ರಾಕಿಂಗ್‌ ಸ್ಟಾ ರ್‌ ಯಶ್‌ ಬರ್ತ್‌ಡೇಗೆ ಕೆಜಿಎಫ್-2 ಟೀಸರ್‌ ಇಲ್ಲ


Team Udayavani, Jan 7, 2020, 10:36 AM IST

cinema-tdy-02

“ದಯವಿಟ್ಟು ಕ್ಷಮಿಸಿ…’ – ಹೀಗೆ ಕ್ಷಮೆ ಕೇಳಿರೋದು “ಕೆಜಿಎಫ್’ ಖ್ಯಾತಿಯ ನಿರ್ದೇಶಕ ಪ್ರಶಾಂತ್‌ ನೀಲ್‌. ಅಷ್ಟಕ್ಕೂ ಅವರು ಕ್ಷಮೆ ಕೇಳಲು ಕಾರಣ. ಯಶ್‌ ಬರ್ತ್‌ಡೇಗೆ ಟೀಸರ್‌ ಬಿಡುಗಡೆ ಯಾಗದಿರುವುದು.

ಹೌದು, ಜನವರಿ 8 ರಂದು ಯಶ್‌ ಬರ್ತ್ ಡೇ. ಹಾಗಾಗಿ, ಅಂದು “ಕೆಜಿಎಫ್ 2′ ಚಿತ್ರದ ಟೀಸರ್‌ ಬಿಡುಗಡೆ ಆಗಲಿದೆ ಎಂಬ ಸುದ್ದಿ ಇತ್ತು. ಆದರೆ, ಯಶ್‌ ಹುಟ್ಟುಹಬ್ಬದ ದಿನ “ಕೆಜಿಎಫ್ 2′ ಚಿತ್ರದ ಟೀಸರ್‌ ಬಿಡುಗಡೆಯಾಗುತ್ತಿಲ್ಲ. ಯಶ್‌ ಅಭಿಮಾನಿಗಳು ಟೀಸರ್‌ ಬಿಡುಗಡೆಯಾಗಲಿದೆ ಎಂಬ ಖುಷಿಯಲ್ಲಿದ್ದರು. ಆದರೆ, ಬಿಡುಗಡೆಯಾಗುವುದಿಲ್ಲ ಎಂಬ ಸುದ್ದಿಯನ್ನು ಸ್ವತಃ ನಿರ್ದೇಶಕ ಪ್ರಶಾಂತ್‌ ನೀಲ್‌ ಅವರೇ ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ಪ್ರಶಾಂತ್‌ ನೀಲ್‌ ತಮ್ಮ ಟ್ವಿಟ್ಟರ್‌ನಲ್ಲಿ ಟ್ವೀಟ್‌ ಮಾಡಿದ್ದಾರೆ.

“ಕೆ.ಜಿ.ಎಫ್ 2′ ಚಿತ್ರದ ಟೀಸರ್‌ ಜನವರಿ 8 ರಂದು ಬಿಡುಗಡೆ ಆಗುತ್ತಿಲ್ಲ. ಯಾಕಂದರೆ, ಜನವರಿ 6 ರವರೆಗೂ ಶೂಟಿಂಗ್‌ ನಡೆಯಲಿದೆ. ನಾವೆಲ್ಲರೂ ವಾಪಸ್‌ ಬರುವುದೇ ಜನವರಿ 7 ರಂದು. “ಕೆ.ಜಿ.ಎಫ್ 2′ ಬಗ್ಗೆ ನೀವೆಲ್ಲ ತೋರಿಸುತ್ತಿರುವ ಪ್ರೀತಿ ಮತ್ತು ನಿರೀಕ್ಷೆ ತುಂಬಾ ದೊಡ್ಡದು. ಹೀಗಾಗಿ, ಚಿತ್ರದ ಔಟ್‌ ಕಮ್‌ ಬಗ್ಗೆ ನಾವು ರಾಜಿ ಆಗುವುದಿಲ್ಲ. ನಿಮಗೆ ಅತ್ಯುತ್ತಮವಾದುದ್ದನ್ನು ನೀಡಲು ನಾವು ಮುಂದಾಗಿದ್ದೇವೆ. ದಯವಿಟ್ಟು ಕ್ಷಮಿಸಿ’ ಎಂದು ಪ್ರಶಾಂತ್‌ ನೀಲ್‌ ಬರೆದುಕೊಂಡಿದ್ದಾರೆ.

ಬರ್ತ್‌ಡೇ ಟೀಸರ್‌ ಬದಲು ಯಶ್‌ ಅವರ ಹುಟ್ಟುಹಬ್ಬದ ದಿನ “ಕೆ.ಜಿ.ಎಫ್ 2′ ಚಿತ್ರದ ಸೆಕೆಂಡ್‌ ಲುಕ್‌ ಪೋಸ್ಟರ್‌ ಬಿಡುಗಡೆ ಆಗಲಿದೆ ಎಂಬುದನ್ನು ಪ್ರಶಾಂತ್‌ ನೀಲ್‌ ಸ್ಪಷ್ಟಪಡಿಸಿದ್ದಾರೆ. ಪ್ರಶಾಂತ್‌ ನೀಲ್‌ ಅವರ ಈ ಸ್ಪಷ್ಟನೆಗೆ ಯಶ್‌ ಅಭಿಮಾನಿಗಳು ಫ‌ುಲ್‌ ಗರಂ ಆಗಿರು ವುದೂ ಉಂಟು. ಕಾರಣ, ಯಶ್‌ ಹುಟ್ಟುಹಬ್ಬಕ್ಕೆ ಜೋರು ತಯಾರಿ ಮಾಡಿಕೊಂಡಿರುವ ಅಭಿಮಾನಿಗಳು, ಅಂದು “ಕೆಜಿಎಫ್ 2′ ಚಿತ್ರದ ಟೀಸರ್‌ ನೋಡುವ ಕಾತುರದಲ್ಲಿದ್ದರು. ಆದರೆ, ಟೀಸರ್‌ ಬರುತ್ತಿಲ್ಲ ಎಂಬ ವಿಷಯ ಕೇಳಿದ ಅನೇಕ ಅಭಿಮಾನಿಗಳು, ಟ್ವೀಟ್‌ ಮೂಲಕ ಕಾಮೆಂಟ್‌ ಮಾಡುತ್ತಿದ್ದಾರೆ.

“ಯಶ್‌ ಅಭಿಮಾನಿಗಳಿಗೆ ಈ ರೀತಿ ನಿರಾಸೆ ಮೂಡಿಸಿದ್ದು ಸರಿಯಲ್ಲ’ ಎಂದು ಹಲವು ಬರೆದುಕೊಂಡರೆ, ಇನ್ನೂ ಕೆಲವರು ಏನಾದರೂ ಮಾಡಿ, ಟೀಸರ್‌ ಬಿಡುಗಡೆ ಮಾಡಲೇಬೇಕು ಎಂದು ಒತ್ತಾಯವನ್ನೂ ಮಾಡಿದ್ದಾರೆ. ಅದೇನೆ ಇರಲಿ, ಯಶ್‌ ಬರ್ತ್‌ಡೇ ಆಚರಿಸಲು ಅಣಿಯಾಗುತ್ತಿರುವ ಅಭಿಮಾನಿಗಳು, ನಾಯಂಡಹಳ್ಳಿ ಸಮೀ ಪದ ನಂದಿ ಲಿಂಕ್‌ ಗ್ರೌಂಡ್ಸ್‌ನಲ್ಲಿ ಅದ್ಧೂರಿ ಹುಟ್ಟುಹಬ್ಬ ಆಚರಿಸಲು ವೇದಿಕೆ ಸಿದ್ಧ ಪಡಿಸುತ್ತಿದ್ದಾರೆ. ಐದು ಸಾವಿರ ಕೆ.ಜಿ ಕೇಕ್‌ ನಿರ್ಮಿಸಿ, ಕತ್ತರಿಸುವ ತಯಾರಿಯೂ ಜೋರಾಗಿದ್ದು, ಅಂದು ಸುಮಾರು 20 ಸಾವಿರ ಅಭಿಮಾನಿಗಳು ಅಲ್ಲಿ ಸೇರುವ ನಿರೀಕ್ಷೆ ಇದೆ. ಅಖೀಲ ಭಾರತ ಯಶ್‌ ಅಭಿಮಾನಿಗಳ ಸಂಘದ ನೇತೃತ್ವದಲ್ಲಿ ಬರ್ತ್‌ಡೇಕಾರ್ಯಕ್ರಮ ನಡೆಯಲಿದ್ದು, ಅಂದು ಬೃಹತ್‌ ಎತ್ತರದ ಕಟೌಟ್‌ ಹಾಕಲು ನಿರ್ಧರಿಸಲಾಗಿದೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.