಾಂತ್ ನೀಲ್ ತಮ್ಮ ಟ್ವಿಟ್ಟರ್ನಲ್ಲಿ ಟ್ವೀಟ್ ಮಾಡಿದ್ದಾರೆ.
“ಕೆ.ಜಿ.ಎಫ್ 2′ ಚಿತ್ರದ ಟೀಸರ್ ಜನವರಿ 8 ರಂದು ಬಿಡುಗಡೆ ಆಗುತ್ತಿಲ್ಲ. ಯಾಕಂದರೆ, ಜನವರಿ 6 ರವರೆಗೂ ಶೂಟಿಂಗ್ ನಡೆಯಲಿದೆ. ನಾವೆಲ್ಲರೂ ವಾಪಸ್ ಬರುವುದೇ ಜನವರಿ 7 ರಂದು. “ಕೆ.ಜಿ.ಎಫ್ 2′ ಬಗ್ಗೆ ನೀವೆಲ್ಲ ತೋರಿಸುತ್ತಿರುವ ಪ್ರೀತಿ ಮತ್ತು ನಿರೀಕ್ಷೆ ತುಂಬಾ ದೊಡ್ಡದು. ಹೀಗಾಗಿ, ಚಿತ್ರದ ಔಟ್ ಕಮ್ ಬಗ್ಗೆ ನಾವು ರಾಜಿ ಆಗುವುದಿಲ್ಲ. ನಿಮಗೆ ಅತ್ಯುತ್ತಮವಾದುದ್ದನ್ನು ನೀಡಲು ನಾವು ಮುಂದಾಗಿದ್ದೇವೆ. ದಯವಿಟ್ಟು ಕ್ಷಮಿಸಿ’ ಎಂದು ಪ್ರಶಾಂತ್ ನೀಲ್ ಬರೆದುಕೊಂಡಿದ್ದಾರೆ.
ಬರ್ತ್ಡೇ ಟೀಸರ್ ಬದಲು ಯಶ್ ಅವರ ಹುಟ್ಟುಹಬ್ಬದ ದಿನ “ಕೆ.ಜಿ.ಎಫ್ 2′ ಚಿತ್ರದ ಸೆಕೆಂಡ್ ಲುಕ್ ಪೋಸ್ಟರ್ ಬಿಡುಗಡೆ ಆಗಲಿದೆ ಎಂಬುದನ್ನು ಪ್ರಶಾಂತ್ ನೀಲ್ ಸ್ಪಷ್ಟಪಡಿಸಿದ್ದಾರೆ. ಪ್ರಶಾಂತ್ ನೀಲ್ ಅವರ ಈ ಸ್ಪಷ್ಟನೆಗೆ ಯಶ್ ಅಭಿಮಾನಿಗಳು ಫುಲ್ ಗರಂ ಆಗಿರು ವುದೂ ಉಂಟು. ಕಾರಣ, ಯಶ್ ಹುಟ್ಟುಹಬ್ಬಕ್ಕೆ ಜೋರು ತಯಾರಿ ಮಾಡಿಕೊಂಡಿರುವ ಅಭಿಮಾನಿಗಳು, ಅಂದು “ಕೆಜಿಎಫ್ 2′ ಚಿತ್ರದ ಟೀಸರ್ ನೋಡುವ ಕಾತುರದಲ್ಲಿದ್ದರು. ಆದರೆ, ಟೀಸರ್ ಬರುತ್ತಿಲ್ಲ ಎಂಬ ವಿಷಯ ಕೇಳಿದ ಅನೇಕ ಅಭಿಮಾನಿಗಳು, ಟ್ವೀಟ್ ಮೂಲಕ ಕಾಮೆಂಟ್ ಮಾಡುತ್ತಿದ್ದಾರೆ.
“ಯಶ್ ಅಭಿಮಾನಿಗಳಿಗೆ ಈ ರೀತಿ ನಿರಾಸೆ ಮೂಡಿಸಿದ್ದು ಸರಿಯಲ್ಲ’ ಎಂದು ಹಲವು ಬರೆದುಕೊಂಡರೆ, ಇನ್ನೂ ಕೆಲವರು ಏನಾದರೂ ಮಾಡಿ, ಟೀಸರ್ ಬಿಡುಗಡೆ ಮಾಡಲೇಬೇಕು ಎಂದು ಒತ್ತಾಯವನ್ನೂ ಮಾಡಿದ್ದಾರೆ. ಅದೇನೆ ಇರಲಿ, ಯಶ್ ಬರ್ತ್ಡೇ ಆಚರಿಸಲು ಅಣಿಯಾಗುತ್ತಿರುವ ಅಭಿಮಾನಿಗಳು, ನಾಯಂಡಹಳ್ಳಿ ಸಮೀ ಪದ ನಂದಿ ಲಿಂಕ್ ಗ್ರೌಂಡ್ಸ್ನಲ್ಲಿ ಅದ್ಧೂರಿ ಹುಟ್ಟುಹಬ್ಬ ಆಚರಿಸಲು ವೇದಿಕೆ ಸಿದ್ಧ ಪಡಿಸುತ್ತಿದ್ದಾರೆ. ಐದು ಸಾವಿರ ಕೆ.ಜಿ ಕೇಕ್ ನಿರ್ಮಿಸಿ, ಕತ್ತರಿಸುವ ತಯಾರಿಯೂ ಜೋರಾಗಿದ್ದು, ಅಂದು ಸುಮಾರು 20 ಸಾವಿರ ಅಭಿಮಾನಿಗಳು ಅಲ್ಲಿ ಸೇರುವ ನಿರೀಕ್ಷೆ ಇದೆ. ಅಖೀಲ ಭಾರತ ಯಶ್ ಅಭಿಮಾನಿಗಳ ಸಂಘದ ನೇತೃತ್ವದಲ್ಲಿ ಬರ್ತ್ಡೇಕಾರ್ಯಕ್ರಮ ನಡೆಯಲಿದ್ದು, ಅಂದು ಬೃಹತ್ ಎತ್ತರದ ಕಟೌಟ್ ಹಾಕಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ](https://www.udayavani.com/wp-content/uploads/2024/07/10-19-150x90.jpg)
Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ
![Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್ ರಾವ್](https://www.udayavani.com/wp-content/uploads/2024/07/Kiran-Rao-150x99.jpg)
Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್ ರಾವ್
![1-nati](https://www.udayavani.com/wp-content/uploads/2024/07/1-nati-150x81.jpg)
Contact lenses ಧರಿಸಿದ ನಟಿಗೆ ಈಗ ಕಣ್ಣೇ ಕಾಣಿಸ್ತಿಲ್ಲ!
![ಅರ್ಜುನ್ ಜತೆ ಬ್ರೇಕಪ್ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್ʼ ಎಂಟ್ರಿ?](https://www.udayavani.com/wp-content/uploads/2024/07/tdy-3-150x90.jpg)
ಅರ್ಜುನ್ ಜತೆ ಬ್ರೇಕಪ್ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್ʼ ಎಂಟ್ರಿ?
![1428](https://www.udayavani.com/wp-content/uploads/2024/07/1428-150x90.jpg)
Viral: ಖ್ಯಾತ ನಟಿಯ ಬಾತ್ರೂಮ್ ವಿಡಿಯೋ ಲೀಕ್.. ನಟಿಯಿಂದಲೇ ವಿಡಿಯೋ ರೆಕಾರ್ಡ್?
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.